ಶಿವರಾತ್ರಿಯಂದು ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಹೋದ ವ್ಯಕ್ತಿ ನಾಪತ್ತೆ
Team Udayavani, Mar 10, 2022, 4:55 PM IST
ಕೊಟ್ಟಿಗೆಹಾರ : ಕಳೆದ ಶಿವರಾತ್ರಿಯಂದು ಧರ್ಮಸ್ಥಳಕ್ಕೆ ಪಾದಯಾತ್ರೆಗೆ ತೆರಳಿ ಕೊಟ್ಟಿಗೆಹಾರದವರೆಗೆ ನಡೆದು ಬಂದ ವ್ಯಕ್ತಿ ನಾಪತ್ತೆಯಾಗಿದ್ದಾರೆ.
ಹಾಸನ ತಾಲ್ಲೂಕಿನ ಶಾಂತಿಗ್ರಾಮದ ಗಂಗಾದರ (50)ವರ್ಷದವರಾಗಿದ್ದು ಕಳೆದ ಫೆ. 27ರಂದು ತಮ್ಮ ಊರಿನವರ ಜೊತೆ ಪಾದಯಾತ್ರೆ ತೆರಳಿ ಕೊಟ್ಟಿಗೆಹಾರದ ನಿಸರ್ಗ ಹೋಟೇಲು ಬಳಿ ತಮ್ಮ ಊರಿನವರ ಜೊತೆ ತಂಗಿದ್ದರು. ನಂತರ ಮಾರನೇ ದಿನ ಮುಂಜಾನೆ 3 ಗಂಟೆ ಹೊತ್ತಿಗೆ ತಮ್ಮ ಊರಿನವರು ಅಲ್ಲಿಂದ ಪಾದಯಾತ್ರೆಗೆ ಹೊರಡಲು ಸಿದ್ದವಾದರು. ಆದರೆ ಗಂಗಾಧರ ಅವರು ಶೌಚಕ್ಕೆ ಹೋಗಿ ಬರುವುದಾಗಿ ಹೇಳಿದರು. ಆದರೆ ಅರ್ಧ ಗಂಟೆ ಕಳೆದರೂ ಬಾರದೇ ಇದ್ದುದರಿಂದ ರಸ್ತೆಯಲ್ಲಿ ತುಂಬಾ ಪಾದಯಾತ್ರಿಗಳ ಓಡಾಟ ಇದ್ದರಿಂದ ಅವರ ಜೊತೆ ಬರಬಹುದೆಂದು ಶಂಕಿಸಿ ಊರಿನವರು ಪಾದಯಾತ್ರೆ ಬೆಳೆಸಿದರು.
ಆದರೆ ಗಂಗಾದರ್ ಮಾತ್ರ ಧರ್ಮಸ್ಥಳಕ್ಕೂ ಬಾರದೇ ಮನೆಗೂ ಬಾರದೇ ನಾಪತ್ತೆಯಾಗಿದ್ದಾರೆ. ಅವರ ಪತ್ನಿ ಮೊಬೈಲ್ಗೆ ಕರೆ ಮಾಡಿದರೂ ಮೊಬೈಲ್ ಸ್ವಿಚ್ಚ್ ಆಫ್ ಆಗಿದ್ದುದ್ದರಿಂದ ಮನೆಗೆ ಬರಬಹುದೆಂದು ಭಾವಿಸಿದ್ದರು. ಆದರೆ ಅವರ ಊರಿನ ಆನಂದ ಎಂಬವವರು ಧರ್ಮಸ್ಥಳ ಪಾದಯಾತ್ರೆ ಮುಗಿಸಿ ಮನೆಗೆ ಬಂದಾಗ ಅವರು ಮನೆಗೆ ಬಂದಿಲ್ಲ ಎಂಬ ವಿಷಯ ತಿಳಿದು ಪತ್ನಿ ಜಯಂತಿ ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿರುವ ಪೊಲೀಸರು ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ. ವ್ಯಕ್ತಿ ಕಂಡು ಬಂದರೆ 9480805151 ಸಂಪರ್ಕಿಸಲು ಕೋರಿದೆ.
ಇದನ್ನೂ ಓದಿ : ಸದ್ಯದಲ್ಲೇ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದ ಸಾಮರ್ಥ್ಯ ಪ್ರದರ್ಶನ: ಪೃಥ್ವಿ ರೆಡ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.