Kannada: ಗಡಿನಾಡ ಕನ್ನಡಿಗರಿಗಾಗಿ ತೋರಬೇಕಿದೆ ಮತ್ತಷ್ಟು ಕಾಳಜಿ


Team Udayavani, Nov 1, 2023, 11:50 PM IST

kannada

ಕರ್ನಾಟಕದ 19 ಜಿಲ್ಲೆಗಳು ಹಾಗೂ 3 ತಾಲೂಕುಗಳಿಗೆ ವ್ಯಾಪಿಸಿರುವ ಕರ್ನಾಟಕದ ಗಡಿ ಭಾಗಗಳು ಹಾಗೂ ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿನ ಗಡಿ ಭಾಗಗಳಲ್ಲಿ ತಮ್ಮ ಬದುಕು ರೂಪಿಸಿಕೊಂಡಿರುವ ಕನ್ನಡಿಗರಿಗೆ ಸಂಘ ಸಂಸ್ಥೆಗಳಿಗೆ ಸಾಂಸ್ಕೃತಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಗತ್ಯವಾದ ಮೂಲಸೌಲಭ್ಯಗಳನ್ನು ಒದಗಿಸು ವುದರ ಜತೆಗೆ ಅಲ್ಲಿನ ಜನರಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ, ಅಭಿಮಾನ ಮತ್ತು ಗೌರವ ಮೂಡುವಂತೆ ಮಾಡುವ ದಿಸೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಅಲ್ಲಿಂದ ಇಲ್ಲಿಯವರೆಗೆ ತನ್ನ ಆರ್ಥಿಕ ಇತಿಮಿತಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಾ ಬಂದಿದೆ.

ಕೇರಳದ ಕಾಸರಗೋಡುವಿನಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಮಾನ್ಯತೆ ನೀಡಬೇಕು, ಅಲ್ಲಿನ ದೈನಂದಿನ ವ್ಯವಹಾರವೂ ಕನ್ನಡದಲ್ಲೇ ನಡೆಯಬೇಕು ಎಂಬುದು ನನ್ನ ಒತ್ತಾಸೆಯಾಗಿದ್ದು, ಇದಕ್ಕೆ ಅಲ್ಲಿನ ಕೇರಳ ಸರಕಾರವೂ ಸ್ಪಂದಿಸಿತ್ತು. ಆದರೆ ಅನಂತರದಲ್ಲಿ ಸಂಪೂರ್ಣವಾಗಿ ಜಾರಿಗೆ ಬರಲಿಲ್ಲ. ಮಲಯಾಳ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರಕಾರಿ ಉದ್ಯೋಗ ಎಂಬುದೂ ಕನ್ನಡಿಗರಿಗೆ ಸಮಸ್ಯೆಯಾಗಿ ಕಾಡುತ್ತಿದೆ. ಜತೆಗೆ ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಹೆಸರನ್ನು ಏಕಾಏಕಿ ಬದಲಾವಣೆ ಮಾಡಿದ ವಿಷಯವೂ ತುಂಬಾ ಆತಂಕಕಾರಿಯಾಗಿದೆ.

ಮಹಾರಾಷ್ಟ್ರವು ಪದೇ ಪದೆ ರಾಜ್ಯದಲ್ಲಿನ 865 ಗ್ರಾಮಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹುನ್ನಾರ ಮಾಡುತ್ತಲೇ ಇದೆ. ಮಹಾರಾಷ್ಟ್ರದ ಈ ಪುಂಡಾಟಕ್ಕೆ ತಡೆ ತರಬೇಕಾದ ಅಗತ್ಯತೆ ಇದ್ದು, ಸರಕಾರ ಸದಾ ಎಚ್ಚರದಿಂದ ಇರಬೇಕಾಗಿದೆ.

ಗೋವಾದಲ್ಲಿ ಸಮುದ್ರ ತೀರದಲ್ಲಿದ್ದ ಸಾವಿರಾರು ಕನ್ನಡಿಗರ ವಸತಿ ಪ್ರದೇಶ ನಾಶ ಮಾಡಿ ಗೋವಾ ಸಮಗ್ರ ನಿರ್ಮಾಣದಲ್ಲಿ ತಮ್ಮ ಶ್ರಮವನ್ನು ಧಾರೆ ಎರದಿದ್ದ ಅಲ್ಲಿನ ಕನ್ನಡಿಗರನ್ನು ನಿರ್ವಸಿತರನ್ನಾಗಿ ಮಾಡಿರುವ ಸಮಸ್ಯೆ ಇನ್ನು ಜೀವಂತವಾಗಿದೆ. ಅವರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯ ಅಲ್ಲಿನ ಸರಕಾರದಿಂದ ಆಗಬೇಕಿದೆ.

ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಕನ್ನಡಿಗರಿಗೆ ಅಂಥ ಭಾಷಾ ಅಭದ್ರತೆ ಕಾಣಿಸದಿದ್ದರೂ, ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಈ ಬಗ್ಗೆ ಅಲ್ಲಿನ ಸರಕಾರಗಳು ಗಮನಹರಿಸಬೇಕಾಗಿದೆ.

ಮಹಾರಾಷ್ಟ್ರದ ಮುಂಬಯಿಯಲ್ಲಿ ಹಾಗೂ ಗೋವಾದಲ್ಲಿ ಅನೇಕ ಕನ್ನಡ ಸಂಘಗಳು ಕನ್ನಡ ಪರ ಕಾರ್ಯಕ್ರಮಗಳನ್ನು ಅತ್ಯಂತ ಬೃಹತ್‌ ಮಟ್ಟದಲ್ಲಿ ಆಯೋಜಿಸುತ್ತಾ ಅಲ್ಲಿನ ಕನ್ನಡಿಗರ ಸಾಂಸ್ಕೃತಿಕ  ಹಾಗೂ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುತ್ತಾ ಬರುತ್ತಿರುವುದು ತುಂಬಾ ಸ್ವಾಗತಾರ್ಹ ವಿಷಯ ವಾಗಿದೆ.

ಕರ್ನಾಟಕ ಹೆಸರು ನಾಮಕರಣವಾದ ಈ ಸಂತಸದ ಸಂಭ್ರಮದಲ್ಲಿ ಆರು ರಾಜ್ಯಗಳ ಗಡಿ ನಾಡ ಕನ್ನಡಿಗರ ಒಂದು ಬೃಹತ್‌ ಸಮಾವೇಶ ವನ್ನು ಸರಕಾರ ಆಯೋಜಿಸುವುದು ಸೂಕ್ತ ವಾಗಿದೆ ಹಾಗೂ ಗಡಿನಾಡ ಕನ್ನಡದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರು ತಿಂಗಳುಗಳಿಗೊಮ್ಮೆ ಸಮಾಲೋಚನ ಸಭೆಯನ್ನು ನಡೆಸುವುದು ಸೂಕ್ತವಾಗಿರುತ್ತದೆ.

ಡಾ| ಸಿ. ಸೋಮಶೇಖರ, ಮಾಜಿ ಅಧ್ಯಕ್ಷರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.