Muda Case: 8 ಗಂಟೆ ಕಾಲ ಸಿಎಂ ಭಾಮೈದನ ವಿಚಾರಣೆ
ಕೆಸರೆ ಜಾಗ ಖರೀದಿ, ದಾನ ಕರಿತು ಲೋಕಾಯುಕ್ತ ಪ್ರಶ್ನೆ
Team Udayavani, Oct 11, 2024, 7:35 AM IST
ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, 3ನೇ ಮತ್ತು 4ನೇ ಆರೋಪಿಗಳ ವಿಚಾರಣೆ ನಡೆಸಿದರು.
ಸತತ 8 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಗುರುವಾರ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಪ್ರಕರಣದ 3ನೇ ಆರೋಪಿ ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು 4ನೇ ಆರೋಪಿ ಜಮೀನು ಮಾಲಕ ದೇವರಾಜು ಅವರ ವಿಚಾರಣೆಯನ್ನು ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನಡೆಸಿದರು.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿರುವ ದೂರಿನಂತೆ ಜಮೀನು ಮಾಲಕ ದೇವರಾಜು ಅವರಿಗೆ ಸೇರಿದ ಕೆಸರೆಯ ಜಾಗವನ್ನು ಯಾವಾಗ ಖರೀದಿ ಮಾಡಲಾಗಿತ್ತು. ತಂದೆಯ ಹೆಸರಿನಿಂದ ಇವರ ಹೆಸರಿಗೆ ಯಾವಾಗ ಬಂತು. ತಮ್ಮ ಹೆಸರಿಗೆ ಬಂದ ಜಮೀನನ್ನು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಯಾವಾಗ ಮಾರಾಟ ಮಾಡಲಾಯಿತು. ಹೀಗೆ ಹಲವು ಪ್ರಶ್ನೆಗಳನ್ನು ದೇವರಾಜು ಅವರನ್ನು ಕೇಳಿ ವಿಚಾರಣೆ ನಡೆಸಿದರೆ, ಇದಕ್ಕೆ ಪೂರಕವಾಗಿ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಖರೀದಿ ಮಾಡಿದ್ದು ಯಾವಾಗ, ಸೋದರಿ ಪಾರ್ವತಿ ಅವರಿಗೆ ದಾನ ನೀಡಿದ್ದು, ಮುಡಾ ಸ್ವಾಧೀನಪಡಿಸಿಕೊಂಡಿದ್ದು ಯಾವಾಗ ಮೊದಲಾದ ಮಾಹಿತಿಯನ್ನು ವಿಚಾರಣೆ ವೇಳೆ ದಾಖಲು ಮಾಡಲಾಗಿದೆ.
ಕಳೆದ ಸೆ. 27ರಂದು ಸಿಎಂ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಎಸ್ಪಿ ಉದೇಶ್ ಅವರು ದೂರುದಾರ, ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿ ಅವರ ವಿಚಾರಣೆ ನಡೆಸಿದ್ದರು. ಬಳಿಕ ಕೆಸರೆಯಲ್ಲಿ ಮಾರಾಟವಾಗಿದ್ದ ಭೂಮಿ ಮತ್ತು ವಿಜಯನಗರದಲ್ಲಿ ಸಿಎಂ ಪತ್ನಿ ಪಾರ್ವತಿಗೆ ಮಂಜೂರಾಗಿದ್ದ ನಿವೇಶನಗಳ ಬಳಿ ತೆರಳಿ ದೂರುದಾರರ ಸಮ್ಮುಖದಲ್ಲಿ ಮಹಜರು ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ
Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ
State Govt: ವಿನಯ್ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ
Karnataka: 43 ಕ್ರಿಮಿನಲ್ ಕೇಸ್ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ: ಎಚ್.ಕೆ. ಪಾಟೀಲ
Parameshwara: ಇನ್ನು ಮುಂದೆ ಯಾವುದೇ ಚರ್ಚೆ ಮಾಡುವುದಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ
Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ
‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!
Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ
State Govt: ವಿನಯ್ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.