MUDA Scam: ಸಿದ್ದರಾಮಯ್ಯಗೆ ವಿಚಾರಣೆ ಅನಿವಾರ್ಯ; ಸಿಎಂ ಮುಂದಿನ ನಡೆ ಏನು?

ಕಾನೂನು ತಜ್ಞರ ಅಭಿಪ್ರಾಯವೇನು? ರಾಜ್ಯಪಾಲರ ಅನುಮತಿ ಪ್ರತಿ ಹಾಜರುಪಡಿಸಿ ಖಾಸಗಿ ದೂರು ದಾಖಲಿಸಬಹುದು

Team Udayavani, Aug 18, 2024, 6:40 AM IST

CM-Siid

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ಸೆಕ್ಷನ್‌ 17(ಎ) ಪ್ರಕಾರ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದರಿಂದ ವಿಚಾರಣೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಸಿದ್ದರಾಮಯ್ಯ ಅವರಿಗೆ ಅಸಾಧ್ಯವಾಗಬಹುದು ಎಂದೇ ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ 19(ಎ) ಪ್ರಕಾರ ಅನುಮತಿ ನೀಡಿದ್ದರೆ ನೇರವಾಗಿ ಇದನ್ನು ಪ್ರಶ್ನಿಸುವುದಕ್ಕೆ ಅವಕಾಶವಿರುತ್ತಿತ್ತು. ಆದರೆ 17(ಎ) ಪ್ರಕಾರ ನೀಡಿರುವುದರಿಂದ ದೂರುದಾರ ಅಭಿಯೋಜನಾ ಅನುಮತಿ ಪತ್ರದೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆಗೆ ಅನುಮತಿ ಕೋರಬಹುದು. ಆಗ ನ್ಯಾಯಾಲಯ ಖಾಸಗಿ ದೂರು ದಾಖಲಿಸಿಕೊಂಡು ಸೆಕ್ಷನ್‌ 202 ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿ ವರದಿ ಕೊಡಿ ಎಂದು ಲೋಕಾಯುಕ್ತ ಅಥವಾ ಪೊಲೀಸ್‌ಗೆ ಸೂಚನೆ ನೀಡಬಹುದು. ಹೀಗಾಗಿ ವಿಚಾರಣೆ ಅನಿವಾರ್ಯವಾಗಿ ಪರಿಣಮಿಸುತ್ತದೆ.

ಈ ಹಂತದಲ್ಲಿ ದೂರುದಾರನ ಪ್ರಮಾಣೀಕೃತ ಹೇಳಿಕೆ, ಆರೋಪಿತ ಸ್ಥಾನದಲ್ಲಿರುವವರಿಗೆ ಸಮನ್ಸ್‌ ಇತ್ಯಾದಿ ಪ್ರಕ್ರಿಯೆಗಳು ನಡೆಯಲೇಬೇಕಾಗುತ್ತದೆ. ಇದೆಲ್ಲ ಆದ ಬಳಿಕ ದೂರುದಾರ ಮತ್ತೆ ರಾಜ್ಯಪಾಲರಿಂದ ಅಭಿಯೋಜನಾ ಅನುಮತಿ ಕೇಳಬೇಕಾಗುತ್ತದೆ. ಆಗ 19(ಎ) ಪ್ರಕಾರ ರಾಜ್ಯಪಾಲರು ಅನುಮತಿ ನೀಡಬೇಕಾಗುತ್ತದೆ.

ಈ ಪ್ರಕರಣ ಸಂಬಂಧ ಒಬ್ಬ ದೂರುದಾರ ಈಗಾಗಲೇ ನ್ಯಾಯಾಲಯದಲ್ಲಿ ಕೇವಿಯಟ್‌ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈಗಾಗಲೇ ವಿಚಾರಣೆ ನಡೆಯುತ್ತಿದ್ದು ರಾಜ್ಯಪಾಲರ ಅನುಮತಿ ಪ್ರತಿ ಹಾಜರುಪಡಿಸಿ ಖಾಸಗಿ ದೂರು ದಾಖಲಿಸಬಹುದಾಗಿದೆ. ಹೀಗಾಗಿ ಸಿದ್ದರಾಮಯ್ಯನವರು ಕಾನೂನು ಹೋರಾಟದಲ್ಲಿ ಸಮಗ್ರವಾಗಿ ರಾಜ್ಯಪಾಲರ ಅನುಮತಿ ಪ್ರಶ್ನಿಸುತ್ತಾರೋ ಅಥವಾ 17(ಎ) ಪ್ರಶ್ನಿಸುತ್ತಾರೋ ಎಂಬ ಕುತೂಹಲ ಸೃಷ್ಟಿಯಾಗಿದೆ.

“ನಿರ್ದಿಷ್ಟವಾಗಿ ಹೇಳಬೇಕೆಂದರೆ ಇದು ಅಭಿಯೋಜನೆಗೆ ನೀಡಿದ ಅನುಮತಿಯಲ್ಲ, ರಾಜ್ಯಪಾಲರ ಮುಂದೆ ಇದ್ದ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಪೊಲೀಸರು ತನಿಖೆ ನಡೆಸುವುದಕ್ಕೆ ನೀಡಿದ ಅನುಮತಿ. 17(ಎ) ಪ್ರಕಾರ ಅನುಮತಿ ನೀಡಿರುವುದರಿಂದ ನಿರ್ದಿಷ್ಟ ಅರ್ಜಿ ಆಧರಿಸಿ ತನಿಖೆ ನಡೆಸುವುದಕ್ಕೆ ಪೊಲೀಸರಿಗೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಇದರ ವಿರುದ್ಧ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿ ಪ್ರಶ್ನಿಸುವುದಕ್ಕೆ ಅವಕಾಶವಿದೆ.” – ಬಿ.ವಿ. ಆಚಾರ್ಯ, ಹಿರಿಯ ನ್ಯಾಯವಾದಿ

“ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆ ಕೋರಿ ದೂರು ಬಂದಾಗ ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಬಳಸುವುದಕ್ಕೆ ಅವಕಾಶವಿದೆ. ಅದಕ್ಕಾಗಿ ಅವರು ಸಂಪುಟದ ಸಲಹೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದೇನೂ ಇಲ್ಲ. ಆದರೆ ರಾಜ್ಯಪಾಲರ ಈ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಕ್ಕೂ ಅವಕಾಶವಿದೆ. ರಾಜ್ಯಪಾಲರ ನಡೆ ಹೇಗೆ ಕಾನೂನು ರೀತಿ ಇಲ್ಲ ಎಂದು ಮನವರಿಕೆ ಮಾಡಿಕೊಡುವುದಕ್ಕೆ ಹಾಗೂ ಕಾನೂನು ಹೋರಾಟ ಮಾಡುವುದಕ್ಕೆ ಅವಕಾಶವಿದೆ.”
– ಅಶೋಕ ಹಾರ್ನಳ್ಳಿ, ನಿವೃತ್ತ ಅಡ್ವೋಕೇಟ್‌ ಜನರಲ್‌

“ನನ್ನ ಕಾನೂನು ಅರಿವಿನ ಪ್ರಕಾರ 17(ಎ) ಪ್ರಕಾರ ರಾಜ್ಯಪಾಲರು ಅಭಿಯೋಜನೆ ನಡೆಸುವುದಕ್ಕೆ ಅನುಮತಿ ನೀಡಿರುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಇದೇ ಕಾರಣಕ್ಕಾಗಿ ಅವರು ರಾಜೀನಾಮೆ ನೀಡಬೇಕು ಎಂದು ಕಾನೂನು ಹೇಳುವುದಿಲ್ಲ. ರಾಜೀನಾಮೆ ನೈತಿಕತೆಗೆ ಸಂಬಂಧಪಟ್ಟ ವಿಚಾರ. ಆದರೆ ಅಭಿಯೋಜನೆ ಪತ್ರವನ್ನು ಮುಂದಿಟ್ಟುಕೊಂಡು ಸಲ್ಲಿಕೆಯಾಗುವ ಖಾಸಗಿ ದೂರನ್ನು ನ್ಯಾಯಾಲಯ ಎತ್ತಿ ಹಿಡಿದಾಗ ಸಮಸ್ಯೆಯಾಗಬಹುದು. ಇದರ ಜತೆಗೆ ಈ ನಿರ್ಣಯವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವುದಕ್ಕೂ ಅವರಿಗೆ ಅಧಿಕಾರವಿದೆ.” – ಸಿ.ಎಚ್‌. ಹನುಮಂತರಾಯ, ಹಿರಿಯ ನ್ಯಾಯವಾದಿ

“ಈ ಪ್ರಕರಣದಲ್ಲಿ ಏನಾಗಬಹುದು ಎಂದು ಇದಮಿತ್ಥಂ ಎನ್ನಲು ಸಾಧ್ಯವಿಲ್ಲ. ಕಾನೂನು ಹೋರಾಟ ಎಂದಾಗ ಹತ್ತು ಹಲವು ಸಾಧ್ಯತೆಗಳು ಇರುತ್ತವೆ. ಸದ್ಯಕ್ಕೆ ಸಿದ್ದರಾಮಯ್ಯನವರ ಮುಂದೆ ಇರುವ ಅವಕಾಶಗಳ ಪೈಕಿ ರಾಜ್ಯಪಾಲರ ನಿರ್ಣಯವನ್ನು ಪ್ರಶ್ನಿಸುವುದಾಗಿರಬಹುದು. ಇದಕ್ಕೆ ಅವಕಾಶವಿದೆ.”  – ಉದಯ ಹೊಳ್ಳ, ರಾಜ್ಯ ಸರಕಾರದ ನಿವೃತ್ತ ಅಡ್ವೊಕೇಟ್‌ ಜನರಲ್‌

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.