Mudhol: ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ; ರೈತ ಸಂಘ ಬೆಂಬಲ
ಸುರಿವ ಮಳೆಯನ್ನೂ ಲೆಕ್ಕಿಸದೆ ಹೋರಾಟ ನಡೆಸಿದ ಸಂತ್ರಸ್ತರು
Team Udayavani, Aug 7, 2024, 6:29 PM IST
ಮುಧೋಳ : ಘಟಪ್ರಭಾ ಪ್ರವಾಹದಲ್ಲಿ ಮನೆಮಠ ಕಳೆದುಕೊಂಡು ಸಂತ್ರಸ್ತರು ಶಾಶ್ವತ ಸೂರು ಹಾಗೂ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ರೈತಸಂಘ, ಕಬ್ಬು ಬೆಳೆಗಾರರ ಒಕ್ಕೂಟ ಹಾಗೂ ನೆರೆ ಸಂತ್ರಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಕೈಜೋಡಿಸಿದ್ದವು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಎತ್ತಿನ ಚಕ್ಕಡಿ ಹಾಗೂ ಟ್ರ್ಯಾಕ್ಟರ್ ಸಮೇತ ಪ್ರತಿಭಟನಾ ಮೆರವಣಿಗೆ ಹೊರಟ ರೈತರು ರಾಣಾ ಪ್ರತಾಪ ಸಿಂಗ್ ವೃತ್ತದಲ್ಲಿ ಜಮಖಂಡಿ ಧಾರವಾಡ ರಾಜ್ಯ ಹೆದ್ದಾರಿ ಸಂಚಾರ ತಡೆದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಹಾಗೂ ತಾಲೂಕಿನಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಬ್ಯಾರೇಜ್ ಗಳಿಂದ ಘಟಪ್ರಭಾ ನದಿಯ ನೀರು ಹೊಲಗದ್ದೆಗಳಿಗೆ ನುಗ್ಗಿ ಬೆಳೆಹಾನಿಯಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಬೆಳೆಹಾನಿಯಾದರೆ ಸರ್ಕಾರ ಮಾತ್ರ ಪರಿಹಾರ ನೀಡದೆ ರೈತರ ಹೊಟ್ಟೆಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರವಾಹದಿಂದ ಹಾನಿಯಾಗಿರುವ ಬೆಳೆಗೆ ಸೂಕ್ತ ಪರಿಹಾರ ಒದಗಿಸಬೇಕು. ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ 5ಲಕ್ಷ ಪರಿಹಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಉಪವಿಭಾಗಾಧಿಕಾರಿ ಮಾತಿಗೂ ಜಗ್ಗದ ಪ್ರತಿಭಟನಾಕಾರರು:
ಪ್ರತಿಭಟನೆ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸಂತ್ರಸ್ತರ ಸಮಸ್ಯೆ ಆಲಿಸಿ ಮನವೊಲಿಕೆಗೆ ಮುಂದಾದರು. ಎಸಿ ಮಾತಿಗೆ ಕ್ಯಾರೆ ಎನ್ನದ ಪ್ರತಿಭಟನಾಕಾರರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಸುರಿವ ಮಳೆಯಲ್ಲೂ ಜೋರು ಪ್ರತಿಭಟನೆ : ಮಧ್ಯಾಹ್ನ 12ರಿಂದ ಆರಂಭಗೊಂಡ ಪ್ರತಿಭಟನೆ ಸಂಜೆವರೆಗೂ ನಿಲ್ಲಲಿಲ್ಲ. ನಾಲ್ಕು ಗಂಟೆ ಸುಮಾರಿಗೆ ಸುರಿದ ಜೋರು ಮಳೆಯಲ್ಲಿಯೂ ರೈತರು ಪ್ರತಿಭಟನಾ ಸ್ಥಳ ಬಿಟ್ಟು ಕದಲಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.