ತುರ್ತು ರಕ್ಷಣಾ ಕಾರ್ಯಕ್ಕೆ ಮಲ್ಟಿರೋಲ್ ಹೆಲಿಕಾಪ್ಟರ್‌!

ಎಚ್‌ಎಎಲ್‌ ಜತೆ ಒಪ್ಪಂದ ಸಾಧ್ಯತೆ ; ಗುತ್ತಿಗೆ, ನಿರ್ವಹಣೆಯ ಖರ್ಚು ವೆಚ್ಚಗಳ ಬಗ್ಗೆ ಸಮಾಲೋಚನೆ

Team Udayavani, Jun 28, 2019, 5:38 AM IST

Ban28061906Medn

ಬೆಂಗಳೂರು: ರಾಜ್ಯದಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪ, ಅಗ್ನಿ ಅವಘಡ ಹಾಗೂ ಕಟ್ಟಡ ಕುಸಿತದಂತಹ ತುರ್ತು ಸಂದರ್ಭದಲ್ಲಿ ತ್ವರಿತ ಕಾರ್ಯಾಚರಣೆ ಹಾಗೂ ಸಿಬ್ಬಂದಿ ಕರೆದೊಯ್ಯಲು ಮಲ್ಟಿರೋಲ್ ಹೆಲಿಕಾಪ್ಟರ್‌ ಬಳಕೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮುಂದಾಗಿದೆ.

ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್ಎಎಲ್)ನಿಂದ ಮಲ್ಟಿರೋಲ್(ಬಹುಪಯೋಗಿ) ಹೆಲಿಕಾಪ್ಟರ್‌ ಅನ್ನು ಗುತ್ತಿಗೆ ಅಥವಾ ಬಾಡಿಗೆ ರೂಪದಲ್ಲಿ ಪಡೆಯುವ ಪ್ರಸ್ತಾವನೆಗೆ ಇದೀಗ ಚಾಲನೆ ಸಿಕ್ಕಿದೆ.

ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿ, ಗೃಹ ಇಲಾಖೆಯ ಕಾರ್ಯದರ್ಶಿಗಳ ಜತೆ ನಾಲ್ಕೈದು ಬಾರಿ ಚರ್ಚೆ ನಡೆಸಿದ್ದು, ಎಚ್ಎಎಲ್ ಜತೆ ಒಪ್ಪಂದ ಮಾಡಿಕೊಳ್ಳಲು ಮೌಖೀಕ ಸೂಚನೆ ಸಿಕ್ಕಿದೆ. ಆದರೆ, ಖರೀದಿ ಮಾಡಲು ಸಾಧ್ಯವಿಲ್ಲ. ಸರ್ಕಾರದಿಂದ ಇಲಾಖೆಗೆ ಬರುವ ಅನುದಾನವನ್ನು ಆಧರಿಸಿ ಹೆಲಿಕಾಪ್ಟರ್‌ ಅನ್ನು ಗುತ್ತಿಗೆ ರೂಪದಲ್ಲಿ ಪಡೆಯಬೇಕೋ ಅಥವಾ ಬಾಡಿಗೆ ಆಧಾರದಲ್ಲಿ ಪಡೆಯಬೇಕೋ ಎಂಬ ಬಗ್ಗೆ ಲೆಕ್ಕಾಚಾರದ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಹೀಗಾಗಿ ಎಚ್ಎಎಲ್ನ ಹಿರಿಯ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಸದ್ಯದಲ್ಲೇ ರಾಜ್ಯದಲ್ಲೂ ವಿದೇಶಿ ಮಾದರಿಯಲ್ಲಿ ತುರ್ತು ಸಂದರ್ಭದಲ್ಲಿ ಹೆಲಿಕಾಪ್ಟರ್‌ ಮೂಲಕ ರಕ್ಷಣಾ ಕಾರ್ಯಚರಣೆ ನಡೆಯಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ವಿದೇಶಗಳಲ್ಲಿ ತುರ್ತು ಸೇವೆಗಳ ಇಲಾಖೆಗಳು ಸ್ವಂತ ಹೆಲಿಕಾಪ್ಟ್ರ್‌ಗಳನ್ನು ಹೊಂದಿದ್ದು, ಕ್ಷಣಾರ್ಧದಲ್ಲಿ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕರೆದೊಯ್ದು ರಕ್ಷಣಾ ಕಾರ್ಯ ಮಾಡಬಹುದು. ಈ ಎಲ್ಲ ವಿಚಾರ ಗಮನದಲ್ಲಿಟ್ಟುಕೊಂಡು ಹೆಲಿಕಾಪ್ಟರ್‌ ಗುತ್ತಿಗೆ ಪಡೆಯಲು ನಿರ್ಧರಿಸಲಾಗಿದೆ. ಈಗಾಗಲೇ ಎರಡು ಬಾರಿ ಎಚ್ಎಎಲ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಹೆಲಿಕಾಪ್ಟರ್‌ ಗುತ್ತಿಗೆ ಹಾಗೂ ಅದರ ನಿರ್ವಹಣೆಯ ಖರ್ಚುವೆಚ್ಚಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಉಪಯೋಗ ಏನು?
ಹೆಲಿಕಾಪ್ಟರ್‌ ಗುತ್ತಿಗೆ ಅಥವಾ ಬಾಡಿಗೆ ಪಡೆಯುವುದರಿಂದ ಹತ್ತಾರು ಪ್ರಯೋಜನಗಳಿವೆ. ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅನಾಹುತ ಸಂಭವಿಸಿದಾಗ ಹೆಲಿಕಾಪ್ಟರ್‌ನಿಂದ ಮೇಲಿಂದಲೇ ಸಿಬ್ಬಂದಿ ಮತ್ತು ನೀರು ಕೊಂಡೊಯ್ಯಬಹುದು. ಎತ್ತರ ಪ್ರದೇಶದಿಂದ ಹೆಲಿಕಾಪ್ಟರ್‌ ಮೂಲಕ ರಕ್ಷಣೆ ಮಾಡಬಹುದು. ಬೇಸಿಗೆಯಲ್ಲಿ ಅರಣ್ಯಪ್ರದೇಶದಲ್ಲಿ ಸಂಭವಿಸುವ ಕಾಡ್ಗಿಚ್ಚು ನಿಯಂತ್ರಿಸಲು ಹೆಲಿಕಾಪ್ಟರ್‌ ಮೂಲಕವೇ ನೀರು ಹಾಕಬಹುದು. ನಷ್ಟದ ಪ್ರಮಾಣ ತಿಳಿಯಲು ವೈಮಾನಿಕ ಸರ್ವೇ, ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ರಕ್ಷಣಾ ಇಲಾಖೆ ಅನುಮತಿ ಪಡೆಯುವ ಅನಿವಾರ್ಯ ತಪ್ಪಲಿದೆ. ಮಳೆಗಾಲದಲ್ಲಿ ಉಂಟಾಗುವ ಪ್ರವಾಹದ ವೈಮಾನಿಕ ಸರ್ವೇ ಹಾಗೂ ತಗ್ಗು ಪ್ರದೇಶದಿಂದ ಸುರಕ್ಷಿತ ಪ್ರದೇಶಕ್ಕೆ ಜನರ ಸ್ಥಳಾಂತರ, ದೊಡ್ಡ ಮಟ್ಟದಲ್ಲಿ ಪೊಲೀಸ್‌ ಬಂದೋಬಸ್ತ್ ನಿಯೋಜನೆಗೆ ಸಿಬ್ಬಂದಿ ಕರೆದುಕೊಂಡು ಹೋಗಲು, ವೈದ್ಯಕೀಯ ನೆರವು ಹೀಗೆ ಬಹುಪಯೋಗಿಯಾಗಿ ಹೆಲಿಕಾಪ್ಟರ್‌ ಬಳಕೆಯಾಗಲಿದೆ.

-ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.