Mulur: ಮಾನಸಿಕ ಖಿನ್ನತೆಯಿಂದ ಮನನೊಂದು ಆತ್ಮಹತ್ಯೆ
Team Udayavani, Sep 25, 2024, 8:51 PM IST
ಕಾಪು: ಖಿನ್ನತೆಗೊಳಗಾಗಿ ಮನನೊಂದಿದ್ದ ಆರ್ಡಿ ಮತ್ತು ಪಿಗ್ಮಿ ಸಂಗ್ರಾಹಕ ಮೂಳೂರು ರಾಜಮನೆ ಕೆ. ಸುಭಾಶ್ಚಂದ್ರ ಮೂಳೂರು (70) ಅವರು ಬುಧವಾರ (ಸೆ. 25) ರಂದು ಮುಂಜಾನೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮನೆಯಲ್ಲಿ ಮಲಗಿದ್ದ ಅವರು ಬುಧವಾರ ಮುಂಜಾನೆ 4 ಗಂಟೆಗೆ ಎಂದಿನಂತೆ ವಾಕಿಂಗ್ಗೆ ತೆರಳಿದ್ದು, ಬೆಳಗ್ಗೆಯಾದರೂ ಮರಳಿ ಮನೆಗೆ ಬಾರದೆ ಇದ್ದುದರಿಂದ ಮನೆಯವರು ವಿವಿಧೆಡೆ ಹುಡುಕಾಡಿದ್ದರು. ಈ ವೇಳೆ ಮೂಳೂರು ಸಂಘದ ಬಳಿಯಲ್ಲಿರುವ ಸಹೋದರನ ಖಾಲಿ ಜಾಗದ ಬಾವಿಯ ಬಳಿ ಅವರ ಚಪ್ಪಲಿಗಳು ಪತ್ತೆಯಾಗಿದ್ದವು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದ ಅವರು, ರಾಜಮನೆ ಕುಟುಂಬದ ದೈವದ ಆರಾಧಕರಾಗಿದ್ದರು. ಮೂಳೂರು ಬಿಲ್ಲವರ ಸಂಘದ ಅಧ್ಯಕ್ಷರಾಗಿ, ಮೂಳೂರು ಸರ್ವೇಶ್ವರ ಕೊಡಮಣಿತ್ತಾಯ ಬಬ್ಬರ್ಯ ದೈವಸ್ಥಾನದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಸಹಿತ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maski: ಮೂತ್ರ ವಿಸರ್ಜನೆಗೆ ಶಾಲಾ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು
Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್ ಪಾಲಿಗೆ
Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ
Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು
Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.