Bagalakote; ದಿಲ್ಲಿಗೆ ಕೃಷ್ಣೆಯ ಕೂಗನ್ನು ಕೇಳಿಸುವುದೇ ನನ್ನ ಗುರಿ: ಸಂಯುಕ್ತಾ ಪಾಟೀಲ್‌

2ನೇ ವಯಸ್ಸಿನಲ್ಲೇ ಪ್ರಧಾನಿಯಾಗುವೆ ಎಂದು ಹೇಳಿದ್ದೆ ; ಬಾಗಲಕೋಟೆಗೆ ಆಕರ್ಷಕ ಜಿಲ್ಲೆ

Team Udayavani, Apr 7, 2024, 7:30 AM IST

Bagalakote; ದಿಲ್ಲಿಗೆ ಕೃಷ್ಣೆಯ ಕೂಗನ್ನು ಕೇಳಿಸುವುದೇ ನನ್ನ ಗುರಿ: ಸಂಯುಕ್ತಾ ಪಾಟೀಲ್‌

ಮಾಜಿ ಅಟಾರ್ನಿ ಜನರಲ್‌ ಆಫ್‌ ಇಂಡಿಯಾದ ಮುಕುಲ್‌ ರೊಹrrಗಿ, ಹೈಕೋರ್ಟ್‌ನ ಹಿರಿಯ ವಕೀಲರಾದ ಜಯಕುಮಾರ್‌ ಪಾಟೀಲ್‌ ಅವರಂಥ ಹಿರಿಯರ ಅಧೀನದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ವಕೀಲೆಯೂ ಆಗಿರುವ ಸಂಯುಕ್ತಾ ಪಾಟೀಲ್‌ ರಾಜ್ಯದ ಹಾಲಿ ಸಚಿವ ಶಿವಾನಂದ ಪಾಟೀಲರ ಪುತ್ರಿ. 2017ರಿಂದ ಸಕ್ರಿಯ ರಾಜಕಾರಣಕ್ಕೆ ಬಂದಿದ್ದಾರೆ. ಸತತ 4 ಬಾರಿ ಗೆದ್ದು ಐದನೇ ಬಾರಿಗೆ ಗೆಲುವಿನ ವಿಶ್ವಾಸದಲ್ಲಿರುವ ಬಿಜೆಪಿಯ ಹಳೆಯ ಹುಲಿ ಪಿ.ಸಿ.ಗದ್ದಿಗೌಡರ್‌ ಅವರಿಗೆ ಎದುರಾಳಿಯಾಗಿದ್ದಾರೆ.

ಜೀವನದಲ್ಲೇ ಮೊದಲ ಬಾರಿಗೆ ಚುನಾವಣ ಕಣಕ್ಕಿಳಿದಿದ್ದೀರಿ. ಏನನ್ನಿಸುತ್ತಿದೆ?
ತುಂಬ ಖುಷಿಯಾಗುತ್ತಿದೆ. ನನಗೆ ಬೇರೆಬೇರೆ ಕಾರಣಕ್ಕೆ ಟಿಕೆಟ್‌ ಸಿಕ್ಕಿರಬಹುದು. ಆದರೆ ಮೊದಲ ಪ್ರಯತ್ನ ದಲ್ಲೇ ನಾನು ಯಶಸ್ಸು ಕಂಡಿದ್ದೇನೆಂಬ ಖುಷಿಯಿದೆ.

ಚುನಾವಣೆ ಎದುರಿಸಬೇಕೆಂದು ನಿಮಗೆ ಅನ್ನಿಸಿದ್ದು ಯಾವಾಗ, ಯಾಕೆ ಮತ್ತು ಪ್ರೇರಣೆ ಏನು?
ಎರಡನೇ ತರಗತಿಯಲ್ಲಿದ್ದಾಗ ಶಿಕ್ಷಕರು ಕೇಳಿದ್ದಕ್ಕೆ ಮುಂದೆ ಈ ದೇಶದ ಪ್ರಧಾನಿ ಆಗುತ್ತೇನೆ ಎಂದಿದ್ದೆ. ವಕೀಲೆಯಾಗಿ ಇಡೀ ದೇಶ ಮತ್ತು ಏಷ್ಯಾದ ವಿವಿಧ ರಾಷ್ಟ್ರಗಳ ನೀತಿ ರೂಪಿಸುವ ಹಲವು ಕಾರ್ಯಾಗಾರ, ತರಬೇತಿಗಳಲ್ಲಿ ಭಾರತ
ವನ್ನು ಪ್ರತಿನಿಧಿಸಿದ್ದೇನೆ. ಇವೆಲ್ಲ ನಾನು ರಾಜಕೀಯಕ್ಕೆ ಬರಲು ಪ್ರೇರಣೆ.

ರಾಜಕೀಯದಲ್ಲಿ ನಿಮ್ಮ ಗಾಡ್‌ಫಾದರ್‌ ಯಾರು ಮತ್ತು ಯಾಕೆ?
ಸಹಜವಾಗಿ ನನ್ನ ತಂದೆಯೇ ನನ್ನ ರಾಜಕೀಯ ಜೀವನದ ಮೊದಲ ಗಾಡ್‌ಫಾದರ್‌. ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರೂ ಗಾಡ್‌ಫಾದರ್‌. ರಾಜಕೀಯದಲ್ಲಿ ನನಗೆ ಅಟಲ್‌ ಬಿಹಾರಿ ವಾಜಪೇಯಿ ಅವರೇ ಅತಿ ಹೆಚ್ಚು ಆಕರ್ಷಿತ ನಾಯಕರು.

ಮೊದಲ ಪ್ರಯತ್ನದಲ್ಲೇ ಲೋಕಸಭೆಗೆ ಸ್ಪರ್ಧೆ ಮಾಡುತ್ತಿದ್ದೀರಿ. ಕಾರಣವೇನು ?
2017ರಿಂದ ಸಕ್ರಿಯ ರಾಜಕಾರಣದಲ್ಲಿ ದ್ದೇನೆ. ಕಾನೂನು, ತಂತ್ರಜ್ಞಾನ, ಸಾಮಾ ಜಿಕ ಕ್ಷೇತ್ರದಲ್ಲಿ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಜನರ ಸೇವೆಗೆ ಒಂದು ಉತ್ತಮ ಪ್ಲಾಟ್‌ಫಾರ್ಮ್ ಬೇಕು.

ನಿಮ್ಮ ಕ್ಷೇತ್ರದ ಜನ ನಿಮಗೆ ಯಾವ ಕಾರಣಕ್ಕಾಗಿ ಮತ ಹಾಕಬೇಕು?
ನನಗೆ ಟಿಕೆಟ್‌ ಸಿಗಲು ಹಲವು ಕಾರಣ ಇರಬಹುದು. ಆದರೆ “ಹೊರಗಿನವಳು’ ಎಂದು ಕೆಲವರು ಬಿಂಬಿಸಿದರೂ ಈ ಜಿಲ್ಲೆಯ ಜನ ನನ್ನನ್ನು ಅತ್ಯಂತ ಪ್ರೀತಿಯಿಂದ ಮನೆ ಮಗಳಂತೆ ಸ್ವೀಕರಿಸಿದ್ದಾರೆ. ಈ ಕ್ಷೇತ್ರದ ಬಗ್ಗೆ ಹಲವು ಕನಸು ಕಂಡಿರುವೆ.

ಈ ಚುನಾವಣೆಯನ್ನು ನೀವು ಹೇಗೆ ಗೆಲ್ಲುತ್ತೀರಿ? ಪ್ರಮುಖ ಕಾರಣ ಹೇಳಿ.
ಕಾಂಗ್ರೆಸ್‌ ಗೆಲ್ಲಲು ಹಲವು ಪೂರಕ ಅಂಶಗಳಿವೆ. ಕೇಂದ್ರ ಸರಕಾರದ ಆಡ ಳಿತದಿಂದ ಜನ ರೋಸಿ ಹೋಗಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇ ವೆಂದು ಹೇಳಿದವರಿಂದ ಒಂದು ಉದ್ಯೋಗವೂ ಸೃಷ್ಟಿಯಾಗಿಲ್ಲ. ಕೇಂದ್ರ ಸರಕಾರ ಇಂಥ ಹಲವು ವೈಫ‌ಲ್ಯಗಳು ಗೆಲುವಿಗೆ ಕಾರಣವಾಗಲಿವೆ.

ನಿಮ್ಮ ಕನಸೇನು? ಗೆದ್ದು ದಿಲ್ಲಿಗೆ ಹೋಗಿ ಏನು ಮಾಡಬೇಕೆಂದಿದ್ದೀರಿ?
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನನ್ನದೇ ಆದ ಕನಸುಗಳಿವೆ. ಈ ಕ್ಷೇತ್ರದಲ್ಲಿ ಆಗ ಬೇಕಾದ ಕಾರ್ಯಗಳ ಕುರಿತು ಪ್ರತ್ಯೇಕ ಪ್ರಣಾಳಿಕೆ ಕೂಡ ಶೀಘ್ರ ಬಿಡುಗಡೆ ಮಾಡಲಿದ್ದೇವೆ. ಕೃಷ್ಣೆಯ ಕೂಗು ದಿಲ್ಲಿಗೆ ಕೇಳಬೇಕು ಎಂಬುದು ನನ್ನ ಗುರಿ.

ಗೆದ್ದರೆ ನಿಮ್ಮ ಲೋಕಸಭೆ ಕ್ಷೇತ್ರಕ್ಕೆ ಮಾಡುವ ಮೊದಲ ಕೆಲಸ ಏನು?
ಬಾಗಲಕೋಟೆ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಯೊಂದಿಗೆ ಆಕರ್ಷಕ ಜಿಲ್ಲೆಯನ್ನಾಗಿ ರೂಪಿಸುತ್ತೇನೆ.

ನಿಮ್ಮ ಕ್ಷೇತ್ರದ ಭವಿಷ್ಯಕ್ಕೆ ಇರುವ 5 ಕನಸುಗಳು ಏನು? ಅವುಗಳನ್ನು ಹೇಗೆ ಈಡೇರಿಸುತ್ತೀರಿ?
ಮಿನಿ ಜವಳಿ ಪಾರ್ಕ್‌ ಸ್ಥಾಪನೆ, ರೈಲ್ವೆ ಯೋಜನೆಗಳ ಪೂರ್ಣ, ಪ್ರವಾ ಸೋದ್ಯಮ ಸಮಗ್ರ ಅಭಿವೃದ್ಧಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಅನುದಾನ, ಎನ್‌ಡಿಆರ್‌ಎಫ್‌ ಪ್ರಕಾರ ರಾಜ್ಯಕ್ಕೆ ಸೂಕ್ತ ಅನುದಾನ ನಿರಂತರವಾಗಿ ಬರಲು ಶ್ರಮ ವಹಿಸುವೆ.

ಚುನಾವಣೆ ವೇಳೆ ಅನೇಕ ಹಿರಿಯ ನಾಯಕರನ್ನು ನೀವು ಸಂಭಾಳಿಸಬೇಕಾಗುತ್ತದೆ. ಹೇಗೆ ನಿಭಾಯಿಸುತ್ತೀರಿ?
ಈ ವಿಷಯದಲ್ಲಿ ಮತ್ತೆ ನನಗೆ ವಾಜಪೇಯಿ ನೆನಪಾಗುತ್ತಾರೆ. ಅವರಿಗೆ ಶತ್ರುಗಳೇ ಇರಲಿಲ್ಲ. ಎಲ್ಲರನ್ನೂ ಗೌರವಿಸಿ, ವಿಶ್ವಾಸದಿಂದ ಸಾಗುತ್ತಿದ್ದರು. ಜಿಲ್ಲೆಯ ಎಲ್ಲ ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿದ್ದೇನೆ.

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.