Mysore Dasara: ಗಜಪಯಣಕ್ಕೆ ಚಾಲನೆ ನೀಡಿದ ಸಚಿವತ್ರಯರು
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ
Team Udayavani, Aug 21, 2024, 1:30 PM IST
ಹುಣಸೂರು: ನಾಗರಹೊಳೆ ಹೆಬ್ಬಾಗಿಲು ವೀರನಹೊಸಹಳ್ಳಿ ಗೇಟ್ ಬಳಿಯಲ್ಲಿ ಬುಧವಾರ (ಆ.21) ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಈಶ್ವರ್ ಖಂಡ್ರೆ ಸಾಂಸ್ಕೃತಿಕ ಕಲರವಗಳ ನಡುವೆ ಗಜ ಪಯಣಕ್ಕೆ ಚಾಲನೆ ನೀಡಿದರು.
ಮೊದಲಿಗೆ ವೀರನಹೊಸಹಳ್ಳಿ ಗೇಟ್ ಎದುರಿನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸಿದ ನಂತರ ಗಜಪಡೆಗೆ ಪೂಜೆ ಸಲ್ಲಿಸಲಾಯಿತು.
ಆನಂತರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪೂಜೆ ಸಲ್ಲಿಸಿ ಕಬ್ಬು,ಬಾಳೆ ಹಣ್ಣು, ಬೆಲ್ಲ ತಿನ್ನಿಸಿದರು. ಶಾಸಕ ಜಿ.ಡಿ.ಹರೀಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಸರ್ ಚಾಮರಾಜನಗರ ಸಂಸದ ಸುನಿಲ್ ಬೋಸ್ , ಶಾಸಕರಾದ ಡಿ.ರವಿಶಂಕರ್. ಅನಿಲ್ ಚಿಕ್ಕಮಾದು ಮತ್ತಿತರ ಜನಪ್ರತಿನಿಧಿಗಳು ಜಿ.ಪಂ.ಸಿಇಓ ಗಾಯಿತ್ರಿ, ಎಪಿಸಿಸಿಎಫ್ ಕುಮಾರ್ ಪುಷ್ಕರ್, ಅರಣ್ಯಾಧಿಕಾರಿಗಳಾದ ಮಾಲತಿಪ್ರಿಯಾ, ಪ್ರಾಜೆಕ್ಟ್ ಟೈಗರ್ ಹೆಡ್ ರಮೇಶ್ ಕುಮಾರ್, ಡಿಸಿಎಪ್ ಗಳಾದ ಡಾ.ಪಿ.ಎ.ಸೀಮಾ, ಐ.ಬಿ.ಪ್ರಭುಗೌಡ, ಎಸ್.ಪಿ ಹರ್ಷವರ್ಧನ್, ಎ.ಸಿ.ವಿಜಯಕುಮಾರ್, ಡಿವೈಎಸ್ ಪಿ ಗೋಪಾಲಕೃಷ್ಣ, ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಹಲವಾರು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಸಾಕ್ಷಿಯಾಗಿ ಗಜಪಯಣವನ್ನು ಕಣ್ತುಂಬಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.