ಮೈಸೂರು ದಸರಾ: ಇಂದು ಸಿಎಂ ನೇತೃತ್ವದಲ್ಲಿ ಸಭೆ


Team Udayavani, Jul 31, 2023, 5:56 AM IST

mysore dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಮೈಸೂರಿಗೆ ಕರೆತರಲು ಸಿದ್ಧತೆ ನಡೆದಿದೆ. ಆಗಸ್ಟ್‌ 21ರಂದು ಗಜಪಯಣ ನಡೆಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಸೋಮವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ದಸರಾ ಉನ್ನತ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರವಾಗಲಿದೆ.

ದಸರಾ ಉತ್ಸವಕ್ಕೆ ಅಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ 14 ಆನೆಗಳನ್ನು ಕರೆತರಲು ನಿರ್ಧರಿಸಿರುವ ಅರಣ್ಯ ಇಲಾಖೆಯು ಮತ್ತಿಗೋಡು, ದುಬಾರೆ, ರಾಂಪುರ ಹಾಗೂ ಬಳ್ಳೆ ಸಾಕಾನೆ ಶಿಬಿರಗಳಿಗೆ ತೆರಳಿ ಒಂದು ಸುತ್ತಿನ ಆಯ್ಕೆ ಪ್ರಕ್ರಿಯೆ ನಡೆಸಿದೆ. ಜತೆಗೆ ಗಜಪಯಣದ ಮೂಲಕ ಮೈಸೂರಿಗೆ ಕರೆತರುವ ಮೊದಲ ತಂಡದ ಆನೆಗಳ ಪಟ್ಟಿ ಸಿದ್ಧಪಡಿಸಿದೆ.

ಈ ಬಾರಿಯ ದಸರಾ ಮಹೋತ್ಸವ ಅ.15ರಿಂದ ಆರಂಭವಾಗಲಿದ್ದು, 24ರಂದು ಜಂಬೂಸವಾರಿ ನೆರವೇರಲಿದೆ.

21ಕ್ಕೆ ಗಜಪಯಣ?:

ಅ.24ರಂದು ದಸರಾ ಜಂಬೂ ಸವಾರಿ ನಡೆಯಲಿದ್ದು, ಅದಕ್ಕಾಗಿ ಗಜಪಡೆಯನ್ನು ತಯಾರಿ ಮಡುವ ಸಲುವಾಗಿ ಎರಡು ತಿಂಗಳ ಮುಂಚಿತವೇ ಮೈಸೂರಿಗೆ ಕರೆತರುವುದು ವಾಡಿಕೆ. ಅದರಂತೆ ಈ ಬಾರಿಯೂ ಆಗಸ್ಟ್‌ ಕೊನೆ ವಾರ ಅಂದರೆ 21ರಂದು ನಾಗರಹೊಳೆ ಉದ್ಯಾನದಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ ಗಜಪಯಣ ನಡೆಸುವ ಮೂಲಕ 6ರಿಂದ 8 ಆನೆಗಳ ಮೊದಲ ತಂಡವನ್ನು ಕರೆತರಲು ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.

ಅಂದು ವೀರನಹೊಸಹಳ್ಳಿಯಿಂದ ಬರುವ ಗಜಪಡೆಯ ಮೊದಲ ತಂಡ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ 3 ದಿನಗಳ ಕಾಲ ತಂಗಲಿವೆ. ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಸೌರಭ್‌ ಕುಮಾರ್‌ ನೇತೃತ್ವದಲ್ಲಿ ಆರ್‌ಎಫ್ಒ ಸಂತೋಷ್‌ಹೂಗಾರ್‌, ಪಶುವೈದ್ಯರಾದ ಡಾ. ರಮೇಶ್‌ ಮತ್ತು ಡಾ.ಮುಜೀಬ್‌ ತಂಡ ನಾಗರಹೊಳೆ ಅಭಯಾರಣ್ಯದ ವ್ಯಾಪ್ತಿಗೆ ಒಳಪಡುವ ಬಳ್ಳೆ, ಮತ್ತಿಗೋಡು, ದುಬಾರೆ ಆನೆ ಕ್ಯಾಂಪ್‌ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿರುವ ರಾಂಪುರ ಆನೆ ಶಿಬಿರಕ್ಕೆ ತೆರಳಿ ಅಂಬಾರಿ ಆನೆ ಅಭಿಮನ್ಯ ಸೇರಿ ದಸರಾ ಮಹೋತ್ಸವದಲ್ಲಿ ಕರೆತರಲು ಉದ್ದೇಶಿಸಿರುವ ಆನೆಗಳ ಸರ್ವಿಸ್‌ ಕಾರ್ಡ್‌ ಪರಿಶೀಲನೆ ನಡೆಸಿದ್ದಾರೆ. ಈ ಬಾರಿಯ ದಸರಾ ಮಹೋತ್ಸವ ಅ.15ರಿಂದ ಆರಂಭವಾಗಲಿದ್ದು, 24ರಂದು ಜಂಬೂಸವಾರಿ ನೆರವೇರಲಿದೆ.

8 ಆನೆಗಳು ಬರುವ ಸಾಧ್ಯತೆ:

ಈ ಬಾರಿಯ ಗಜಪಯಣದ ಮೂಲಕ ಮೊದಲ ತಂಡದಲ್ಲಿ 8 ಆನೆಗಳು ಬರುವ ಸಾಧ್ಯತೆಗಳಿದ್ದು, ಮತ್ತಿಗೋಡು ಶಿಬಿರದಿಂದ ಅಂಬಾರಿ ಆನೆ ಅಭಿಮನ್ಯು, ಭೀಮ, ಮಹೇಂದ್ರ, ಲಕ್ಷ್ಮೀ ಮತ್ತು ವರಲಕ್ಷ್ಮೀ. ಹಾಗೆಯೇ ಬಳ್ಳೆಯಿಂದ ಮಾಜಿ ಕ್ಯಾಪ್ಟನ್‌ ಅರ್ಜುನ, ದುಬಾರೆಯಿಂದ ಧನಂಜಯ ಮತ್ತು ಗೋಪಿ ಆನೆ ಕರೆತರಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.