“ನಮ್ಮ ಕೈತೋಟ-ನಮ್ಮ ಆಹಾರ” ತರಬೇತಿಗೆ ಅಪೂರ್ವ ಸ್ಪಂದನೆ


Team Udayavani, Feb 16, 2023, 10:42 AM IST

kaithota 1

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ಉದಯವಾಣಿ ದಿನಪತ್ರಿಕೆ ವತಿಯಿಂದ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದೊಂದಿಗೆ ಮಂಗಳೂರು ವಿ.ವಿ.ಯ ಕೊಣಾಜೆ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ “ಸಾವಯವ ಕೃಷಿ ಸ್ವಾವಲಂಬನೆಯ ‘ಖುಷಿ’ ಸರಣಿಯ “ನಮ್ಮ ಕೈತೋಟ – ನಮ್ಮ ಆಹಾರ’ 14ನೇ ತರಬೇತಿ ಕಾರ್ಯಕ್ರಮ ಬುಧವಾರ ಯಶಸ್ವಿಯಾಗಿ ನಡೆಯಿತು.

ಸಭಾ ಕಾರ್ಯಕ್ರಮ ಉದ್ಘಾಟನೆಯ ಬಳಿಕ ಇಬ್ಬರು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಮಾರ್ಗದರ್ಶನ ಜರ ಗಿತು. ಸಾವಯವ ಕೃಷಿಕರಾದ ಸ್ನೇಹಾ ಭಟ್‌ ಮಾತನಾಡಿ, ಪ್ರಕೃತಿಯಿಂದ ಮಾತ್ರ ಆರೋಗ್ಯಕರ ಆಹಾರ ಸಿಗಲು ಸಾಧ್ಯ. ಹೀಗಾಗಿ ಗಾರ್ಡನಿಂಗ್‌ ಮಾಡುವ ಬಗ್ಗೆ ಆದ್ಯತೆ ನೀಡಬೇಕಿದೆ. ತರಕಾರಿ, ಹೂ, ಹಣ್ಣಿನ ಗಿಡಗಳನ್ನು ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಬೇರೆ ಬೇರೆ ಮಾದರಿಯಲ್ಲಿ ಗಿಡ ನೆಡಲು ಅವಕಾಶವಿದೆಯಾದರೂ ಮಣ್ಣಿನ ಪಾತ್ರೆ ಸಹಿತ ಪರಿಸರ ಸ್ನೇಹಿಯಾಗಿ ಗಿಡ ನೆಡುವ ಬಗ್ಗೆ ಹೆಚ್ಚು ಆದ್ಯತೆ ನೀಡಬೇಕು. ಯಾವುದೋ ಒಂದು ಬೀಜ ತಂದು ನೆಟ್ಟರೆ ಸಾಲದು. ಅದು ಆರೋಗ್ಯಕರವಾಗಿರಬೇಕು ಎಂದರು.

ಬೇರೆಯವರ ಮನೆಯ ಹೂವಿನ ಗಿಡದಿಂದ ಹೂ ತಂದು ದೇವರಿಗೆ ಅರ್ಪಿಸುವ ಬದಲು ನಮ್ಮ ಮನೆಯಲ್ಲಿಯೇ ಹೂ ಗಿಡ ಬೆಳೆಸುವ ಮನೋಭಾವ ರೂಢಿಸಿಕೊಳ್ಳಬೇಕು. ಹೀಗಾಗಿ ನೀವು ಬೆಳೆದ ಒಂದು ಗಿಡದಲ್ಲಿ ಆಗುವ ಸೌತೆಕಾಯಿ, ಬದನೆ ಅಥವಾ ಯಾವುದೇ ತರಕಾರಿಯಿಂದ ಸಿಗುವ ಖುಷಿ ಅಪರಿಮಿತವಾದದ್ದು. ಹೀಗಾಗಿ ಗಾರ್ಡನಿಂಗ್‌ ಬಗ್ಗೆ ಆಸಕ್ತಿ ಮೂಡಿಸೋಣ; ಜತೆಗೆ ಮಕ್ಕಳನ್ನು ಅದರಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸೋಣ ಎಂದರು.

ಆಹಾರ ವಿಷಮುಕ್ತವಾಗಲಿ ಸಾವಯವ ಕೃಷಿಕರಾದ ಹರಿಕೃಷ್ಣ ಕಾಮತ್‌ ಪುತ್ತೂರು ಮಾತನಾಡಿ, ನಾವು ತಿನ್ನುವ ಬಹುತೇಕ ಆಹಾರವೂ ಈಗ ಗರಿಷ್ಠ ಪ್ರಮಾಣದಲ್ಲಿ ಕಲಬೆರಕೆಯದ್ದಾಗಿದೆ. ತರಕಾರಿಯಲ್ಲಿ ಬೀಜ ಹಾಳಾಗಬಾರದು ಎಂಬ ಕಾರಣಕ್ಕೆ ರಾಸಾಯನಿಕ ಲೇಪನ, ಮೊಳಕೆ ಬರಲು ಮತ್ತೂಂದು ರಾಸಾಯನಿಕ ಸಿಂಪಡಣೆ ಸಹಿತ ಹಂತ ಹಂತವಾಗಿ ಗಿಡಕ್ಕೆ ಸುಮಾರು 3 ವಾರ ಕೀಟನಾಶಕ, ರಸಗೊಬ್ಬರ ಹಾಕಿ ಅದರಿಂದ ಬಂದ ತರಕಾರಿ ಮಾರುಕಟ್ಟೆಗೆ ಬರುತ್ತದೆ. ಇದು ಸಾಲದೆಂಬಂತೆ, ಮಾರುಕಟ್ಟೆಯಲ್ಲಿ ಚಂದ ಕಾಣಬೇಕು, ಬೇಗನೆ ಹಾಳಾಗಬಾರದು. ಬೇಗ ಹಣ್ಣಾಗಬೇಕು ಎಂಬ ದುರಾಸೆಯಿಂದ ರಾಸಾಯನಿಕ ಮಿಶ್ರಣ ಮಾಡಲಾಗುತ್ತಿದೆ ಎಂದರು. ನಾವು ಚಿಕ್ಕವರಿರುವಾಗ ಬಿಪಿ, ಶುಗರ್‌ ಸಮಸ್ಯೆ ಇರಲಿಲ್ಲ.

ಆದರೆ ಈಗ ಬಿಪಿ, ಶುಗರ್‌, ಕ್ಯಾನ್ಸರ್‌, ಹೃದಯ ಸಂಬಂಧಿ ಕಾಯಿಲೆಗಳದ್ದೇ ಸುದ್ದಿ. ಯಾವುದೇ ಬ್ಯಾಕ್ಟೀರಿಯಾ, ವೈರಸ್‌ನಿಂದ ಇದು ಬರುವುದಲ್ಲ. ಬದಲಾಗಿ, ನಾವು ತಿನ್ನುವ ಆಹಾರ ಹಾಗೂ ನಮ್ಮ ಜೀವನ ಪದ್ಧತಿಯಿಂದಾಗಿ ಇದು ಬರುತ್ತದೆ. ಹೀಗಾಗಿ ಇದರಿಂದ ಮುಕ್ತಿ ಸಿಗಲು ನಾವು ತಿನ್ನುವ ಆಹಾರವನ್ನು ವಿಷಮುಕ್ತಗೊಳಿಸಬೇಕು ಎಂದರು.

ಗಮನ ಸೆಳೆದ ವಸ್ತು ಪ್ರದರ್ಶನ

ಸಾವಯವ ತರಕಾರಿ, ಕೈತೋಟ ಬೆಳೆಸುವುದು ಹೇಗೆ, ಅಲಂಕಾರಿಕ ಗಿಡ ಪಾಲನೆ ಕುರಿತಂತೆ ತರಬೇತಿ ನಡೆಯಿತು. ಜತೆಗೆ, ಉತ್ತಮ ತಳಿಯ ತರಕಾರಿ ಬೀಜ, ವಿವಿಧ ಗೊಬ್ಬರಗಳು, ತೋಟಗಾರಿಕೆ ವಸ್ತುಗಳ ಪ್ರದರ್ಶನ ಗಮನಸೆಳೆಯಿತು. ನಗರದ ಸಣ್ಣ ಸ್ಥಳದಲ್ಲಿಯೂ ಗಿಡ ನೆಡುವ ಪರಿಕಲ್ಪನೆಯನ್ನು ಮಾದರಿ ರೂಪದಲ್ಲಿ ಪ್ರದರ್ಶಿಸಲಾಯಿತು. ಜತೆಗೆ ಸಾವಯವ ಉತ್ಪನ್ನಗಳ ಮಾರಾಟ ನಡೆಯಿತು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.