ಗ್ರಾಮಗಳ ಸ್ವರೂಪ ಬದಲಿಸಿದ ನರೇಗಾ : ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ
Team Udayavani, Sep 10, 2020, 4:52 PM IST
ಶಿಡ್ಲಘಟ್ಟ: ಉದ್ಯೋಗ ಖಾತ್ರಿ ಯೋಜನೆ ತಾಲೂಕಿನ ಗ್ರಾಮೀಣ ಜನರಿಗೆ ವರದಾನವಾಗಿದೆ. ದಿನೇ ದಿನೆ ಗ್ರಾಮಗಳ ಸ್ವರೂಪವೇ ಬದಲಾಗುತ್ತಿದೆ. ನರೇಗಾ ಪರಿಣಾಮಕಾರಿ ಅನುಷ್ಠಾನಗೊಳಿಸಿ ಶಿಕ್ಷಣ, ಆರೋಗ್ಯ, ಕ್ರೀಡೆ, ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ, ನೀರಾವರಿ ಮತ್ತು ಪರಿಸರ ಸಂರಕ್ಷಣೆ ಮಾಡುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಜನಸಾಮಾನ್ಯರಿಗೆ ಅನೇಕ ಸೌಲಭ್ಯಗಳು ಈ ಮೂಲಕ ಲಭಿಸುತ್ತಿವೆ.
ತಾಲೂಕಿನಲ್ಲಿ ಅಂತರ್ಜಲಮಟ್ಟ ವೃದ್ಧಿಗೊಳಿಸುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಅದರಲ್ಲಿ ಪ್ರಮುಖವಾಗಿ ಮಳೆ ನೀರು ಸಂರಕ್ಷಣೆ ಮಾಡಲು ಬಹುಕಮಾನ್ ಚೆಕ್ ಡ್ಯಾಂ, ಪೂರ್ವಜರು ನಿರ್ಮಿಸಿರುವ ಕೆರೆ, ಗೋಕುಂಟೆ, ಕಲ್ಯಾಣಿಗಳನ್ನು ಅಭಿವೃದ್ಧಿಗೊಳಿಸಿ ಕೊಳವೆಬಾವಿಗಳಿಗೆ ಜಲಮರು ಪೂರ್ಣಗೊಳಿಸುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ವಿಧಾನಸಭೆ ಮಾದರಿಯಲ್ಲಿ ಗ್ರಾಪಂ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಿ, ಗ್ರಾಮೀಣ ಜನರಿಗೆ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲಾಗಿದೆ. ತಾಲೂಕಿನ 28 ಗ್ರಾಪಂಗಳ ಪೈಕಿ ಈಗಾಗಲೇ 12ಕ್ಕೆ ರಾಜೀವ್ಗಾಂಧಿ ಸೇವಾ ಕೇಂದ್ರವಾಗಿ ಅಭಿವೃದ್ಧಿಗೊಳಿಸಲಾಗಿದೆ.
ತಾಲೂಕಿನಲ್ಲಿ ಸುರಿಯುವ ಮಳೆ ನೀರು ವ್ಯರ್ಥವಾಗಿ ಹರಿಯಬಾರದೆಂಬ ಉದ್ದೇಶದಿಂದ ಬಹು ಕಮಾನ್ ಚೆಕ್ಡ್ಯಾಂ ನಿರ್ಮಿಸಲಾಗಿದ್ದು, ಅಲ್ಲಿಯೂ ನೀರು ಶೇಖರಣೆಯಾಗಿ ಮಿನಿ ದ್ವೀಪಗಳಾಗಿ ಪರಿವರ್ತನೆಗೊಂಡಿವೆ. ಮಳೆ ನೀರು ಕೆರೆಗಳಿಗೆ ಹರಿಯಲು ಅದಕ್ಕೆ ಪೂರಕ ಕಾಲುವೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಪ್ರಾಣಿ ಪಕ್ಷಿಗಳು, ದನಕರುಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಸಿಮೆಂಟ್ ತೊಟ್ಟಿಗಳು, ಗೋಕುಂಟೆ ನಿರ್ಮಿಸಲಾಗಿದೆ. ಇದರಿಂದ ಜಾನುವಾರುಗಳು ನೀರಿನ ದಾಹವನ್ನು ನೀಗಿಸಿಕೊಳ್ಳುತ್ತಿವೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿ: ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಪರಿಸರದಲ್ಲಿ ಮಕ್ಕಳಿಗೆ ಶಿಕ್ಷಣ ಲಭಿಸಬೇಕೆಂದು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯ ಅಭಿವೃದ್ಧಿ ಗೊಳಿಸುವ ಜೊತೆಗೆ ವಿದ್ಯಾರ್ಥಿಗಳ ಭದ್ರತೆಗಾಗಿ ಕಾಂಪೌಂಡ್ ನಿರ್ಮಿಸಲಾಗಿದೆ.
ಹಾಗೆಯೇ ಪುಟಾಣಿಗಳಿಗೆ ಗೋಡೆಗಳು ಸಹ ಮಾತನಾಡಿಸುವಂತೆ ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಮಾಡಲಾಗಿದೆ.
ಭವಿಷ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಕ್ರಾಂತಿ ಉಂಟು ಮಾಡುವ ವಾತಾವರಣವನ್ನು ಸೃಷ್ಟಿಸಲಾಗಿದೆ. ಜಿಲ್ಲೆಯ ರೈತರಿಗೆ ನರೇಗಾ ಯೋಜನೆಯಡಿ ಹೆಚ್ಚಿನ ಅನುಕೂಲ ಕಲ್ಲಿಸಲು ಜಿಪಂ ಸಿಇಒ ಫೌಝೀಯಾ ತರುನ್ನುಮ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೈತರ ಹೊಲದಲ್ಲಿ ಬದುಗಳ ನಿರ್ಮಾಣ, ಕೃಷಿ ಹೊಂಡ ನಿರ್ಮಿಸಲು ಆದ್ಯತೆ ನೀಡಲಾಗಿದೆ.
ಉದ್ಯೋಗ ಖಾತ್ರಿ ಯೋಜನೆ ಮೂಲಕ ಕೂಲಿ ಕಾರ್ಮಿಕರಿಗೆ ಕೆಲಸದ ಜೊತೆಗೆ ಗ್ರಾಮೀಣ ಪ್ರದೇಶ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಸಿದ್ಧಪಡಿಸಿ ಜಿಪಂ ಸಿಇಒ ಸಲಹೆ-ಸೂಚನೆ ಮೇಲೆ ಅನುಷ್ಠಾನಗೊಳಿಸುತ್ತಿದ್ದೇವೆ. ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದೇವೆ. ಗ್ರಾಮಸ್ಥರು ಮತ್ತು ಚುನಾಯಿತ ಪ್ರತಿನಿಧಿಗಳು ಸಹಕರಿಸುತ್ತಿದ್ದಾರೆ.
– ಬಿ.ಶಿವಕುಮಾರ್, ಇಒ, ಶಿಡ್ಲಘಟ್ಟ ತಾಪಂ
– ಎಂ.ಎ.ತಮೀಮ್ ಪಾಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.