Nobel Peace Prize:ನರ್ಗೀಸ್‌ ಮೊಹಮ್ಮದಿ: ಇರಾನ್‌ನಲ್ಲಿನ ಮಾನವ ಹಕ್ಕುಗಳ ಹೋರಾಟಗಾರ್ತಿ


Team Udayavani, Oct 6, 2023, 11:44 PM IST

nargis nobel

ಇರಾನ್‌ನಲ್ಲಿನ ಮಹಿಳೆಯರ ಪರವಾಗಿ ಮಾನವ ಹಕ್ಕುಗಳು ಮತ್ತು ಎಲ್ಲರಿಗೂ ಸ್ವಾತಂತ್ರ್ಯ ನೀಡಬೇಕು ಎಂದು ಹೋರಾಟ ನಡೆಸಿ, ಈಗ ಜೈಲುಪಾಲಾಗಿರುವ ಇರಾನಿನ ಹೋರಾಟಗಾರ್ತಿ ನರ್ಗೀಸ್‌ ಮೊಹಮ್ಮದಿ ಅವರಿಗೆ ಈ ವರ್ಷದ ನೊಬೆಲ್‌ ಶಾಂತಿ ಪ್ರಶಸ್ತಿ ಘೋಷಣೆಯಾಗಿದೆ. ಡಿಫೆಂಡರ್ಸ್‌ ಆಫ್ ಹ್ಯೂಮನ್‌ ರೈಟ್ಸ್‌ ಸೆಂಟರ್‌ನ ಉಪ ನಿರ್ದೇಶಕಿಯಾಗಿರುವ ಇವರು ಸದ್ಯ ಟೆಹರಾನ್‌ನಲ್ಲಿರುವ ಎವಿನ್‌ ಜೈಲಿನಲ್ಲಿದ್ದಾರೆ. ಈಗಾಗಲೇ 13 ಬಾರಿ ಜೈಲುಶಿಕ್ಷೆಗೆ ಒಳಗಾಗಿರುವ ಇವರನ್ನು 5 ಬಾರಿ ದೋಷಿ ಎಂದು ಘೋಷಿಸಲಾಗಿದೆ. ಒಟ್ಟಾರೆಯಾಗಿ 31 ವರ್ಷಗಳ ಜೈಲು ಶಿಕ್ಷೆಯಲ್ಲಿದ್ದಾರೆ.

ಕಳೆದ ವರ್ಷ ಇರಾನ್‌ನಲ್ಲಿ 22 ವರ್ಷದ ಯುವಕನೊಬ್ಬ ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದ. ಇದನ್ನು ವಿರೋಧಿಸಿ ಅಲ್ಲಿ ಸಾಕಷ್ಟು ಪ್ರತಿಭಟನೆಗಳೂ ನಡೆದಿದ್ದವು. ಇತ್ತೀಚೆಗಷ್ಟೇ ಇವರು ಸಾವಿಗೀಡಾದ ಯುವಕ ಮಹ್ಸಾ ಅಮಿನಿ ಸ್ಮರಣಾರ್ಥ ನಡೆದ ಸ್ಮರಣ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಮಹ್ಸಾ ಸಾವಿನ ಬಳಿಕ ನಡೆದ ಹೋರಾಟಗಳಲ್ಲಿ ಭಾಗಿಯಾಗಿದ್ದ ಮೊಹ್ಮಮದಿ ಮಹಿಳೆಯರ ಜೀವನ, ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿದ್ದರು.

ಅಂದ ಹಾಗೆ 51 ವರ್ಷದ ಮೊಹಮ್ಮದಿ ಅವರು ಭೌತಶಾಸ್ತ್ರದಲ್ಲಿ ಪದವಿ ಪಡೆದಿದ್ದು, ಎಂಜಿನಿಯರ್‌ ಆಗಿ ಕೆಲಸ ಆರಂಭಿಸಿದ್ದರು. ವಿದ್ಯಾಭ್ಯಾಸದ ಹಂತದಲ್ಲಿಯೇ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದರು. ಅಲ್ಲದೆ ಮಹಿಳೆಯರ ಪರವಾಗಿ ಪತ್ರಿಕೆಗಳಲ್ಲಿ ಬರೆಯುತ್ತಿದ್ದರು. ರಾಜಕೀಯ ವಿದ್ಯಾರ್ಥಿ ಗುಂಪುಗಳ ಎರಡು ಸಭೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಜತೆಗೆ 2009ರಲ್ಲಿ ಎಂಜಿನಿಯರಿಂಗ್‌ ಹುದ್ದೆಯನ್ನೂ ಕಳೆದುಕೊಂಡರು.

ಜತೆಗೆ ಇರಾನ್‌ನಲ್ಲಿ ಮರಣದಂಡನೆ ತೆಗೆದುಹಾಕಬೇಕು, ಮಹಿಳೆಯರಿಗೂ ಹಕ್ಕು ನೀಡಬೇಕು ಮತ್ತು ಪ್ರತಿಭಟನ ಹಕ್ಕು ನೀಡಬೇಕು ಎಂದು ಆಂದೋಲನ ನಡೆಸಿದ್ದೂ ಅಲ್ಲದೆ ಪತ್ರಕರ್ತೆಯಾಗಿ ಹಲವಾರು ಪತ್ರಿಕೆಗಳಿಗೆ ಲೇಖನ ಬರೆದಿದ್ದಾರೆ. ಮೊಹಮ್ಮದಿ ಅವರನ್ನು 2011ರಲ್ಲಿ ಮೊದಲ ಬಾರಿಗೆ ಬಂಧಿಸಲಾಗಿತ್ತು. ಆಗ ಹೋರಾಟಗಾರರ ಕುಟುಂಬಗಳಿಗೆ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿಸಿ ಹಲವಾರು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಲಾಗಿತ್ತು.

ಮೊಹಮ್ಮದಿ ಅವರು ನೊಬೆಲ್‌ ಶಾಂತಿ ಪ್ರಶಸ್ತಿ ಪಡೆಯುತ್ತಿರುವ 19ನೇ ಮಹಿಳೆ. 2003ರಲ್ಲಿ ಮಾನವ ಹಕ್ಕುಗಳ ಹೋರಾಟಗಾರ್ತಿ ಶಿರಿನ್‌ ಎಬಾದಿ ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು. ಅಲ್ಲದೆ ಜೈಲಿನಲ್ಲಿರುವವರಿಗೆ 5ನೇ ಬಾರಿಗೆ ಪ್ರಶಸ್ತಿ ನೀಡಲಾಗುತ್ತಿದೆ.

ಮೊಹಮ್ಮದಿ ಅವರಿಗೆ ಈಗಾಗಲೇ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳೂ ದೊರಕಿವೆ. 2009ರಲ್ಲಿ ಅಲೆಕ್ಸಾಂಡರ್‌ ಲಾಂಗರ್‌ ಪ್ರಶಸ್ತಿ, ಯುನೆಸ್ಕೋ ವಿಶ್ವ ಪ್ರಸ್‌ ಫ್ರೀಡಂ ಪ್ರಶಸ್ತಿ, ಅಲೋಫ್ ಪಾಲ್ಮೆ ಪ್ರಶಸ್ತಿಯೂ ಸಿಕ್ಕಿದೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.