ಈಗ “ನಟರಾಜ ಸರ್ವಿಸ್‌’ಗೆ ಆದ್ಯತೆ


Team Udayavani, May 15, 2020, 2:36 PM IST

ಈಗ “ನಟರಾಜ ಸರ್ವಿಸ್‌’ಗೆ ಆದ್ಯತೆ

ಮಣಿಪಾಲ: ಜಗತ್ತಿನ ಶೇ. 80ರಷ್ಟು ರಾಷ್ಟ್ರಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿದ ಸಂದರ್ಭದಲ್ಲಿ ವಾಹನ ಸಂಚಾರ, ಕಾರ್ಖಾನೆಗಳು ಸ್ಥಗಿತಗೊಂಡು ಇಂಧನ ಬಳಕೆ ಶೇ. 90ರಷ್ಟು ಕಡಿಮೆಯಾಗಿತ್ತು. ಪ್ರತಿದಿನ ವಾಹನಗಳಿಂದ ತುಂಬಿರುತ್ತಿದ್ದ, ಶಬ್ದ ಮಾಲಿನ್ಯ, ವಾಯು ಮಾಲಿನ್ಯದ ಗೂಡಾಗಿದ್ದ ರಾಜಧಾನಿಗಳು ಮತ್ತು ನಗರಗಳ ಮಾಲಿನ್ಯ ಕಡಿಮೆಯಾಗಿ ನೀಲಿ ಆಕಾಶ ಕಾಣಿಸುತ್ತಿದೆ. ಭಾರತದಲ್ಲಂತೂ ನೂರಾರು ಮೈಲು ದೂರದ ಹಿಮಾಲಯ ಪರ್ವತವೂ ಉತ್ತರ ಭಾರತದ ಜನರಿಗೆ ಗೋಚರಿಸುತ್ತಿದೆ. ಜಗತ್ತಿನ ಇತರ ರಾಷ್ಟ್ರಗಳಲ್ಲೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಮುಂಜಾನೆ ಪಕ್ಷಿಗಳ ಕಲರವ ಕಿವಿ ತುಂಬುತ್ತಿದೆ. ಶುದ್ಧ ತಂಗಾಳಿ ಮೈ ಸ್ಪರ್ಶಿಸುತ್ತಿದೆ.

ಒಂದೆಡೆ ಕೋವಿಡ್‌ ಇನ್ನಿಲ್ಲದ ದುಷ್ಪರಿಣಾಮ ಬೀರಿದರೂ ಮತ್ತೂಂದೆಡೆಯಿಂದ ವಿಶ್ವದ ಹವಾಮಾನದ ಮೇಲೆ ಒಳ್ಳೆಯ ಪರಿಣಾಮವನ್ನೇ ಬೀರಿದೆ. ಶಬ್ದ ಮಾಲಿನ್ಯ, ವಾಯು ಮಾಲಿನ್ಯದ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿರುವುದು ಕಂಡುಬಂದಿದೆ. ಹಲವು ರಾಷ್ಟ್ರಗಳು ಸದ್ಯದ ಪರಿಸ್ಥಿತಿಯನ್ನು ಪರಿಸರ ಸ್ನೇಹಿಯಾಗಿ ಮಾರ್ಪಾಡಿಸುವತ್ತ ಒಲವು ತೋರುತ್ತಿದ್ದು, ವಾಹನ ದಟ್ಟಣೆಯಿಂದ ಪರಿಸರಕ್ಕಾಗುತ್ತಿದ್ದ ಮಾಲಿನ್ಯ ಮಟ್ಟವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿವೆ ಎಂದು ಮೇಡ್‌ ಫಾರ್‌ ಮೈಂಡ್‌ ವರದಿ ಮಾಡಿದೆ.

ಮತ್ತೆ ಸೈಕಲ್‌ ಸವಾರಿ
ಬ್ರಸೆಲ್ ಈಗಾಗಲೇ ಲಾಕ್‌ಡೌನ್‌ ನಿಯಮಗಳನ್ನು ಒಂದು ಹಂತಕ್ಕೆ ಸಡಿಲಗೊಳಿಸಿದ್ದು, ಸಾರ್ವಜನಿಕ ಸಂಚಾರಕ್ಕೂ ಅವಕಾಶ ಕಲ್ಪಿಸಿಕೊಟ್ಟಿದೆ. ಆದರೆ 25 ಮೈಲಿಗಳ ವ್ಯಾಪ್ತಿಯ ಒಳಗಿನ ಸಂಚಾರಕ್ಕೆ ಸೈಕಲ್‌ಗ‌ಳನ್ನು ಬಳಸುವಂತೆ ಹೇಳಿದ್ದು, ಕೋವಿಡ್‌-19 ಬಳಲಿ ಬೆಂಡಾಗಿರುವ ಜನರು ಚಕಾರವೆತ್ತದೆ ಈ ನಿಯಮ ಪಾಲಿಸುತ್ತಿದ್ದಾರೆ. ಇನ್ನು ಸದಾ ವಾಹನ ದಟ್ಟಣೆಯಿಂದ ಗಿಜಿಗುಡುತ್ತಿದ್ದ ಐರೋಪ್ಯ ಒಕ್ಕೂಟ ರಾಷ್ಟ್ರಗಳಲ್ಲಿ ಇದೇ ನಿಯಮವನ್ನು ಅಳವಡಿಸಲಾಗಿದ್ದು, ಬೆರಳಣಿಕೆಯಷ್ಟು ಕಾರುಗಳು ಮಾತ್ರ ರಸ್ತೆಗೆ ಇಳಿದಿವೆ. ಸೀಮಿತ ದೂರದ ಓಡಾಟಕ್ಕಾಗಿ ಜನರು ಸೈಕಲ್‌ಗ‌ಳನ್ನು ಬಳಸುತ್ತಿದ್ದಾರೆ.

ಕಾಲ್ನಡಿಗೆಗೆ ಮೊರೆ
ಹೆಚ್ಚೆಚ್ಚು ಜನರು ಈಗ ನಾಗರಿಕತೆಯ ಆರಂಭದ ದಿನಗಳಿಂದಲೂ ಇದ್ದ ನಟರಾಜ ಸರ್ವಿಸ್‌ ಅರ್ಥಾತ್‌ ಕಾಲ್ನಡಿಗೆಯ ಮೊರೆ ಹೋಗಿದ್ದಾರೆ. ಲಾಕ್‌ಡೌನ್‌ ಸಡಿಲಿಕೆಯಾದ ಬಳಿಕ ಪಾದಚಾರಿಗಳ ಸಂಖ್ಯೆ ಯಲ್ಲಿ ಗಣನೀಯವಾದ ಏರಿಕೆ ಯಾಗಿರುವುದು ಒಂದು ಸಕಾರಾತ್ಮಕವಾದ ಬೆಳವಣಿಗೆ. ಒಂದೆರೆಡು ಕಿ.ಮೀ. ದೂರಕ್ಕೂ ಸಾರ್ವಜನಿಕ ವಾಹನಗಳನ್ನು ಬಳಸುತ್ತಿದ್ದ ಜನರು ಈಗ ನಡೆದು ಹೋಗುವುದನ್ನು ರೂಢಿಸಿ ಕೊಳ್ಳುತ್ತಿದ್ದಾರೆ. ಬೆಲ್ಜಿಯಂ ಸೇರಿ ಇನ್ನೂ ಕೆಲವು ದೇಶಗಳಲ್ಲಿ ಕಡಿಮೆ ದೂರದ ಪ್ರಯಾಣಕ್ಕೆ ಸೈಕಲ್‌ ಬಳಸುವ ನಿಯಮವನ್ನು ಜಾರಿಗೊಳಿಸಲಾಗಿದೆ. ಕೋವಿಡ್‌ ಮನು ಷ್ಯರಿಗೆ ಎಷ್ಟೇ ಹಾನಿ ಉಂಟು ಮಾಡಿದ್ದರೂ ಪ್ರಕೃತಿಗೆ ಉಪಕಾರವನ್ನೇ ಮಾಡಿದೆ ಎಂದು ಧಾರಾಳವಾಗಿ ಹೇಳಬಹುದು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.