Navaratri: ಕರಾವಳಿಯಲ್ಲಿ ಇಂದಿನಿಂದ ನವರಾತ್ರಿ ಸಂಭ್ರಮ


Team Udayavani, Oct 3, 2024, 7:10 AM IST

ಕರಾವಳಿಯಲ್ಲಿ ಇಂದಿನಿಂದ ನವರಾತ್ರಿ ಸಂಭ್ರಮ

"ಮಂಗಳೂರು ದಸರಾ ಮಹೋತ್ಸವ'ದ ಹಿನ್ನೆಲೆಯಲ್ಲಿ ವಿದ್ಯುದ್ದೀಪಾಲಂಕೃತ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ.

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಅ.3ರಂದು ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು, ವಿವಿಧ ದೇವಾಲಯಗಳನ್ನು ವಿದ್ಯುತ್‌ ದೀಪ, ಹೂವು, ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.

ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.

ದ.ಕ. ಜಿಲ್ಲೆಯ ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಸಹಿತ ವಿವಿಧ ದೇವಿ ಆಲಯಗಳಲ್ಲಿ ನವರಾತ್ರಿಯ ವಿಶೇಷ ಪೂಜೆ ನೆರವೇರಲಿದೆ.

“ಮಂಗಳೂರು ದಸರಾ’ ಖ್ಯಾತಿಯ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಾಗೂ ರಥಬೀದಿಯ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ ವಿಜೃಂಭಣೆ ಯಿಂದ ನೆರವೇರಲಿದೆ. ಮಂಗಳೂರು ದಸರಾ ಹಿನ್ನೆಲೆಯಲ್ಲಿ ಮಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ, ಸರಕಾರಿ, ಖಾಸಗಿ ಕಟ್ಟಡಗಳನ್ನು ವಿದ್ಯುತ್‌ ದೀಪಾಲಂಕಾರಗೊಳಿಸಲಾಗಿದೆ.

ಉಡುಪಿ ಜಿಲ್ಲೆ: ನವರಾತ್ರಿ ಸಂಭ್ರಮ
ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ನವರಾತ್ರಿ ಉತ್ಸವ ಅ. 3ರಿಂದ ಒಂಭತ್ತು ದಿನಗಳ ಕಾಲ ನಡೆಯಲಿದೆ. ದೇವಿ ದೇವಸ್ಥಾನಗಳಲ್ಲಿ ನವರಾತ್ರಿ ಉತ್ಸವಕ್ಕೆ ತಯಾರಿ ಕಾರ್ಯಗಳು ನಡೆದಿದೆ.

ನವರಾತ್ರಿಯ ಪರ್ವಕಾಲದಲ್ಲಿ ಕದಿರು ಕಟ್ಟುವ ಸಂಪ್ರದಾಯದೊಂದಿಗೆ ದುರ್ಗೆಯರ ಆರಾಧನೆ ಜರಗಲಿದೆ. ದೇವಸ್ಥಾನಗಳಲ್ಲಿ ಕದಿರು ಕಟ್ಟುವ ದಿನವೇ ಭಕ್ತರ ಮನೆಗಳಲ್ಲೂ ಕದಿರು ಕಟ್ಟುತ್ತಾರೆ. ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ, ನೀಲಾವರ ಶ್ರೀ ಮಹಿಷಮರ್ದಿನಿ, ಉಚ್ಚಿಲ ಮಹಾಲಕ್ಷ್ಮೀ, ಉಡುಪಿಯ ನಾಲ್ದಿಕ್ಕುಗಳಲ್ಲಿರುವ ದೇವಿ ದೇವಸ್ಥಾನಗಳಲ್ಲಿ ಸಡಗರದ ನವರಾತ್ರಿ ಉತ್ಸವಗಳು ಜರಗಲಿವೆ.

ಉಡುಪಿ ಶ್ರೀಕೃಷ್ಣಮಠದಲ್ಲೂ ನವರಾತ್ರಿ ಉತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಒಂಬತ್ತೂ ದಿನಗಳಲ್ಲಿ ಶ್ರೀಕೃಷ್ಣನಿಗೆ ದೇವಿಯ ವಿವಿಧ ಅಲಂಕಾರಗಳನ್ನು ನಡೆಸಲಾಗುತ್ತದೆ.ದೇವಿ ದೇವಸ್ಥಾನಗಳಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ, ಹೋಮ, ಹವನ, ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಎಲ್ಲ ಪ್ರಮುಖ ದೇವಿ ದೇವಸ್ಥಾನಗಳಲ್ಲಿ ಅನ್ನ ಸಂತರ್ಪಣೆ ಜರಗಲಿದೆ. ದೇವಸ್ಥಾನಗಳಲ್ಲಿ ವಿದ್ಯುತ್‌ ದೀಪ ಸಹಿತ ಹೂವಿನ ಅಲಂಕಾರ ಕಣ್ಮನ ಸೆಳೆಯುತ್ತಿದೆ. ಮನೆಗಳಲ್ಲಿ ನವರಾತ್ರಿ ಗೊಂಬೆ ಕೂರಿಸಿ ದೇವಿಯರ ವ್ರತಾಚರಣೆ ನಡೆಯುತ್ತದೆ.

ಚಿತ್ರ:ಸತೀಶ್‌ ಇರಾ

ಟಾಪ್ ನ್ಯೂಸ್

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಎಲ್ಲೆಡೆ ಚರ್ಚೆ

World War 3…?: ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

WhatsApp Image 2024-10-01 at 9.22.19 PM

Navaratri: ನವ ಮಹಾಭಾರತ- ದ್ರೌಪದಿಯ ನಿಟ್ಟುಸಿರಿಗೆ ಕೊನೆ ಎಂದು…? ಬದಲಾಗದ ಹೆಣ್ಣಿನ ಬವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಕರಾವಳಿಯಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಮುಂಗಾರು ಮಳೆ; ಹಿಂಗಾರಿನ ಮೇಲೆ ನಿರೀಕ್ಷೆ

Rain: ಕರಾವಳಿಯಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಮುಂಗಾರು ಮಳೆ; ಹಿಂಗಾರಿನ ಮೇಲೆ ನಿರೀಕ್ಷೆ

Surathkal: ನಕಲಿ ಲೆಕ್ಕ ತೋರಿಸಿ ಕೋಟ್ಯಂತರ ರೂ. ವಂಚನೆ

Surathkal: ನಕಲಿ ಲೆಕ್ಕ ತೋರಿಸಿ ಕೋಟ್ಯಂತರ ರೂ. ವಂಚನೆ

Rain: ವಾರಾಂತ್ಯದಿಂದ ಮತ್ತೆ ಮಳೆ ಸಾಧ್ಯತೆ; ತಾಪಮಾನ ಏರಿಕೆ

Rain: ವಾರಾಂತ್ಯದಿಂದ ಮತ್ತೆ ಮಳೆ ಸಾಧ್ಯತೆ; ತಾಪಮಾನ ಏರಿಕೆ

Karnataka: ಗೇರು ಉತ್ಪಾದಕರ ಅಸೋಸಿಯೇಶನ್‌: ಅಧ್ಯಕ್ಷರಾಗಿ ಅನಂತ ಕೃಷ್ಣ ರಾವ್‌ ಆಯ್ಕೆKarnataka: ಗೇರು ಉತ್ಪಾದಕರ ಅಸೋಸಿಯೇಶನ್‌: ಅಧ್ಯಕ್ಷರಾಗಿ ಅನಂತ ಕೃಷ್ಣ ರಾವ್‌ ಆಯ್ಕೆ

Karnataka: ಗೇರು ಉತ್ಪಾದಕರ ಅಸೋಸಿಯೇಶನ್‌: ಅಧ್ಯಕ್ಷರಾಗಿ ಅನಂತ ಕೃಷ್ಣ ರಾವ್‌ ಆಯ್ಕೆ

Train: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲುTrain: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

Train: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಎಲ್ಲೆಡೆ ಚರ್ಚೆ

World War 3…?: ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.