NEP: ಕುಲಪತಿಗಳ ಜತೆ ಇಂದು ಸಿಎಂ ಸಭೆ
Team Udayavani, Aug 20, 2023, 11:13 PM IST
ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನ ಸೌಧದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸರಕಾರಿ ವಿಶ್ವವಿದ್ಯಾನಿಲಯಗಳ ಕುಲಪತಿಗಳ ಸಭೆ ಕರೆದಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.
ರಾಜ್ಯದ ಉನ್ನತ ಶಿಕ್ಷಣದಲ್ಲಿ ಈಗಾ ಗಲೇ ಎನ್ಇಪಿ ಅಳವಡಿಕೆಯಾಗಿದ್ದು, ಈ ನೀತಿಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಚುನಾವಣೆ ಪೂರ್ವದಲ್ಲೇ ಘೋಷಿಸಿತ್ತು. ಕಾಂಗ್ರೆಸ್ ಸರಕಾರ ರಚನೆಯಾದ ಬಳಿಕವೂ ಎನ್ಇಪಿ ರದ್ದು ಪಡಿಸುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಲೇ ಬಂದಿದ್ದರು. ಸೋಮವಾರ ನಡೆಯುವ ಸಭೆ ಈ ನಿಟ್ಟಿನಲ್ಲಿ ಸರಕಾರ ಇಡುತ್ತಿರುವ ಮೊದಲ ಮಹತ್ವದ ಹೆಜ್ಜೆ ಎನ್ನಲಾಗುತ್ತಿದೆ.
ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಎರಡು ತಿಂಗಳ ಹಿಂದೆ ಕುಲಪತಿಗಳ ಸಭೆ ಕರೆದು ಎನ್ಇಪಿ ಬಗ್ಗೆ ಲಿಖೀತವಾಗಿ ತಮ್ಮ ಅಭಿ
ಪ್ರಾಯ ತಿಳಿಸುವಂತೆ ಸೂಚಿಸಿದ್ದರು. ಆದರೆ ಹೆಚ್ಚಿನ ಕುಲಪತಿಗಳು ಲಿಖೀತ ಅಭಿಪ್ರಾಯ ತಿಳಿಸಿರಲಿಲ್ಲ. ಸಿಎಂ ಜತೆಗಿನ ಸಭೆಯಲ್ಲಿ ವಿವಿಗಳ ಆಡಳಿತಾತ್ಮಕ ವಿಷಯಗಳ ಬಗ್ಗೆಯೂ ಚರ್ಚೆ ನಡೆಯಲಿದೆ.
ಮಂಗಳವಾರ ಬಿಜೆಪಿ ಸಭೆ
ಎನ್ಇಪಿ ರದ್ದುಗೊಳಿಸುವ ವಿಚಾರ ಮತ್ತು ಸರಕಾರಿ ಶಾಲೆಗಳನ್ನು ಸಿಎಸ್ಆರ್ ನಿಧಿಯಡಿ ಅಭಿವೃದ್ಧಿಪಡಿಸಿ ಖಾಸಗಿ ಶಾಲೆಗಳಿಗೆ ನಿರ್ವಹಣೆ ನೀಡುತ್ತಿ
ರುವುದನ್ನು ಖಂಡಿಸಿ ಸೋಮವಾರ ಬಿಜೆಪಿಯ ಹಿರಿಯ ನಾಯಕರು ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್, ಬಿ. ಸಿ. ನಾಗೇಶ್, ಶಿಕ್ಷಣ ಮತ್ತು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ಆಯ್ಕೆ
ಯಾಗಿರುವ ಬಿಜೆಪಿ ಸದಸ್ಯರು ಹಾಗೂ ಶಿಕ್ಷಣ ತಜ್ಞರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.