ಎನ್‌ಇಪಿ: ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿ


Team Udayavani, Sep 30, 2021, 5:55 AM IST

ಎನ್‌ಇಪಿ: ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿ

ಪ್ರಸಕ್ತ ಸಾಲಿನಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನಕ್ಕೆ ಸರಕಾರ ನಿರ್ಧರಿಸಿದೆ. ಈ ಸಂಬಂಧ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳು ಮಾಡಿಕೊಂಡಿರುವ ಸಿದ್ಧತೆ, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಲ್ಲಿರುವ ಗೊಂದಲ ನಿವಾರಣೆಗೆ ತೆಗೆದುಕೊಂಡ ಕ್ರಮಗಳು, ಪಠ್ಯಕ್ರ ಮದಲ್ಲಿನ ಹೊಸ ವಿಷಯಗಳು ಕುರಿತು “ಉದಯವಾಣಿ’ ಮುಂದಿಟ್ಟಿರುವ ಪಂಚಪ್ರಶ್ನೆಗಳಿಗೆ ಕುಲಪತಿಗಳ ಉತ್ತರ ಇಲ್ಲಿದೆ.

ಶಿಕ್ಷಣ ನೀತಿ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ
1. ರಾಜ್ಯ ಸರಕಾರ ಈಗಾ ಗಲೇ ಹತ್ತಕ್ಕಿಂತ ಹೆಚ್ಚು ಸಭೆಗಳನ್ನು ನಡೆಸಿದೆ. 2019- 2020ನೇ ಸಾಲಿನಿಂದಲೇ ಸಿದ್ಧತೆಗಳು ಆರಂಭಗೊಂಡಿವೆ. ನಾವು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಉನ್ನತ ಶಿಕ್ಷಣ ಇಲಾಖೆ, ಸರಕಾರ ಸಲಹೆ ಸೂಚನೆಗಳನ್ನು ನೀಡಿದೆ. ಬೋರ್ಡ್‌ ಸಭೆಗಳಲ್ಲಿ ಪ್ರತೀ ಸಿಲೆಬಸ್‌ ಅಪ್ರೂವ್‌ ಮಾಡಿ ದ್ದೇವೆ. ರಾಜ್ಯದಲ್ಲೇ ಪ್ರಪ್ರಥಮ ವಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ತರುತ್ತಿರುವ ಹೆಮ್ಮೆ ನಮಗಿದೆ.

2. ರಾಜ್ಯ ಸರಕಾರದ ಆದೇಶದ ಮೇರೆಗೆ ಎಲ್ಲ ವಿವಿಗಳಲ್ಲಿ, ಕಾಲೇಜುಗಳಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಪ್ರತಿಯೊಂದು ವಿಭಾಗದ ಮುಖ್ಯಸ್ಥರು ಆಫ್‌ಲೈನ್‌, ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕೊಡುತ್ತಿದ್ದಾರೆ. ಉನ್ನತಶಿಕ್ಷಣ ಸಚಿವರು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಶಿಕ್ಷಣ ನೀತಿ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ. ಯಾವುದೇ ಅನುಮಾನಗಳಿದ್ದರೆ, ಮಾಹಿತಿ ಬೇಕಿದ್ದರೆ ಆಯಾ ಕಾಲೇಜು ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.

3. ಚಂದ್ರಗುಪ್ತ ಮೌರ್ಯ ಕಾಲದಲ್ಲಿ ನಳಂದಾ, ತಕ್ಷಶಿಲಾ ವಿವಿಗಳಲ್ಲಿ 10 ಲಕ್ಷ ವಿದ್ಯಾರ್ಥಿಗಳಿದ್ದರು, 10 ಸಾವಿರ ಪ್ರಾಧ್ಯಾಪಕರಿದ್ದರು ಎಂಬುದನ್ನು ಇತಿಹಾಸದಲ್ಲೇ ಓದಿದ್ದೇವೆ. ಪ್ರಪಂಚದ ಪ್ರತಿಷ್ಠಿತ ವಿವಿಗಳು ಇಂಟರ್‌ ಡಿಸಿಪ್ಲಿನರಿ, ಇಂಟ್ರಾ ಡಿಸಿಪ್ಲಿನರಿ, ಮಲ್ಟಿ ಡಿಸಿಪ್ಲಿನರಿ ಅಪ್ರೋಚ್‌ ಶಿಕ್ಷಣ ನೀಡಿವೆ. ಆದರೆ ಬಹಳ ಮುಖ್ಯವಾಗಿ ಮಾಡಬೇಕಿರುವುದು ಒಬ್ಬ ವಿದ್ಯಾರ್ಥಿಗೆ ಯಾವುದನ್ನು ಕಲಿಯಲು ಆಸಕ್ತಿ ಇದೆಯೋ ಅದನ್ನು ಕಲಿಯಲು ಹೊಸ ಶಿಕ್ಷಣ ನೀತಿ ಅವಕಾಶ ಮಾಡಿಕೊಡುತ್ತದೆ. ಶಿಕ್ಷಣ ಉದ್ಯೋಗದ ಭರವಸೆಯನ್ನು ಕೊಡುವಂತಿರಬೇಕು. ಪ್ರತೀ ವರ್ಷದಲ್ಲೂ ಉದ್ಯೋಗದ ಪರಿಕಲ್ಪನೆ ಮಾಡಿದ್ದಾರೆ. ಮುಖ್ಯ ಕೋರ್ಸ್‌ ಜತೆ ಹೆಚ್ಚುವರಿ ಎಲೆಕ್ಟಿವ್‌, ನ್ಯೂಮರಿಕ್‌, ಇಂಟ್ರಾ ಡಿಸಿಪ್ಲಿನರಿ, ಪ್ರೊಫೆಶನಲ್‌, ಸ್ಕಿಲ್‌ ಡೆವಲೆಪ್‌ಮೆಂಟ್‌ ಕೋರ್ಸ್‌ಗಳು ಆಫರ್‌ ಮಾಡಲಾಗಿದೆ. ಕೆಲವನ್ನು ಕಡ್ಡಾಯ ಮಾಡಲಾಗಿದೆ. ಆದ್ದರಿಂದ ಹೊಸ ಶಿಕ್ಷಣ ನೀತಿ ಯಾವುದೇ ಸಂಕಷ್ಟಗಳಿಗೆ ದೂಡುವುದಿಲ್ಲ. ಮಕ್ಕಳಿಗೆ ಮೆಡಿಕಲ್‌, ಎಂಜಿನಿಯರಿಂಗ್‌ ಓದಿಸಬೇಕೆಂದು ಬಯಸುತ್ತೇವೆ. ಆದರೆ ಅವರಿಗೆ ಇಷ್ಟವಿರುವುದಿಲ್ಲ. ಬೇರೆ ವಿಷಯಗಳಲ್ಲಿ ಆಸಕ್ತಿ ಇರುತ್ತದೆ. ಈಗ ಅದು ಸಾಧ್ಯವಿರಲಿಲ್ಲ. ಹೊಸ ಶಿಕ್ಷಣ ನೀತಿ ಆ ಅವಕಾಶಗಳನ್ನು ಸೃಷ್ಟಿ ಮಾಡಿದೆ. 64 ವಿದ್ಯೆಗಳನ್ನು ಕಲಿಸುವಂತಹ ನೀತಿಯಾಗಿ ರೂಪುಗೊಂಡಿದೆ.

4. ಹೊಸ ಶಿಕ್ಷಣ ನೀತಿ ದಿಕ್ಕನ್ನೇ ಬದಲಾಯಿಸುತ್ತದೆ. 34 ವರ್ಷಗಳ ಕಾಲ ಇಂಗ್ಲಿಷ್‌, ಮೆಕಾಲೆ ಶಿಕ್ಷಣ ನೀತಿ ಅನುಸರಿಸಿಕೊಂಡು ಬಂದಿದ್ದೇವೆ. ಹೊಸ ಸಂಶೋಧನೆ, ಆವಿಷ್ಕಾರ, ಸುಧಾರಣೆ ಮಾಡಲಿಲ್ಲ. ಹೊಸ ಶಿಕ್ಷಣ ನೀತಿ ವಿದ್ಯಾರ್ಥಿಗಳಿಗೆ ಏನು ಬೇಕೋ ಅದನ್ನೇ ನೀಡುತ್ತದೆ. ಎಕನಾಮಿಕ್ಸ್‌ ಜತೆ ಮ್ಯೂಸಿಕ್‌ ಓದಬಹುದು. ಫೈನ್‌ ಆರ್ಟ್ಸ್ ಓದಬಹುದು. ಹೀಗೆ ಹಲವು ವೈಶಿಷ್ಟಗಳು ಇವೆ. ಹೊಸ ಶಿಕ್ಷಣ ನೀತಿ ಜಾರಿಯಿಂದ ಉಪನ್ಯಾಸಕರ ಕೊರತೆ ಕಾಡಬಹುದು. ಉನ್ನತ ಶಿಕ್ಷಣ ಸಚಿವರು ಈ ಕೊರತೆಯನ್ನು ನೀಗಿಸುವ ಭರವಸೆ ನೀಡಿದ್ದಾರೆ. ವಾರ್ಷಿಕ ಪರೀಕ್ಷೆ ಮಾದರಿಯಿಂದ ಸೆಮಿಸ್ಟರ್‌ ಮಾದರಿಗೆ ಬಂದಾಗ ಒಂದೆರೆಡು ವರ್ಷ ತೊಂದರೆ ಆಗಿತ್ತು. ಹೊಸ ನೀತಿಯಿಂದ ಒಂದೆರೆಡು ವರ್ಷ ತೊಂದರೆಯಾಗಬಹುದು.

ಇದನ್ನೂ ಓದಿ:ಹತ್ತು ಸಾವಿರ ಮೆಗಾವ್ಯಾಟ್‌ ಉತ್ಪಾದನ ಗುರಿಯ ನೂತನ ಇಂಧನ ನೀತಿ: ಸುನಿಲ್‌

5. ಖಂಡಿತ ಇಲ್ಲ. ಅದು ಕೇವಲ ಉಹಾಪೋಹವಷ್ಟೆ.ನೂರು ಜನ ಅಡ್ಮಿಷನ್‌ ಆದರೆ ಎರಡೂ¾ರು ಡ್ರಾಪ್‌ಔಟ್‌ ಇದ್ದೇ ಇರುತ್ತಾರೆ. ಮದುವೆ, ಕೆಲಸ ವಿವಿಧ ಕಾರಣಗಳಿಗೆ ಶಿಕ್ಷಣ ಮೊಟಕುಗೊಳಿಸುವವರು ಇರುತ್ತಾರೆ. ನೂರಕ್ಕೆ ನೂರು ಜನ ಹೊರಹೋಗುವುದಿಲ್ಲ. ಪ್ರಥಮ ವರ್ಷ ಹೊರಹೋದರೆ ಸರ್ಟಿಫಿಕೆಟ್‌ ಕೋರ್ಸ್‌, ಎರಡು ವರ್ಷ ಪೂರೈಸಿದರೆ ಡಿಪ್ಲೊಮಾ, ಮೂರು ವರ್ಷಕ್ಕೆ ಡಿಗ್ರಿ ಸರ್ಟಿಫಿಕೆಟ್‌ ನೀಡಲಾಗುತ್ತದೆ.

-ಪ್ರೊ| ಬಿ.ಪಿ.ವೀರಭದ್ರಪ್ಪ
ಕುಲಪತಿಗಳು, ಕುವೆಂಪು ವಿವಿ ಶಿವಮೊಗ್ಗ

ಎಲ್ಲ ಸಂಶಯ ಪರಿಹಾರಕ್ಕೂ ವ್ಯವಸ್ಥೆ
1. ನಮ್ಮ ವಿಶ್ವವಿದ್ಯಾ ನಿಲಯ ಹೊಸದಾಗಿ ಆರಂಭವಾಗಿರುವುದರಿಂದ ಎನ್‌ಇಪಿ ಅನುಷ್ಠಾನಕ್ಕೂ ಅಷ್ಟೇ ಮಹತ್ವ ನೀಡಿದ್ದೇವೆ. ಈ ಸಂಬಂಧ ವಿಶ್ವವಿದ್ಯಾನಿಲಯದಿಂದ ರೂಪಿಸಿರುವ ಸಲಹಾ ಮಂಡಳಿಯಿಂದ ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರಿಂದಲೂ ಒಪ್ಪಿಗೆ ಪಡೆದಿದ್ದೇವೆ.

2.ಎನ್‌ಇಪಿ ಬಗ್ಗೆ ಇರುವ ಗೊಂದಲ ನಿವಾರಣೆಗಾಗಿಯೇ ಅನುಷ್ಠಾನ ಸಮಿತಿಯೊಂದನ್ನು ರೂಪಿಸಿದ್ದೇವೆ. ಇದರಲ್ಲಿ ಹಿರಿಯ ಪ್ರಾಧ್ಯಾಪಕರು ಇದ್ದಾರೆ. ಅಲ್ಲದೆ, ವಿದ್ಯಾರ್ಥಿಗಳಿಗೆ ದಾಖಲಾತಿ ಸಂದರ್ಭದಲ್ಲೇ ಕಾಂಬಿನೇಶನ್‌ ಸೇರಿದಂತೆ ಎಕ್ಸಿಟ್‌, ಎಂಟ್ರಿ ಬಗ್ಗೆ ಮಾಹಿತಿ, ಆನರ್ಸ್‌, ಸ್ನಾತಕೋತ್ತರ ಪದವಿಯ ಬಗ್ಗೆಯೂ ಮಾಹಿತಿ ನೀಡುತ್ತಿದ್ದೇವೆ. ಜತೆಗೆ ಕೋರ್ಸ್‌ಗಳ ಆಯ್ಕೆಯು ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು, ಅವರ ಎಲ್ಲ ಸಂಶಯ ಪರಿಹಾರಕ್ಕೂ ವ್ಯವಸ್ಥೆ ಮಾಡಿದ್ದೇವೆ.

3. ಎನ್‌ಇಪಿ ಅನುಷ್ಠಾನಕ್ಕೆ ತಕ್ಕಂತೆ ಪಠ್ಯಕ್ರಮದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಂಡಿದ್ದೇವೆ. ಏನೇ ಬದಲಾವಣೆ ಆಗಿದ್ದರೂ, ಅದೆಲ್ಲವೂ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಔದ್ಯೋಗಿಕ ಅಭಿವೃದ್ಧಿಗೆ ಪೂರಕವಾಗಿರಲಿದೆ.

4.ಶಿಕ್ಷಣ ಗುಣಮಟ್ಟ ಸುಧಾರಣೆ ಹೇಗಾಗಲಿದೆ ಎಂಬುದನ್ನು ತತ್‌ಕ್ಷಣ ಹೇಳಲು ಸಾಧ್ಯವಿಲ್ಲ. ಎನ್‌ಇಪಿ ಅನುಷ್ಠಾನದ ಅನಂತರ ಒಂದೆರೆಡು ಬ್ಯಾಚ್‌ ವಿದ್ಯಾರ್ಥಿಗಳು ಪದವಿ ಪೂರೈಸಿ ಹೊರಬಂದ ನಂತರ ಅದರ ಸ್ಪಷ್ಟ ಚಿತ್ರಣ ಸಿಗಲಿದೆ. ಉಪನ್ಯಾಸಕರ ಕೊರತೆ ಸ್ವಲ್ಪಮಟ್ಟಿನ ಸಮಸ್ಯೆ ತಂದೊಡ್ಡಲಿದೆ. ಇದಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿ ಸದ್ಯದ ಪರಿಹಾರ ನೀಡಿದರೂ, ಸರಕಾರ ಮುಂದೆ ಖಾಯಂ ಉಪನ್ಯಾಸಕರ ನೇಮಕ ಮಾಡುವ ಮೂಲಕ ಪರಿಹಾರ ನೀಡಬಹುದು.

5.ಖಂಡಿತವಾಗಿಯೂ ಡ್ರಾಪ್‌ಔಟ್‌ ಹೆಚ್ಚಾಗಲು ಸಾಧ್ಯವಿಲ್ಲ. ಹಿಂದಿನ ವ್ಯವಸ್ಥೆಯಲ್ಲಿ ಪದವಿ ಶಿಕ್ಷಣ ಅರ್ಧಕ್ಕೆ ಮೊಟಕು ಗೊಳಿಸಿದವರು ಪುನಃ ಅದೇ ತರಗತಿ ಸೇರಲು ಸಾಧ್ಯವಿರಲಿಲ್ಲ. ಮೊದಲಿನಿಂದಲೇ ಪದವಿ ಮಾಡಬೇಕಿತ್ತು. ಈಗ ಎಕ್ಸಿಟ್‌ ಮತ್ತು ಎಂಟ್ರಿ ಪ್ರತೀ ವರ್ಷ ಇರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲ ಹೆಚ್ಚು. ಅನಿವಾರ್ಯ ಕಾರಣಕ್ಕೆ ಕೆಲವರು ಶಿಕ್ಷಣ ಮೊಟಕುಗೊಳಿಸುವುದು ಈಗಲೂ ಇದೆ, ಮುಂದೆಯೂ ಇರಲಿದೆ.

-ಪ್ರೊ| ಶ್ರೀನಿವಾಸ ಬಳ್ಳಿ
ಕುಲಪತಿ, ನೃಪತುಂಗ
ವಿವಿ, ಬೆಂಗಳೂರು

ಪಂಚ ಪ್ರಶ್ನೆಗಳು
1. ಎನ್‌ಇಪಿ ಅನುಷ್ಠಾನಕ್ಕೆ ಸಿದ್ಧತೆ ಹೇಗಿದೆ?
2. ಎನ್‌ಇಪಿ ಅನುಷ್ಠಾನಕ್ಕೆ ಸಂಬಂ ಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಲ್ಲಿ ಗೊಂದಲ ನಿವಾರಣೆಗೆ ತೆಗೆದುಕೊಂಡ ಕ್ರಮಗಳು ಯಾವುವು?
3.ಎನ್‌ಇಪಿ ಅನುಷ್ಠಾನದ ಅನಂತರ ಪಠ್ಯಕ್ರಮದಲ್ಲಿ ಆಗಬಹುದಾದ ಬದಲಾವಣೆ ಏನು?
4.ಎನ್‌ಇಪಿ ಅನುಷ್ಠಾನದ ನಂತರ ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹೇಗೆ ಸುಧಾರಿಸಲಿದೆ ಮತ್ತು ಉಪನ್ಯಾಸಕರ ಕೊರತೆ ಅನುಷ್ಠಾನಕ್ಕೆ ಅಡ್ಡಿಯಾಗಲಿದೆಯೇ?
5. ಎನ್‌ಇಪಿಯಿಂದ ಮೂರು ವರ್ಷವೂ ಎಕ್ಸಿಟ್‌ ಇರುವುದರಿಂದ ಉನ್ನತ ಶಿಕ್ಷಣದಲ್ಲಿ ಡ್ರಾಪ್‌ಔಟ್‌ ಹೆಚ್ಚಾಗುವ ಆತಂಕ ಇದೆಯೇ?

ಟಾಪ್ ನ್ಯೂಸ್

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.