![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Dec 7, 2023, 12:52 AM IST
ಹೊಸದಿಲ್ಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢಗಳ ಸಿಎಂ ಆಯ್ಕೆ ಗುರುವಾರ ಅಂತಿಮಗೊಳ್ಳುವ ಸಾಧ್ಯತೆ ಇದೆ. ಮೂರು ರಾಜ್ಯಗಳಲ್ಲೂ ಹೊಸಬರನ್ನೇ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.
ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಗುರು ವಾರ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅದರಲ್ಲಿ ಸಿಎಂ ಆಯ್ಕೆ ಬಗ್ಗೆ ಅಂತಿಮ ನಿರ್ಧಾರವಾಗುವ ಸಾಧ್ಯತೆಯಿದೆ. ಮುಂದಿನ ಎಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ನಾಯಕರ ಆಯ್ಕೆ ನಿಟ್ಟಿನಲ್ಲಿ ನರೇಂದ್ರ ಮೋದಿ ನಿವಾಸದಲ್ಲಿ ಬುಧವಾರ ನಾಲ್ಕೂವರೆ ಗಂಟೆಗಳಿಗೂ ಅಧಿಕ ಹೊತ್ತು ಸಭೆ ನಡೆಸಲಾಗಿದೆ. ಮೂರು ರಾಜ್ಯಗಳ ಚುನಾವಣ ಉಸ್ತುವಾರಿಗಳು, ಪ್ರಮುಖರಾದ ಅಮಿತ್ ಶಾ, ಜೆ.ಪಿ. ನಡ್ಡಾ ಭಾಗವಹಿಸಿದ್ದರು. ಸಂಸತ್ ಕಲಾಪದ ಬಳಿಕವೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮೂರು ರಾಜ್ಯಗಳ ಚುನಾವಣ ಉಸ್ತುವಾರಿಗಳ ಉಪಸ್ಥಿತಿಯಲ್ಲಿ ಮತ್ತೂಂದು ಸಭೆ ನಡೆಯಿತು.
ಪ್ರಮುಖ ಹೆಸರುಗಳಿವು
ಮಧ್ಯಪ್ರದೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಲೋಕಸಭೆ ಚುನಾವಣೆ ಮುಕ್ತಾಯದವರೆಗೆ ಮುಂದುವರಿಸುವ ಸಾಧ್ಯತೆಗಳ ಬಗ್ಗೆಯೂ ಚರ್ಚೆಗಳು ನಡೆದಿವೆ. ಅವರಲ್ಲದೆ ಬಿಜೆಪಿಯ ಕೈಲಾಶ್ ವಿಜಯವರ್ಗೀಯ, ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಿಎಂ ಹುದ್ದೆಯ ಮೇಲೆ ಕಣ್ಣಿರಿಸಿದ್ದಾರೆ. ರಾಜಸ್ಥಾನದಲ್ಲಿ ಮಾಜಿ ಸಿಎಂ ವಸುಂಧರಾ ರಾಜೇ, ನೂತನ ಶಾಸಕರಾದ ದಿಯಾ ಕುಮಾರಿ, ಬಾಬಾ ಬಾಲಕನಾಥ್, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಅರ್ಜುನ್ ರಾಮ್ ಮೇಘಾÌಲ್ ಅವರ ಹೆಸರುಗಳೂ ಸಿಎಂ ಹುದ್ದೆಗೆ ಕೇಳಿ ಬರುತ್ತಿವೆ. ಛತ್ತೀಸ್ಗಢದಲ್ಲಿ ಮಾಜಿ ಸಿಎಂ ಡಾ| ರಮಣ್ ಸಿಂಗ್ ಜತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೋ, ನಿವೃತ್ತ ಐಎಎಸ್ ಅಧಿಕಾರಿ ಒ.ಪಿ.ಚೌಧರಿ, ನಿಕಟಪೂರ್ವ ವಿಧಾನಸಭೆಯ ವಿಪಕ್ಷ ನಾಯಕ ಧರಮ್ಲಾಲ್ ಕೌಶಿಕ್ರ ಹೆಸರುಗಳು ಚಾಲ್ತಿಯಲ್ಲಿವೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.