Nidle: ಕಾಡುಕೋಣ ಹತ್ಯೆ; ಶಂಕಿತ ಆರೋಪಿಗಳು ಪರಾರಿ


Team Udayavani, Oct 14, 2024, 6:26 AM IST

Nidle: ಕಾಡುಕೋಣ ಹತ್ಯೆ; ಶಂಕಿತ ಆರೋಪಿಗಳು ಪರಾರಿ

ಉಪ್ಪಿನಂಗಡಿ: ವಲಯ ಅರಣ್ಯ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ಕಾಡು ಪ್ರಾಣಿಗಳ ಬೇಟೆ ನಡೆಯುತ್ತಿರುವ ಆರೋಪದ ಬೆನ್ನಲ್ಲೇ, ಹಾಡಹಗಲೇ ನಾಲ್ವರು ಬೇಟೆಗಾರರ ತಂಡ ಭಾರೀ ಗಾತ್ರದ ಕಾಡುಕೋಣವನ್ನು ಕೊಂದು ಒಣ ಮಾಂಸವನ್ನಾಗಿ ಪರಿವರ್ತಿಸಿದ ಘಟನೆಯನ್ನು ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿದೆ.

ನಿಡ್ಲೆ ಗ್ರಾಮದ ಬೂಡುಜಾಲಿನಲ್ಲಿ ಅ. 11ರಂದು ಬೆಳಗ್ಗೆ ಮೀಸಲು ಅರಣ್ಯದ ಅಂಚಿನಲ್ಲಿರುವ ತೋಟ ದಲ್ಲಿ ಕಾಡುಕೋಣ ವೊಂದನ್ನು ಗುಂಡಿಕ್ಕಿ ಕೊಂದು ಕಾಡಿನಲ್ಲೇ ಕತ್ತರಿಸಿ ಪಿಕ್‌ಅಪ್‌ ವಾಹನದ ಮೂಲಕ ಸಾಗಿಸಿರುವ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಬೂಡುಜಾಲು ಅರಣ್ಯ ಅಂಚಿನಲ್ಲಿ ಇರುವ ತೋಟಕ್ಕೆ ಬೃಹತ್‌ ಗಾತ್ರದ ಕಾಡುಕೋಣ ಬರುತ್ತಿತ್ತೆನ್ನಲಾಗಿದ್ದು, ಇದಕ್ಕಾಗಿ ಕಾದು ಕುಳಿತಿದ್ದ ಶಿಬಾಜೆ ಹಾಗೂ ಶಿರಾಡಿ ಪರಿಸರದವರನ್ನು ಒಳಗೊಂಡ ತಂಡ ಗುರುವಾರ ರಾತ್ರಿ ಬೇಟೆಯಾಡಿದೆ ಎಂದು ತಿಳಿದುಬಂದಿದೆ.

ಗುಂಡೇಟು ತಿಂದ ಕಾಡುಕೋಣ ಓಡಿ ಹೋಗಿದ್ದು, ಮರುದಿನ ಕಾಡಿನಲ್ಲಿ ಹುಡುಕಾಡಿ ಅನತಿ ದೂರದಲ್ಲಿ ಗಾಯಗೊಂಡು ಬಿದ್ದಿದ್ದ ಕಾಡುಕೋಣವನ್ನು ಪತ್ತೆ ಹಚ್ಚಿ ಕೊಲ್ಲಲಾಗಿದೆ.

ಕೊಂದ ಕಾಡುಕೋಣವನ್ನು ಅಲ್ಲೇ ತುಂಡು ಮಾಡಲಾಗಿ ಆರೋಪಿಗಳ ಪೈಕಿ ಓರ್ವನಾದ ರಾಜು ಮನೆಗೆ ಪಿಕ್‌ಅಪ್‌ ವಾಹನದಲ್ಲಿ ತಂದು ಅಲ್ಲಿ ಅದನ್ನು ಒಣ ಮಾಂಸವಾಗಿ ಪರಿವರ್ತಿಸಿ ಶೇಖರಿಸಿ ಇಡಲಾಗಿರುವುದನ್ನು ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರ ತಂಡ ಪತ್ತೆ ಹಚ್ಚಿದೆ.

ಮೀಸಲು ಅರಣ್ಯ ಪ್ರದೇಶದ ಅಂಚಿನಲ್ಲಿ ಇರುವ ನಿಡ್ಲೆ, ಶಿಬಾಜೆ, ಶಿರಾಡಿ ಪರಿಸರದಲ್ಲಿ ನಿರಂತರವಾಗಿ ಕಾಡು ಪ್ರಾಣಿಗಳ ಬೇಟೆಯಾಡುವ ತಂಡವೊಂದು ಕಾಡು ಪ್ರಾಣಿಗಳನ್ನು ಭೇಟಿಯಾಡಿ ಬಳಿಕ ಅದನ್ನು ಒಣ ಮಾಂಸವನ್ನಾಗಿ ಮಾಡಿ ಒಣಗಿಸಿ 3ರಿಂದ 5, 10 ಕೆ.ಜಿ.ಯ ಪ್ಯಾಕ್‌ ಮಾಡಿ ಕೇರಳ ಸಾಗಾಟ ಮಾಡಲಾಗುತ್ತಿದೆ. ಈ ರೀತಿಯಾಗಿ ಒಣಗಿಸಿದ ಮಾಂಸ 1 ಕೆ.ಜಿ.ಗೆ 1,300 ರೂಪಾಯಿಯಿಂದ 1,500 ರೂಪಾಯಿ ತನಕ ಭಾರೀ ಬೇಡಿಕೆಯಲ್ಲಿ ಮಾರಾಟ ನಡೆಯುತ್ತದೆ ಎಂದು ಹೇಳಲಾಗಿದ್ದು, ಇಲ್ಲಿನ ತಂಡವೊಂದು ಇದೇ ಕೃತ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಆರೋಪಿಗಳೆಲ್ಲರೂ ಪರಾರಿಯಾಗಿದ್ದು, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳಿಂದ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job scam Case: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Job scam Case: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Belthangady: ಭಾರೀ ಮಳೆ; ವಾಹನ ಸಂಚಾರ ಅಸ್ತವ್ಯಸ್ತ

Belthangady: ಭಾರೀ ಮಳೆ; ವಾಹನ ಸಂಚಾರ ಅಸ್ತವ್ಯಸ್ತ

Belthangady: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belthangady: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.