LPG ಕೆವೈಸಿಗೆ ಗಡುವು ವಿಧಿಸಿಲ್ಲ: ಸರಕಾರ ಸ್ಪಷ್ಟನೆ
Team Udayavani, Dec 29, 2023, 11:47 PM IST
ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ. ಆದರೆ ಅದಕ್ಕೆ ಯಾವುದೇ ಗಡುವು ವಿಧಿಸಿಲ್ಲ. ಹಾಗಾಗಿ ಈ ವಿಚಾರದಲ್ಲಿ ಗ್ರಾಹಕರಿಗೆ ಆತಂಕ, ಅನಗತ್ಯ ಗೊಂದಲ ಬೇಡ ಎಂದು ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಅಡುಗೆ ಅನಿಲ ಸಂಪರ್ಕ ಹೊಂದಿದವರು ಡಿ. 31ರ ಒಳಗೆ ಇ-ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ಸಬ್ಸಿಡಿ ರದ್ದಾಗಲಿದೆ ಎಂಬ ವದಂತಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಇದರಿಂದ ಆತಂಕಗೊಂಡ ಜನ ರಾಜ್ಯದ ಹಲವು ಭಾಗಗಳಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ಮುಗಿಬೀಳುತ್ತಿದ್ದಾರೆ. ಇದನ್ನು ಗಮನಿಸಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
“ತೈಲ ನಿಗಮಗಳಿಂದ ಆಧಾರ್ ಲಿಂಕ್ ಮೂಲಕ ಇ-ಕೆವೈಸಿ ಬಗ್ಗೆ ಜಾಗೃತಿ, ಕೆವೈಸಿ ಅಭಿಯಾನ ನಡೆದಿರುವುದು ನಿಜ.
ಇದಕ್ಕೆ ಯಾವುದೇ ಗಡುವು ವಿಧಿಸಿಲ್ಲ. ಇದಕ್ಕೂ ಸಬ್ಸಿಡಿಗೂ ಸಂಬಂಧ ಇಲ್ಲ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.
ಈಗಾಗಲೇ ಬಹುತೇಕ ಗ್ರಾಹಕರು ಇ-ಕೆವೈಸಿ ಮಾಡಿಕೊಂಡಿದ್ದಾರೆ. ಆ ಪೈಕಿ ಕೆಲವರ ಆಧಾರ್ ಸಂಖ್ಯೆ ಮತ್ತಿತರ ದಾಖಲಾತಿಗಳ ಅಪ್ಡೇಟ್ ಆಗುವುದು ಬಾಕಿ ಇರುತ್ತದೆ. ಅದು ಸೇರಿದಂತೆ ಉಜ್ವಲ ಯೋಜನೆ ಫಲಾನುಭವಿಗಳು, ಇನ್ನೂ ಕೆವೈಸಿ ಮಾಡಿಕೊಳ್ಳದವರನ್ನು ವ್ಯವಸ್ಥೆಯ ವ್ಯಾಪ್ತಿಗೆ ತರಲು ತೈಲ ನಿಗಮಗಳಿಂದ ಆಯಾ ಏಜೆನ್ಸಿಗಳ ಮೂಲಕ ಅಭಿಯಾನದ ರೀತಿಯಲ್ಲಿ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ ಇದಕ್ಕೆ ಯಾವುದೇ ಗಡುವು ವಿಧಿಸಿಲ್ಲ. ಈ ಸಂಬಂಧ ಸ್ವತಃ ಇಲಾಖೆ ಭಾರತೀಯ ತೈಲ ನಿಗಮದ ಕರ್ನಾಟಕ ವಲಯದ ಮುಖ್ಯಸ್ಥರೊಂದಿಗೂ ಚರ್ಚಿಸಲಾಗಿದ್ದು, ಕೆವೈಸಿಗೆ ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ನಿಗಮಗಳಿಗೆ ಇಲಾಖೆ ಪತ್ರ
ಇದಲ್ಲದೆ ತೈಲ ನಿಗಮಕ್ಕೆ ಇಲಾಖೆ ಯಿಂದ ಪತ್ರವನ್ನೂ ಬರೆಯಲಾಗಿದೆ. ಇ-ಕೆವೈಸಿ ಸೇರಿದಂತೆ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳುವ ಮುನ್ನ ಇಲಾಖೆ ಗಮನಕ್ಕೆ ತರಬೇಕು. ಇದರಿಂದ ಪೂರಕ ಮಾಹಿತಿ ಜತೆಗೆ ಅಗತ್ಯ ನೆರವು ನೀಡಬಹುದು. ಜತೆಗೆ ಪ್ರಸ್ತುತ ಉಂಟಾಗಿರುವ ಗೊಂದಲವನ್ನೂ ತಪ್ಪಿಸಬಹುದು. ಮುಂಬರುವ ದಿನಗಳಲ್ಲಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಭಾರತೀಯ ತೈಲ ನಿಗಮದ ರಾಜ್ಯ ಸಮನ್ವಯ ಅಧಿಕಾರಿಯನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಸಂಪರ್ಕಕ್ಕೆ ಸಿಕ್ಕಿಲ್ಲ.
ಇದಕ್ಕೆ ಯಾವುದೇ ಗಡುವು ವಿಧಿಸಿಲ್ಲ. ಇದಕ್ಕೂ ಸಬ್ಸಿಡಿಗೂ ಸಂಬಂಧ ಇಲ್ಲ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.
ಈಗಾಗಲೇ ಬಹುತೇಕ ಗ್ರಾಹಕರು ಇ-ಕೆವೈಸಿ ಮಾಡಿಕೊಂಡಿದ್ದಾರೆ. ಆ ಪೈಕಿ ಕೆಲವರ ಆಧಾರ್ ಸಂಖ್ಯೆ ಮತ್ತಿತರ ದಾಖಲಾತಿಗಳ ಅಪ್ಡೇಟ್ ಆಗುವುದು ಬಾಕಿ ಇರುತ್ತದೆ. ಅದು ಸೇರಿದಂತೆ ಉಜ್ವಲ ಯೋಜನೆ ಫಲಾನುಭವಿಗಳು, ಇನ್ನೂ ಕೆವೈಸಿ ಮಾಡಿಕೊಳ್ಳದವರನ್ನು ವ್ಯವಸ್ಥೆಯ ವ್ಯಾಪ್ತಿಗೆ ತರಲು ತೈಲ ನಿಗಮಗಳಿಂದ ಆಯಾ ಏಜೆನ್ಸಿಗಳ ಮೂಲಕ ಅಭಿಯಾನದ ರೀತಿಯಲ್ಲಿ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ ಇದಕ್ಕೆ ಯಾವುದೇ ಗಡುವು ವಿಧಿಸಿಲ್ಲ. ಈ ಸಂಬಂಧ ಸ್ವತಃ ಇಲಾಖೆ ಭಾರತೀಯ ತೈಲ ನಿಗಮದ ಕರ್ನಾಟಕ ವಲಯದ ಮುಖ್ಯಸ್ಥರೊಂದಿಗೂ ಚರ್ಚಿಸಲಾಗಿದ್ದು, ಕೆವೈಸಿಗೆ ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ನಿಗಮಗಳಿಗೆ ಇಲಾಖೆ ಪತ್ರ
ಇದಲ್ಲದೆ ತೈಲ ನಿಗಮಕ್ಕೆ ಇಲಾಖೆ ಯಿಂದ ಪತ್ರವನ್ನೂ ಬರೆಯಲಾಗಿದೆ. ಇ-ಕೆವೈಸಿ ಸೇರಿದಂತೆ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳುವ ಮುನ್ನ ಇಲಾಖೆ ಗಮನಕ್ಕೆ ತರಬೇಕು. ಇದರಿಂದ ಪೂರಕ ಮಾಹಿತಿ ಜತೆಗೆ ಅಗತ್ಯ ನೆರವು ನೀಡಬಹುದು. ಜತೆಗೆ ಪ್ರಸ್ತುತ ಉಂಟಾಗಿರುವ ಗೊಂದಲವನ್ನೂ ತಪ್ಪಿಸಬಹುದು. ಮುಂಬರುವ ದಿನಗಳಲ್ಲಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಭಾರತೀಯ ತೈಲ ನಿಗಮದ ರಾಜ್ಯ ಸಮನ್ವಯ ಅಧಿಕಾರಿಯನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಸಂಪರ್ಕಕ್ಕೆ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.