ಪೊಲೀಸರ ಕ್ರಮಗಳಿಂದ ರೈತರ ಸಾವಾಗಿಲ್ಲ

ರಾಜ್ಯಸಭೆಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ವಿವರಣೆ

Team Udayavani, Dec 11, 2021, 7:15 AM IST

ಪೊಲೀಸರ ಕ್ರಮಗಳಿಂದ ರೈತರ ಸಾವಾಗಿಲ್ಲ

ಹೊಸದಿಲ್ಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ನಾನಾ ಭಾಗಗಳಲ್ಲಿ ನಡೆದಿದ್ದ ರೈತರ ಪ್ರತಿಭಟನೆ ವೇಳೆ, ಪೊಲೀಸರು ಜಾರಿಗೊಳಿ­ಸಿದ ಕ್ರಮಗಳಲ್ಲಿ ಯಾವುದೇ ರೈತರು ಸಾವಿಗೀಡಾಗಿಲ್ಲ ಎಂದು ಕೇಂದ್ರ ಸರಕಾರ ಸಂಸತ್ತಿಗೆ ತಿಳಿಸಿದೆ.

ಶುಕ್ರವಾರದ ರಾಜ್ಯಸಭಾ ಕಲಾಪದಲ್ಲಿ, ಕಾಂಗ್ರೆಸ್‌ನ ಧೀರಜ್‌ ಪ್ರಸಾದ್‌ ಸಾಹು ಹಾಗೂ ಆಮ್‌ ಆದ್ಮಿ ಸಂಸದ ಸಂಜಯ್‌ ಸಿಂಗ್‌ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌, ರೈತರ ಪ್ರತಿಭಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡಿದ್ದ ಕ್ರಮಗಳಲ್ಲಿ ಯಾವುದೇ ರೈತರು ಸಾವಿಗೀಡಾಗಿಲ್ಲ. ಇದರ ಹೊರತಾಗಿಯೂ ನಡೆದಿರುವ ಪ್ರತಿಭಟನ ಸಂಬಂಧಿತ ಘಟನೆಗಳಲ್ಲಿ ರೈತರು ಸಾವಿಗೀಡಾಗಿದ್ದರೆ ಅವರಿಗೆ ಆರ್ಥಿಕ ಪರಿಹಾರ ಕೊಡುವ ಜವಾಬ್ದಾರಿ ಆಯಾ ರಾಜ್ಯ ಸರಕಾರಗಳದ್ದೇ ಆಗಿರುತ್ತದೆ’ ಎಂದು ತಿಳಿಸಿದರು.

ರೈಲುಗಳಲ್ಲಿ ಶಯನ ವ್ಯವಸ್ಥೆ ಪರಿಶೀಲನೆ­ಯಲ್ಲಿ: ಹಿರಿಯ ನಾಗರಿಕರಿಗೆ ನೀಡಲಾಗು­ತ್ತಿದ್ದ ರೈಲು ಟಿಕೆಟ್‌ ಶುಲ್ಕ ವಿನಾಯಿತಿ ಸೌಲಭ್ಯವನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿ‌ನ್‌ ವೈಷ್ಣವ್‌, ರಾಜ್ಯಸಭೆಗೆ ತಿಳಿಸಿದ್ದಾರೆ. ಇತ್ತೀಚೆಗೆ ರೈಲುಗಳಲ್ಲಿ ಆಹಾರ ಸರಬರಾಜಿಗೆ ಅವಕಾಶ ಕಲ್ಪಿಸಲಾಗಿದೆ. ಸದ್ಯದಲ್ಲೇ ಹಿರಿಯ ನಾಗರಿ­ಕರಿಗೆ ಟಿಕೆಟ್‌ ಶುಲ್ಕ ರಿಯಾಯಿತಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಜತೆಗೆ ಸ್ಲಿàಪರ್‌ ಕೋಚ್‌ಗಳಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಹಾಸಿಗೆ, ದಿಂಬು ನೀಡುವಿಕೆಯನ್ನೂ ಪುನಃ ಜಾರಿಗೊಳಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಕೊರೊನಾ­ದಿಂದಾಗಿ ಸ್ಲಿàಪರ್‌ ಕೋಚ್‌ಗಳಲ್ಲಿ ಹಾಸಿಗೆ, ದಿಂಬು ನೀಡುವಿಕೆಯನ್ನು ನಿಲ್ಲಿಸಲಾಗಿತ್ತು.

ಇದನ್ನೂ ಓದಿ:ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ ನಿರ್ಬಂಧ

ಅಭಿಯಾನಕ್ಕೆ 446 ಕೋಟಿ ರೂ. ಖರ್ಚು!
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಬೇಟಿ ಪಢಾವೊ, ಬೇಟಿ ಬಚಾವೊ’ ಗಾಗಿ ಮೀಸಲಿರಿಸಿದ್ದ ಹಣದಲ್ಲಿ ಶೇ. 80ರಷ್ಟು ಹಣವನ್ನು ಮಾಧ್ಯಮಗಳ ಜಾಹೀರಾತಿಗೆ ಖರ್ಚು ಮಾಡಲಾಗಿದೆ ಎಂದು ಮಹಿಳಾ ಸಶಕ್ತೀಕರಣ ಕುರಿತಾದ ಸಂಸದೀಯ ಸ್ಥಾಯಿ ಸಮಿತಿ ತಿಳಿಸಿದೆ. ಜನಜಾಗೃತಿ ಮೂಡಿಸುವ ಉದ್ದೇಶದಿಂದ ಮಾಧ್ಯಮಗಳ ಮೂಲಕ ಚಾಲನೆ ನೀಡಲಾಗಿದ್ದ ಅಭಿಯಾನಕ್ಕೆ ಬರೋಬ್ಬರಿ 446.72 ಕೋಟಿ ರೂ.ಗಳಷ್ಟು ಹಣ ಖರ್ಚು ಮಾಡಲಾಗಿದೆ. ಇದು ಈ ಯೋಜನೆಗಾಗಿ ಮೀಸರಿಸಿದ ಒಟ್ಟಾರೆ ಹಣದ ಶೇ. 80ರಷ್ಟು ಹಣವಾಗಿದ್ದು, ಇನ್ನು ಮುಂದೆ, ಯೋಜನೆಯ ಹಣವನ್ನು ಹೆಣ್ಣುಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯ ಕುರಿತಾದ ಯೋಜನೆಗಳಿಗೆ ವ್ಯಯಿಸಬೇಕು ಎಂದು ಸಮಿತಿ ಕೇಂದ್ರಕ್ಕೆ ಕಿವಿಮಾತು ಹೇಳಿದೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.