ಅಂಗನವಾಡಿ ಕಾರ್ಯಕರ್ತೆಯರಿಗಿಲ್ಲ ಆರೋಗ್ಯ ವಿಮೆ

ಇತರ "ಕೋವಿಡ್ 19 ವಾರಿಯರ್'ಗೆ ಸಿಕ್ಕ ಸೌಲಭ್ಯ ಇವರಿಗಿಲ್ಲ

Team Udayavani, Apr 28, 2020, 5:43 AM IST

ಅಂಗನವಾಡಿ ಕಾರ್ಯಕರ್ತೆಯರಿಗಿಲ್ಲ ಆರೋಗ್ಯ ವಿಮೆ

ಕುಂದಾಪುರ: ದೇಶವೇ ಕೋವಿಡ್ 19 ದಿಂದಾಗಿ ಲಾಕ್‌ಡೌನ್‌ ಆಗಿ ಮನೆಯಲ್ಲಿದೆ. ಆದರೆ ಅಂಗನವಾಡಿ ಕಾರ್ಯಕರ್ತೆಯರು ಮಾತ್ರ ತಮ್ಮ ಊರಿಗೆ ಕೋವಿಡ್ 19 ಮಹಾಮಾರಿ ಬರಬಾರದು ಎನ್ನುವ ನಿಟ್ಟಿನಲ್ಲಿ ಹಗಲಿರುಳು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಆದರೂ ಇತರೆ ಕೋವಿಡ್ 19 ವಾರಿಯರ್ಗೆ ಸರಕಾರ ನೀಡಿರುವ ಆರೋಗ್ಯ ವಿಮೆಯ ಭಾಗ್ಯ ಮಾತ್ರ ಅಂಗನವಾಡಿ ಕಾರ್ಯಕರ್ತೆ ಯರಿಗಿಲ್ಲದಂತಾಗಿದೆ. ವೈದ್ಯರು, ಆರೋಗ್ಯ ಸಹಾ ಯಕಿಯರು, ಪೊಲೀಸರು, ಆಶಾ ಕಾರ್ಯಕರ್ತೆಯರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಕೂಡ ಕೋವಿಡ್ 19 ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿದ್ದಾರೆ.

ಲಾಕ್‌ಡೌನ್‌ ಆರಂಭವಾದ ದಿನದಿಂದ ಅಂಗನವಾಡಿ ಕಾರ್ಯಕರ್ತೆಯರು ಸುಡು ಬಿಸಿಲಿನಲ್ಲಿಯೂ ಆಯಾಯ ಪಂಚಾ ಯತ್‌ ವ್ಯಾಪ್ತಿಯಲ್ಲಿರುವ ಮನೆ – ಮನೆಗಳಿಗೆ ಭೇಟಿ ನೀಡಿ, “ದಯಮಾಡಿ ಮನೆಯಿಂದ ಹೊರ ಬರಬೇಡಿ. ನಿಮ್ಮ ಜೀವ ಉಳಿಸಿಕೊಳ್ಳಿ’ ಎಂದು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಬೈಂದೂರು ಮತ್ತು ಕುಂದಾಪುರ ತಾಲೂಕಿನಲ್ಲಿ 300 ಕ್ಕೂ ಅಧಿಕ ಮಂದಿ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊರ ಜಿಲ್ಲೆ ಗಳಿಂದ, ಹೊರ ರಾಜ್ಯದಿಂದ ಇಲ್ಲಿಗೆ ಬಂದಿರುವ ನೂರಾರು ಮಂದಿಯನ್ನು ಗುರುತಿಸಿ ಅವರನ್ನು ಹೋಮ್‌ ಕ್ವಾರಂಟೈನ್‌ನಲ್ಲಿರಿಸಿ, ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ.

ಸೌಲಭ್ಯ ಬೇಡ, ಗೌರವಿಸಿ..
ಕೋವಿಡ್ 19 ಸೋಂಕಿನ ವಿರುದ್ಧ ಹಗಲಿರುಳು ಹೋರಾಟ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತರನ್ನು ಹಾಗೂ ಅವರ ಪರಿಶ್ರಮವನ್ನು ಗುರುತಿಸ ದಿರುವುದು ಅಂಗನವಾಡಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.

ವಿವಿಧೆಡೆ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು “ಕೋವಿಡ್ 19 ವಾರಿಯರ್’ಗಳಿಗೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ನಮಗೆ ಯಾವುದೇ ಸೌಲಭ್ಯಗಳಾಗಲೀ ಬೇಕಿಲ್ಲ. ನಮ್ಮ ಸೇವೆ ಮತ್ತು ಪರಿಶ್ರಮವನ್ನು ಗುರುತಿಸಿ, ಅದರೊಂದಿಗೆ ನಮ್ಮ ಬಗ್ಗೆ ಗೌರವವಿರಲಿ ಎನ್ನುತ್ತಾರೆ ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ.

ಆರೋಗ್ಯ ವಿಮೆಗೆ ಬೇಡಿಕೆ
ಕೋವಿಡ್ 19 ಸೋಂಕಿನ ವಿರುದ್ಧ ಸೆಣಸುತ್ತಿರುವ ವೈದ್ಯರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರಿಗೆ ಸರಕಾರ ಆರೋಗ್ಯ ವಿಮೆ ಜಾರಿಗೊಳಿಸಿದೆ. ಆದರೆ ಅಂಗನವಾಡಿ ಕಾರ್ಯಕರ್ತರನ್ನು ಮಾತ್ರ ನಿರ್ಲಕ್ಷಿಸಲಾಗಿದೆ. ಕೋವಿಡ್ 19 ತಡೆ ಕಾರ್ಯಾಚರಣೆ ಸಂದರ್ಭದಲ್ಲಿ ಕಾರ್ಯಕರ್ತೆಯರು ಸೋಂಕಿತರಾದರೆ ಅಥವಾ ಅನಾಹುತ ಉಂಟಾದರೆ ಯಾವುದೇ ರಕ್ಷಣೆ ಇಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೂ ಕೂಡ ಸರಕಾರ ವಿಮಾ ಸೌಲಭ್ಯ ಜಾರಿಗೊಳಿಸಬೇಕು ಮತ್ತು ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎನ್ನುವುದು ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಯಾಗಿದೆ.

ಎಲ್ಲರೂ ಸಹಕರಿಸಿ
ಆರೋಗ್ಯ ಇಲಾಖೆ, ಸರಕಾರದ ನಿರ್ದೇಶನವನ್ನು ಪ್ರತಿಯೊಬ್ಬ ನಾಗರಿಕರು ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ವೈಯಕ್ತಿಕ ಸ್ವಚ್ಚತೆ ಅತಿ ಅಗತ್ಯ. ಪ್ರತಿ ಮನೆಗೂ ತೆರಳಿ ಜನರಿಗೆ ಇದರ ಅರಿವು ಮೂಡಿಸುತ್ತಿದ್ದೇವೆ. ಕಳೆದ ಒಂದು ತಿಂಗಳಿನಿಂದ ಈ ಮಹತ್ಕಾರ್ಯದಲ್ಲಿ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗುತ್ತಿಲ್ಲ. ಆಶಾ ಕಾರ್ಯಕರ್ತೆಯರಿಗೆ ಹೆಗಲು ನೀಡಿ ಇದು ನಮ್ಮ ಕರ್ತವ್ಯ ಎಂದು ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಗುರುತಿಸುವ ಕಾರ್ಯ ನಡೆಸಬೇಕು. ತನ್ಮೂಲಕ ಅವರಲ್ಲಿ ಸ್ಫೂರ್ತಿ ತುಂಬಬೇಕು.
-ಫಿಲೋಮಿನಾ ಫೆರ್ನಾಂಡಿಸ್‌, ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರ ಸಂಘ ಕುಂದಾಪುರ

ಮೇಲಾಧಿಕಾರಿಗಳ ಗಮನಕ್ಕೆ
ಅಂಗನವಾಡಿ ಕಾರ್ಯಕರ್ತೆಯರು ಕೂಡ ಫೀಲ್ಡ್‌ನಲ್ಲಿ ಕೆಲಸ ಮಾಡುತ್ತಿದ್ದು, ಆದರೆ ಅವರಿಗೆ ಯಾವುದೇ ರೀತಿಯ ಆರೋಗ್ಯ ವಿಮೆ ಘೋಷಿಸಿಲ್ಲ. ಇದಲ್ಲದೆ ಹೆಚ್ಚುವರಿ ಪ್ರೋತ್ಸಾಹಧನ ಕೂಡ ಇಲ್ಲ. ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೂ ಆರೋಗ್ಯ ವಿಮೆ ನೀಡುವ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ.
-ಶ್ವೇತಾ, ತಾ| ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕುಂದಾಪುರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.