Mysore Saligrama Hotel; ರಾಜಕೀಯ ಚರ್ಚೆ ಬೇಡ: ಬೋರ್ಡ್‌ ಹಾಕಿದ ಮಾಲಿಕ

ಕೆ.ಆರ್‌.ನಗರ ಮತ ಕ್ಷೇತ್ರದಲ್ಲಿ ಚುನಾವಣಾ ಕಾವು ಎಷ್ಟರ ಮಟ್ಟಿಗೆ ಇದೆ ಎಂಬುದನ್ನು ತೋರಿಸುತ್ತಿದೆ.

Team Udayavani, Apr 5, 2023, 1:08 PM IST

Mysore Saligrama Hotel; ರಾಜಕೀಯ ಚರ್ಚೆ ಬೇಡ: ಬೋರ್ಡ್‌ ಹಾಕಿದ ಮಾಲಿಕ

ಸಾಲಿಗ್ರಾಮ (ಮೈಸೂರು ಜಿಲ್ಲೆ): ಚುನಾವಣೆ ಘೋಷಣೆಯಾಗುತ್ತಿದ್ದಂತೆ ಚಹಾದಂಗಡಿಗಳು, ಗೂಡಂಗಡಿಗಳು ರಾಜಕೀಯ ಚರ್ಚಾ ವೇದಿಕೆಗಳಾಗುವುದು ಸರ್ವೇ ಸಾಮಾನ್ಯ. ಆದರೆ, ಇಲ್ಲೊಬ್ಬರು ರಾಜಕೀಯ ಚರ್ಚೆ ಮಾಡದಂತೆ ಬೋರ್ಡ್‌ ಹಾಕಿ ನಿರ್ಬಂಧ ಹಾಕಿರುವುದು ಜನರನ್ನು ಹುಬ್ಬೇರುವಂತೆ ಮಾಡಿದೆ.

ಗಮನ ಸೆಳೆಯುತ್ತಿದೆ: ಸಾಲಿಗ್ರಾಮ ತಾಲೂಕಿನ ಹೊಸೂರು ಗ್ರಾಮ ರಾಮನಾಥಪುರ ಮುಖ್ಯ ರಸ್ತೆಯಲ್ಲಿರುವ ದೊಡ್ಡಮ್ಮತಾಯಿ ನರ್ಸರಿ ಹಾಗೂ ಚಹಾದಂಗಡಿ ಮಾಲಿಕ ಎಚ್‌.ಎಸ್‌.ಜಲೇಂದ್ರ ಅವರೇ ಇಂತಹ ಬೋರ್ಡ್‌ ಹಾಕಿರುವವರಾಗಿದ್ದು ಅಂಗಡಿ ವ್ಯಾಪಾರ ಮಾಡುವುದರ ಜತೆಗೆ ಹಲವು ಗಲಾಟೆಗಳಿಗೆ ಕಾರಣವಾಗುವ ರಾಜಕೀಯ ವಿಚಾರಗಳನ್ನು ಕಡ್ಡಾಯವಾಗಿ ಮಾತನಾಡದಂತೆ ಅಂಗಡಿ ಮುಂಭಾಗದಲ್ಲಿ “ಸಾರ್ವಜನಿಕರು, ಗ್ರಾಹಕರಲ್ಲಿ ಮನವಿ. ಇಲ್ಲಿ ರಾಜಕೀಯ ಸುದ್ದಿ ಮಾತನಾಡಬೇಡಿ’ ಎಂಬ ಬೋರ್ಡ್‌ ನೇತು ಹಾಕಿದ್ದಾರೆ. ಈ ಬೋರ್ಡ್‌ ಈ ಭಾಗದಲ್ಲಿ ಸಂಚರಿಸುವವರ ಗಮನ ಸೆಳೆಯುತ್ತಿದೆ.

ಗಲಾಟೆ ತಪ್ಪಿಸಲು ಬೋರ್ಡ್‌ ಹಾಕಿದ್ದಾರೆ:
ಗ್ರಾಮೀಣ ಭಾಗದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಮನೆ ಮುಂದಿನ ಜಗುಲಿ, ಅರಳಿಕಟ್ಟೆಗಳು, ಮದುವೆ ಮನೆಗಳು ರಾಜಕೀಯ ಚರ್ಚಾ ವೇದಿಕೆಗಳಾಗುತ್ತಿವೆ. ಇನ್ನು ಚಹಾದಂಗಡಿಗಳು ಮಾತ್ರ ಸೊಗಸಾದ ಚಹಾ ಸೇವಿಸುತ್ತಾ ಗುಂಪುಗೂಡಿ ಚರ್ಚಿಸುವ ಜನರ ಗುಂಪು ಸರ್ವೇ ಸಾಮಾನ್ಯ.

ಆದರೆ, ಈ ಬೋರ್ಡ್‌ ಹಾಕಿರುವ ಇವರ ಅಂಗಡಿ ಮುಂದೆ ಚರ್ಚೆಗಳು ಹೆಚ್ಚಾಗಿ ತೀರಾ ವಿಕೋಪಕ್ಕೆ ಹೋದಂತಹ ಸಂದರ್ಭಗಳು ಇದ್ದು, ಇದರಿಂದ ತಮ್ಮ ವ್ಯಾಪಾರಕ್ಕೆ ಅಡಚಣೆ ಆಗಲಿದೆ. ಇದನ್ನು ತಪ್ಪಿಸಲು ಅಂಗಡಿ ಮುಂಭಾಗ ಬೋರ್ಡ್‌ ಹಾಕಲಾಗಿದೆ ಎಂದು ಮಾಲೀಕ ಜಲೇಂದ್ರ ಮಾಹಿತಿ ನೀಡಿದ್ದಾರೆ.

ಚುನಾವಣಾ ಕಾವು: ರಾಜಕೀಯ ಚರ್ಚೆಗಳು ಕೇಳಲು, ಮಾತನಾಡಲು ಹಿತವೇ ಆದರೂ ಎರಡೂ ಪಕ್ಷಗಳ ಕಾರ್ಯಕರ್ತರು ಒಂದೆಡೆ ಸೇರಿ ತಮ್ಮ ತಮ್ಮ ಪಕ್ಷಗಳ ಸಮರ್ಥನೆಗೆ ಇಳಿಯುತ್ತಾರೆ. ಅದು, ವಿಪರೀತವಾದರೂ, ಸ್ವಲ್ಪ ಮಾತಿಗೆ ಮಾತು ಬೆಳೆದರೂ ಕೋಪಗೊಂಡು ಗಲಾಟೆಗಳಾಗುತ್ತವೆ. ಹೀಗಾಗಿ ಬೋರ್ಡ್‌ ಹಾಕಿದ್ದು ಕೆ.ಆರ್‌.ನಗರ ಮತ ಕ್ಷೇತ್ರದಲ್ಲಿ ಚುನಾವಣಾ ಕಾವು ಎಷ್ಟರ ಮಟ್ಟಿಗೆ ಇದೆ ಎಂಬುದನ್ನು ತೋರಿಸುತ್ತಿದೆ.

ಒಟ್ಟಾರೆ ತಮಗೆ ರಾಜಕೀಯವೋ, ಇಲ್ಲ ಯಾವುದೋ ವಿಚಾರವೋ ವ್ಯಾಪಾರವಾದರೆ ಸಾಕು ಎನ್ನುವ ಅಂಗಡಿಗಳ ಮಾಲಿಕರ ನಡುವೆ ರಾಜಕೀಯ ವಿಚಾರವನ್ನೇ ಮಾತನಾಡದಂತೆ ಬೋರ್ಡ್‌ ಹಾಕಿ ನಿರ್ಬಂಧ ಹಾಕಿರುವ ಜಲೇಂದ್ರ ಅವರ ಬಗ್ಗೆ ಸಾರ್ವಜನಿಕರು ಇದು ಉತ್ತಮ ಬೆಳವಣೆಗೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪರಸ್ಪರ ವಿಚಾರ ಕೆದಕಿದರೆ ಗಲಾಟೆ

ನಮ್ಮ ಅಂಗಡಿಗೆ ನಿತ್ಯ ನೂರಾರು ಜನರು ಬರುತ್ತಾರೆ. ಅವರು ವಿಶೇಷವಾಗಿ ಚುನಾವಣಾ ಸಂದರ್ಭದಲ್ಲಿ ಯಾವುದಾದರೊಂದು ಪಕ್ಷಗಳ ಕಾರ್ಯಕರ್ತರಾಗಿರು ತ್ತಾರೆ. ಅವರಿಗೆ ನಿತ್ಯ ತಮ್ಮ ನಾಯಕರ ವಿಚಾರವಾಗಿ ಮಾತನಾಡು ವಾಗ, ಉದ್ರೇಕದಿಂದ ಪರಿಸ್ಥಿತಿಗಳು ಕೈಮೀರಿ ಹೋಗುತ್ತವೆ. ಇದರಿಂದಾಗಿ ವ್ಯಾಪಾರಿಗಳು- ನಮ್ಮ ಸಂಬಂಧಕ್ಕೆ ಧಕ್ಕೆ ಆಗುತ್ತದೆ. ಹೀಗಾಗಿ ರಾಜಕೀಯ ವಿಚಾರ ಮಾತನಾಡದೇ ನೆಮ್ಮದಿಯಾಗಿ ನಮ್ಮ ಸೇವೆ ಪಡೆಯಲಿ, ಇದಕ್ಕೋಸ್ಕರ ನಾನು ಬೋರ್ಡ್‌ ಹಾಕಿದ್ದೇನೆಂದು ಹೊಸೂರು ಅಂಗಡಿ ಮಾಲಿಕ ಎಚ್‌.ಎಸ್‌.ಜಲೇಂದ್ರ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.