ದಾಖಲೆಗಳ ಕೊರತೆ : ಯಶಸ್ವಿಯಾಗದ ಬೇತಮಂಗಲ ಗುರ್ರಮ್ಮನ ಕುಂಟೆ ಸರ್ವೇ ಕಾರ್ಯ


Team Udayavani, Aug 30, 2021, 3:36 PM IST

ಯಶಸ್ವಿಯಾಗದ ಬೇತಮಂಗಲ ಗುರ್ರಮ್ಮನ ಕುಂಟೆ ಸರ್ವೇ ಕಾರ್ಯ

ಬೇತಮಂಗಲ : ಬೇತಮಂಗಲ ಗ್ರಾಮದ ಸರ್ವೇ ನಂ.192 ಗುರ್ರಮ್ಮನ ಕುಂಟೆ 26 ಗುಂಟೆ ಸರ್ಕಾರಿ ಕರಾಬು ಜಮೀನನ್ನು ಕೆಲವರು ಅಕ್ರಮ ಖಾತೆಗಳನ್ನು ಮಾಡಿಕೊಂಡಿರುವ ಬಗ್ಗೆ ಅಂಬೇಡ್ಕರ್ ಸೇವಾ ಸಮಿತಿಯಿಂದ ಅನೇಕ ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದ ಹಿನ್ನಲೆ ಕಂದಾಯ ಅಧಿಕಾರಿಗಳು ನಿಗಧಿಯಂತೆ ಸೋಮವಾರ ನಡೆಸಿದ ಸರ್ವೇ ಕಾರ್ಯ ಆರಂಭಿಸಿದರೂ ಪೂರ್ಣಗೊಂಡಿಲ್ಲ.

ಗ್ರಾಮದ ಬಸ್ ನಿಲ್ಧಾಣದ ಬಳಿ ಇರುವ ಈ ಗುರ್ರಮ್ಮನ ಕುಂಟೆಯ ಪ್ರದೇಶವನ್ನು ಕೆಲವರು ಒತ್ತುವರಿ ಮಾಡಿಕೊಂಡು ಗ್ರಾಪಂಯಲ್ಲಿ ಖಾತೆಗಳನ್ನು ಸಹ ಮಾಡಿಕೊಂಡಿದ್ದಾರೆ. ಈ ಬಗ್ಗೆ ತಹಸೀಲ್ದಾರ್, ಎ.ಸಿ ಸೇರಿದಂತೆ ಸಂಭಂಧಿಸಿದ ಎಲ್ಲಾ ಅಧಿಕಾರಿಗಳಿಗೂ ದಾಖಲೆ ಸಮೇತ ದೂರು ನೀಡಿದ್ದು, ನಮ್ಮ ಮನವಿಗೆ ತಕ್ಷಣ ಸ್ಪಂದಿಸಿ ಸರ್ವೇ ಮಾಡಿದ್ದು, ನಮಗೆ ತೃಪ್ತಿ ತಂದಿದೆ ಸರ್ವೇ ಅಧಿಕಾರಿಗಳು ಸದರಿ ಜಮೀನಿನ ಬಗ್ಗೆ ಸಮರ್ಪಕವಾಗಿ ವರದಿ (ರಿಪೋರ್ಟ್) ನೀಡುವ ಭರವಸೆ ಇದೆ ಎಂದು ದಲಿತ ಮುಖಂಡ ಸಂದೇಶ್ ಹೇಳಿದರು.

ಬೇತಮಂಗಲ ಗ್ರಾಮದಲ್ಲಿ ಆಸ್ತಿಗಳಿಗೆ ದುಬಾರಿ ಬೆಲೆಯಿದ್ದು, ಒತ್ತುವರಿದಾರರು ಮತ್ತು ಕೆಲ ಅಕ್ರಮ ಖಾತೆದಾರರಿಂದ ಅಧಿಕಾರಿಗಳಿಗೆ ಕಿರಿ-ಕಿರಿ ಮತ್ತು ತೊಂದರೆಯ ನಡುವೆಯೂ ಸರ್ವೇ ಕಾರ್ಯ ನಡೆದಿದ್ದು, ಸತ್ಯಾ ಸತ್ಯೆತೆ ಹೊರ ಬೀಳುವ ವಿಶ್ವಾಸವಿದೆ ಎಂದು ತಿಳಿಸಿದರು.

ಇದನ್ನೂ ಓದಿ :ಹುಡುಗಿಯರಿಗೆ ಪುರುಷರು ಪಾಠ ಮಾಡುವಂತಿಲ್ಲ : ತಾಲಿಬಾನ್ ಹೊಸ ಆದೇಶ

ಅಧಿಕಾರಿಗಳಿಗೆ ಭೀತಿ: ಕಾಮಸಮುದ್ರದ ತೊಪ್ಪನಹಳ್ಳಿಯ ಸರ್ವೇ ವೇಳೆ ತಾಹಸೀಲ್ದಾರ್ ಹತ್ಯೆಯಿಂದ ಭೀತಿಗೊಳಗಾಗಿದ್ದ ಅಧಿಕಾರಿಗಳಿಗೆ ಬೇತಮಂಗಲದಲ್ಲಯೂ ಕೋಟ್ಯಾಂತರ ರೂಗಳು ಬೆಲೆ ಬಾಲುವ ಈ ವಾಣಿಜ್ಯ ಕಟ್ಟಡಗಳ ಸರ್ವೇ ವೇಳೆ ಅನಾಹುತಾ ನಡೆಯ ಬಹುದಾ ಎಂಬ ಬೀತಿಯಿಂದ ಬಾರೀ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.

ಶೀಘ್ರ ಕಟ್ಟಡಗಳ ತೆರವು: ಸರ್ವೇ ವೇಳೆ 26 ಗುಂಟೆಯ ಗುರ್ರಮ್ಮ ಕುಂಟೆ ಒತ್ತುವರಿಯಿಂದ ಕುಂಟೆಯೇ ಮಾಯವಾಗಿ ಈ ಭಾಗದಲ್ಲಿ ಬೃಹತ್ ವಾಣಿಜ್ಯ ಕಟ್ಟಡಗಳು ತಲೆ ಎತ್ತಿವೆ ಸುಮಾರು ವರ್ಷಗಳಿಂದ ಲಕ್ಯಾಂತರ ರೂಗಳ ಬಂಡವಾಳ ಮಾಡಿಕೊಂಡಿದ್ದು, ಶೀಘ್ರದಲ್ಲೇ ಕಟ್ಟಡಗಳ ತೆರವಿಗೆ ನ್ಯಾಯಲಯ ಮೂಲಕ ಆದೇಶ ತರುವುದಾಗಿ ಸಂಧೇಶ್ ತಿಳಿಸಿದರು.
26 ಗುಂಟೆ ಜಮೀನು ಸರ್ವೇ ಮಾಡಲು ಈ ಪ್ರದೇಶ ಗ್ರಾಮ ಠಾಣಾ ವ್ಯಾಪ್ತಿಯಲ್ಲಿರುವುದರಿಂದ 3 ಕಡೆ ರಸ್ತೆ ಮತ್ತು ವಾಣಿಜ್ಯ ಕಟ್ಟಡಗಳಿಂದ ಸಮಸ್ಯೆಯಾಗಿದೆ ಸಂಪೂರ್ಣವಾಗಿ ಸರ್ವೇ ಮಾಡಿ ಹದ್ದು, ಬಸ್ತು ನಿರ್ಮಿಸಿಲು ಅಸಾಧ್ಯವಾದ ಹಿನ್ನಲೆ ಮುಂದೂಡಲಾಗಿದೆ.

ಹಾಗೂ ಈ ಭಾಗದಲ್ಲಿ ಕೆಲವು 1997 ಮತ್ತು 67ರಲ್ಲಿ ಡೀಸಿ ಕನ್ವರ್ಷನ್ ಆಗಿವೆ ಮತ್ತು ಕೆಲವು ಗ್ರಾಪಂಯಿಂದ ಈ ಖಾತೆಗಳಾಗಿದ್ದು, ಸಂಪೂರ್ಣ ದಾಖಲೆಗಳನ್ನು ಸಂಗ್ರಹಿಸಿ ಸರ್ವೇ ಅಧಿಕಾರಿಗಳಿಂದ ಇಂದಿನ ಸರ್ವೇ ಕಾರ್ಯ ಬಗ್ಗೆ ವರದಿ ಬಂದ ಮೇಲೆ ಮುಂದಿನ ಕ್ರಮದ ಬಗ್ಗೆ ತಿಳಿಸಲಾಗುವುದೆಂದು ಉಪ ತಾಹಸೀಲ್ದಾರ್ ಧಮೇಂದ್ರ ಪ್ರಸಾದ್ ತಿಳಿಸಿದರು.

ಸಾಧ್ಯವಾದ ಕಡೆ ಮಾತ್ರ ಸಿಬ್ಭಂದಿಯ ಮೂಲಕ ಸರ್ವೇ ಅಧಿಕಾರಿಯು ಅಳತೆ ಮಾಡಿ 2 ದಿನಗಳೊಳಗೆ ವರದಿ ನೀಡುವುದಾಗಿ ತಿಳಿಸಿದರು.

ಈ ಸರ್ವೇ ಕಾರ್ಯದಲ್ಲಿ ಉಪ ತಹಸೀಲ್ದಾರ್ ಧಮೇಂದ್ರ ಪ್ರಸಾದ್, ಕಂದಾಯ ಅಧಿಕಾರಿ ಮುನಿವೆಂಕಟಸ್ವಾಮಿ, ಗ್ರಾಮ ಲೆಕ್ಕಿಗ ಮಹೇಶ್ ರೆಡ್ಡಿ, ಸರ್ವೇ ಅಧಿಕಾರಿ ಮೌಲಾಖಾನ್ ಮತ್ತು ಸಿಬ್ಬಂದಿ ವರ್ಗ, ಪೊಲೀಸ್ ಇಲಾಖೆ ಮತ್ತು ಬೇತಮಂಗಲ ಸಾರ್ವಜನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.