ಕಲುಷಿತ ನೀರಿನ ಘಟನೆ: FSL ವರದಿ ಕುರಿತು ಮರು ತನಿಖೆಗೆ ಸೂಚನೆ


Team Udayavani, Aug 6, 2023, 9:37 PM IST

TAP WITH WATER

ಚಿತ್ರದುರ್ಗ: ಕಲುಷಿತ ನೀರಿನ ಘಟನೆ ಕುರಿತು ನಿಖರವಾದ ವರದಿ ಇನ್ನೂ ಬಂದಿಲ್ಲ. ಒಂದೆರಡು ದಿನಗಳಲ್ಲಿ ಬರಲಿದ್ದು, ನಂತರ ಕಠಿಣ ಕ್ರಮ ಆಗಬೇಕಿದೆ. ಮೊದಲ ದಿನವೇ ಇಬ್ಬರನ್ನು ಅಮಾನತು ಮಾಡಲು ಕಾರ್ಯದರ್ಶಿಗೆ ಹೇಳಿದ್ದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್‌ ತಿಳಿಸಿದರು.

ಭಾನುವಾರ ಕವಾಡಿಗರಹಟ್ಟಿಯಲ್ಲಿ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದ ಕುರಿತು ಗಂಭೀರ ತನಿಖೆ ಆರಂಭವಾಗಿದೆ. ತನಿಖೆ ನಂತರ ತಪ್ಪಿತಸ್ಥರ ಮೇಲೆ ಕಠಿಣ ಶಿಕ್ಷೆ ಆಗಲಿದೆ. ಬೇರೆ ಯಾವುದೇ ವಾರ್ಡ್‌ನಲ್ಲಿ ಸಮಸ್ಯೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸೋಮವಾರ ಬೆಂಗಳೂರಿನಲ್ಲಿ ಸಭೆ ನಡೆಸಿ ಎಫ್‌ಎಸ್‌ಎಲ್‌ ವರದಿ ಕುರಿತು ಮರು ತನಿಖೆ ನಡೆಸುವಂತೆ ತಿಳಿಸುತ್ತೇನೆ. ಈ ಬಗ್ಗೆ ಇರುವ ಅನುಮಾನಗಳನ್ನು ಬಗೆಹರಿಸುವ ಕೆಲಸ ಮಾಡಲಾಗುವುದು. ಅಮಾನತು ಮಾಡುವುದರಿಂದ ಎಲ್ಲ ಸಮಸ್ಯೆ ಬಗೆಹರಿಯುವುದಿಲ್ಲ. ತನಿಖಾ ವರದಿ ಆಧಾರದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಪರಿಹಾರವಾಗಿ ಈಗಾಗಲೇ ಹತ್ತು ಲಕ್ಷ ರೂ. ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡಿ ಹೆಚ್ಚಿಸುವ ಪ್ರಯತ್ನ ಮಾಡುತ್ತೇನೆ ಎಂದರು.

ಕವಾಡಿಗರಹಟ್ಟಿ ಪ್ರಕರಣದ ಸಮಗ್ರ ತನಿಖೆಯಾಗಲಿ: ರವಿ
ಚಿತ್ರದುರ್ಗ: ಕವಾಡಿಗರಹಟ್ಟಿ ದುರಂತಕ್ಕೆ ಕಲುಷಿತ ಅಥವಾ ವಿಷಪೂರಿತ ನೀರು ಕಾರಣವೋ ಗೊತ್ತಿಲ್ಲ. ಆದರೆ ಒಂದು ಪ್ರದೇಶದಿಂದ ಇಷ್ಟೊಂದು ಜನ ಆಸ್ಪತ್ರೆಗೆ ದಾಖಲಾಗಿ, ಐವರು ಮೃತರಾಗುವವರೆಗೆ ಜಿಲ್ಲಾಡಳಿತ ಮೈಮರೆಯಬಾರದಿತ್ತು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ಭಾನುವಾರ ನಗರದ ಬಸವೇಶ್ವರ ಆಸ್ಪತ್ರೆಗೆ ಭೇಟಿ ನೀಡಿ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಕುರಿತು ಸಮಗ್ರ ತನಿಖೆ ಆಗಬೇಕು.

ಸಂತ್ರಸ್ತರ ಜತೆ ಮಾತನಾಡಿದ್ದೇನೆ. ಮೃತರ ಕುಟುಂಬಕ್ಕೆ ಬಹಳ ಒತ್ತಡದ ನಂತರ ಚೆಕ್‌ ವಿತರಣೆ ಮಾಡಲಾಗಿದೆ. 25 ಲಕ್ಷ ರೂ. ಪರಿಹಾರ ಕೊಡಬೇಕು ಎನ್ನುವ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ಜಿಲ್ಲಾಡಳಿತ ಹಾಗೂ ನಗರಸಭೆ ನಿರ್ಲಕ್ಷéದಿಂದ ಈ ದುರಂತ ಆಗಿದೆ ಎನ್ನುವುದು ಜನರ ಭಾವನೆಯಾಗಿದೆ. ಮೃತರ ಕುಟುಂಬದಲ್ಲಿರುವ ವಿದ್ಯಾವಂತರಿಗೆ ಸರ್ಕಾರ ಉದ್ಯೋಗ ನೀಡಬೇಕು. ರಾಜ್ಯದಲ್ಲಿ ಎಲ್ಲಿಯೂ ಇಂತಹ ಘಟನೆ ಮರುಕಳಿಸದಂತೆ ಮುಂದೆ ಎಚ್ಚರಿಕೆ ವಹಿಸಬೇಕು. ಜಿಲ್ಲಾ ಸರ್ವೇಕ್ಷಣಾ ಘಟಕದ ವರದಿಯಲ್ಲಿ ಕಾಲರಾ ಅಂಶ ಪತ್ತೆಯಾಗಿದೆ. ಸರ್ಕಾರ ಇಷ್ಟಕ್ಕೆ ಸುಮ್ಮನಾಗದೆ ಎಲ್ಲ ಕಡೆಗಳಲ್ಲಿ ಗಮನ ಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿಗೆ ಬರುವಂತಹ ದಾರಿದ್ರ ಬರುವುದು ಬೇಡ. ದಾರಿದ್ರ ಯಾರಿಗೂ ಒಳ್ಳೆಯದಲ್ಲ. ಅಂತಹ ಸ್ಥಿತಿ ಕುಮಾರಸ್ವಾಮಿ ಅವರಿಗಂತೂ ಬೇಡವೇ ಬೇಡ.
– ಸಿ.ಟಿ. ರವಿ, ಬಿಜೆಪಿ ನಾಯಕ

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUDA CASE: ಪೊಲಿಟಿಕಲ್‌ ನ್ಯೂಸ್‌ಗಾಗಿ ಇಡಿ ಯತ್ನ: ಹರಿಪ್ರಸಾದ್‌

MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್‌ ಆರೋಪ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.