![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 10, 2023, 10:05 PM IST
ಅಲಹಾಬಾದ್/ನವದೆಹಲಿ: ಆರೋಗ್ಯಕ್ಕೆ ಹಾನಿಕರವಾದ ತಂಬಾಕು ಉತ್ಪನ್ನಗಳಿಗೆ ಜಾಹೀರಾತು ನೀಡುವುದನ್ನು ಮುಂದುವರಿಸಿರುವ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ಗೆ ಅ.20ರಂದೇ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠಕ್ಕೆ ಅರಿಕೆ ಮಾಡಿದೆ.
ಪದ್ಮ ಪ್ರಶಸ್ತಿ ಪುರಸ್ಕೃತ ನಟರು ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕರವಾದ ಉತ್ಪನ್ನಗಳಿಗೆ ಜಾಹೀರಾತು ನೀಡುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು ಎಂದು ವಕೀಲ ಮೋತಿಲಾಲ್ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಆದೇಶವಿದ್ದರೂ ಸರ್ಕಾರ ಅದನ್ನು ಪಾಲಿಸಿಲ್ಲ ಎಂದು ದೂರಿದ್ದರು. ಆ ಅರ್ಜಿಯ ವಿಚಾರಣೆ ಲಕ್ನೋ ಪೀಠದ ಮುಂದೆ ವಿಚಾರಣೆ ನಡೆದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ನಟರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿತು. ದೇಶದಲ್ಲಿ ಭಾರತದಲ್ಲಿ ತಂಬಾಕು ಉತ್ಪನ್ನಗಳಿಗೆ ಜಾಹೀರಾತು ನೀಡುವುದಕ್ಕೆ ನಿಷೇಧವಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.