ಜೆಪಿ ಹೆಗ್ಡೆ ವಿರುದ್ಧ ಜಾಲತಾಣದಲ್ಲಿ ಅಪಪ್ರಚಾರ: ನಾಲ್ವರ ಮೇಲೆ ಕೇಸು ದಾಖಲು
Team Udayavani, Apr 21, 2024, 1:11 AM IST
ಕುಂದಾಪುರ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಸೃಷ್ಟಿಸಿ, ಅಪಪ್ರಚಾರ ಮಾಡಿ, ತೇಜೋವಧೆ ಮಾಡಿರುವುದಾಗಿ ನಾಲ್ವರು ಆರೋಪಿಗಳು ಹಾಗೂ ಎರಡು ಜಾಲತಾಣಗಳ ವಿರುದ್ಧ ಕಾಂಗ್ರೆಸ್ ಮುಖಂಡ, ಕುಂದಾಪುರದ ಉದ್ಯಮಿ ಸುರೇಂದ್ರ ಶೆಟ್ಟಿ ದೂರು ನೀಡಿದ್ದಾರೆ.
ಆರೋಪಿಗಳಾದ ಸಂದೀಪ್ ಶೆಟ್ಟಿ ನಿಟ್ಟೆ, ಪ್ರಕಾಶ್ ಹಂದಟ್ಟು, ಉಡುಪಿಯ ಸಂಜಿತ್ ಕೋಟ್ಯಾನ್, ಗಾಂಸ್ಕರ್ಎನ್., ವಾಸ್ತವ ಹಾಗೂ ಕೇಸರಿ ಬ್ರಿಗೇಡ್ ಎನ್ನುವ ಸಾಮಾಜಿಕ ಜಾಲತಾಣದ ವಿರುದ್ಧ ಕೇಸು ದಾಖಲಾಗಿದೆ.
ದೂರಿನಲ್ಲೇನಿದೆ?
ಆರೋಪಿಗಳು ತಮ್ಮ ಫೇಸ್ಬುಕ್ ಖಾತೆಗಳಲ್ಲಿ “ಬ್ರಹ್ಮಾವರದಲ್ಲಿ 95ರಲ್ಲಿ ಕೊಲೆಯಾದ ರಾಜರಾಮ ಸೇರ್ವೆಗಾರ ಅವರು ಬಿಜೆಪಿ ಕಾರ್ಯಕರ್ತನಾಗಿದ್ದು, ಇವರನ್ನು ಮುಗಿಸಿದ ಪೊಲೀಸ್ ಅಧಿಕಾರಿ ಯಾರು? ತುಷ್ಟಿಕರಣ ರಾಜಕಾರಣಿ ಜೆಪಿ ಬೇಕಿಲ್ಲ, ಉಡುಪಿ – ಚಿಕ್ಕಮಗಳೂರು ಹಿಂದುತ್ವಕ್ಕೆ ಪುಷ್ಟಿ ನೀಡುವ ಬಿಜೆಪಿ ನಮ್ಮ ಆಯ್ಕೆ’ ಎನ್ನುವ ಸಂದೇಶವನ್ನು ಪ್ರಸಾರ ಮಾಡುತ್ತಿರುವುದಾಗಿದೆ. ಇದಲ್ಲದೆ ಕೊಲೆಯಾದ ರಾಜಾರಾಮ ಸೇರ್ವೇಗಾರರ ವೀಡಿಯೋವನ್ನು ಮುದ್ರಿಸಿ, ಅದರಲ್ಲಿ ಜಯಪ್ರಕಾಶ್ ಹೆಗ್ಡೆಯವರ ಫೋಟೋ ಬಳಸಿ, ತೇಜೋವಧೆ ಮಾಡಿ, ಕೋಮು ಸೌಹಾರ್ದತೆ ಕೆಡಿಸಿ, ಧರ್ಮಗಳ ನಡುವೆ ಸಂಘರ್ಷ ನಿರ್ಮಾಣ ಮಾಡುತ್ತಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Comet of the Century: ಅಕ್ಟೋಬರ್ನಲ್ಲಿ ಧೂಮಕೇತುಗಳ ಮೆರವಣಿಗೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.