ಆನ್‌ ಲೈನ್‌ ವ್ಯವಸ್ಥೆ ಇನ್ನೂ ಆಫ್ ಲೈನ್‌ !

ಪಿಯುಸಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವಸತಿಯದ್ದೇ ಚಿಂತೆ

Team Udayavani, May 26, 2022, 7:15 AM IST

ಆನ್‌ ಲೈನ್‌ ವ್ಯವಸ್ಥೆ ಇನ್ನೂ ಆಫ್ ಲೈನ್‌ !

ಉಡುಪಿ: ಪಿಯುಸಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದರೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗ‌ಳ ಪೋರ್ಟಲ್‌ಗ‌ಳು ತೆರೆದು ಕೊಳ್ಳದ ಕಾರಣ ವಿದ್ಯಾರ್ಥಿಗಳು ವಸತಿ ಗಾಗಿ ಬೇರೆಡೆ ಅಲೆದಾಡುವಂತಾಗಿದೆ.

ಈ ವರ್ಷದಿಂದ ಮೆಟ್ರಿಕ್‌ ಅನಂತರದ ಹಾಸ್ಟೆಲ್‌ಗ‌ಳಲ್ಲಿ ಪ್ರವೇಶಕ್ಕೆ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಆ ಬಳಿಕ ಕೌನ್ಸೆಲಿಂಗ್‌ ಮೂಲಕ ವಸತಿ ವ್ಯವಸ್ಥೆ ಒದಗಿಸಲಾಗುತ್ತದೆ. ಆದರೆ ಪೋರ್ಟಲ್‌ ಅಪ್‌ ಡೇಟ್‌ ಆಗುವ ಹಂತದಲ್ಲಿದೆ. ಈಗಾಗಲೇ ಅರ್ಜಿ ಸಲ್ಲಿಕೆಯೇ ತಡವಾಗಿದ್ದು, ಇನ್ನು ಕೌನ್ಸೆಲಿಂಗ್‌ ಗೆ ಮತ್ತಷ್ಟು ಸಮಯ ತಗಲುವುದರಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ.

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಉಡುಪಿ, ದಕ್ಷಿಣ ಜಿಲ್ಲೆಗಳ ಪಿಯು ಕಾಲೇಜುಗಳಲ್ಲಿ ಅವಕಾಶ ದಕ್ಕಿಸಿಕೊಳ್ಳಲು ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಗದಗ ಮೊದಲಾದ ಜಿಲ್ಲೆಗಳ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಹಾಗಾಗಿ ವಸತಿಗಾಗಿ ಸರಕಾರಿ ಹಾಸ್ಟೆಲ್‌ಗ‌ಳಿಗೆ ಮೊರೆ ಹೋದರೆ, “ಆನ್‌ಲೈನ್‌ನಲ್ಲಿ ಅರ್ಜಿ ಹಾಕಬೇಕು’ ಎಂಬ ಉತ್ತರ ವಸತಿ ನಿಲಯ ಮೇಲ್ವಿಚಾರಕರಿಂದ ಕೇಳಿ ಬರುತ್ತಿದೆ.

ಪಿಜಿಗೆ ಹಣ ವ್ಯಯ
ಹಾಸ್ಟೆಲ್‌ ಸೀಟು ಹಂಚಿಕೆ ಯಾಗಲು ಇನ್ನೂ ಹಲವು ದಿನ ಬೇಕಿರುವುದರಿಂದ ವಿದ್ಯಾರ್ಥಿಗಳು ದುಬಾರಿ ಹಣ ವ್ಯಯಿಸಿ ಖಾಸಗಿ ವಸತಿ ಗೃಹ (ಪಿಜಿ) ಗಳನ್ನೇ ಆಶ್ರಯಿಸಬೇಕಿದೆ.

ಉಡುಪಿ ಜಿಲ್ಲೆಯಲ್ಲಿ ಮೆಟ್ರಿಕ್‌ ಅನಂತರದ 9 ಬಾಲಕರ, 14 ಬಾಲಕಿಯರ ಹಾಸ್ಟೆಲ್‌ ಸೇರಿ 23 ಹಾಸ್ಟೆಲ್‌ಗ‌ಳಿವೆ. ದ.ಕ. ಜಿಲ್ಲೆಯಲ್ಲಿ 17 ಬಾಲಕರ, 32 ಬಾಲಕಿಯರ ಹಾಸ್ಟೆಲ್‌ ಸೇರಿ 49 ಹಾಸ್ಟೆಲ್‌ಗ‌ಳಿವೆ. ಉಭಯ ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ 15ಕ್ಕೂ ಅಧಿಕ ಹಾಸ್ಟೆಲ್‌ಗ‌ಳಿವೆ.

ಕೌನ್ಸೆಲಿಂಗ್‌ ಮೂಲಕ ಸೀಟು ಹಂಚಿಕೆ
ಕೌನ್ಸೆಲಿಂಗ್‌ ಮೂಲಕ ಸೀಟು ಹಂಚಿಕೆ ಆಗಬೇಕಿರುವುದರಿಂದ ಅದಕ್ಕೆ ಸಂಬಂಧಿಸಿದ ಪೋರ್ಟಲನ್ನು ಅಪ್‌ಡೇಟ್‌ ಮಾಡಲಾಗುತ್ತಿದ್ದು, ಪರಿಶೀಲನೆಯ ಹಂತದಲ್ಲಿದೆ. ಅರ್ಜಿ ಹಾಕಿದ ಅನಂತರ ಕೌನ್ಸೆಲಿಂಗ್‌ ವ್ಯವಸ್ಥೆಯಲ್ಲಿ ಮೆರಿಟ್‌ ಮತ್ತು ಕೆಟಗರಿ ಆಧಾರದಲ್ಲಿ ಸೀಟು ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

– ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.