ಒಂದೇ ವರ್ಷ 1,397 ಶಾಲೆಗಳಿಗೆ ಬೀಗ! ಕರಾವಳಿಯಲ್ಲಿ 100ಕ್ಕೂ ಅಧಿಕ ಶಾಲೆ ಬಂದ್


Team Udayavani, Mar 15, 2022, 9:45 AM IST

ಒಂದೇ ವರ್ಷ 1,397 ಶಾಲೆಗಳಿಗೆ ಬೀಗ!ಶೂನ್ಯ ದಾಖಲಾತಿ, ಶಾಲೆಗಳ ವಿಲೀನ ಪ್ರಮುಖ ಕಾರಣ

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಬ್ಬ ವಿದ್ಯಾರ್ಥಿಯೂ ದಾಖಲಾಗದಿರುವ ರಾಜ್ಯದ 1,397 ಶಾಲೆಗಳನ್ನು ಶಾಶ್ವತವಾಗಿ ಮುಚ್ಚಲಾಗಿದೆ.

ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಲು ಹಲವು ಪ್ರಯೋಗಗಳು ಜಾರಿಯಲ್ಲಿವೆ. ಕೊರೊನಾದ ಬಳಿಕ ಸರಕಾರಿ ಶಾಲೆಗಳಲ್ಲಿ ದಾಖಲಾತಿಯೂ ಹೆಚ್ಚಾಗಿದೆ. ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟ ಒದಗಿಸುವ ಜತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಅನು ಷ್ಠಾನಕ್ಕೂ ಸಿದ್ಧತೆ ನಡೆಯುತ್ತಿದೆ. ಇವೆಲ್ಲದರ ನಡುವೆಯೂ 2021-22ನೇ ಸಾಲಿನಲ್ಲಿ 285 ಸರಕಾರಿ ಪ್ರಾಥಮಿಕ, 2 ಸರಕಾರಿ ಪ್ರೌಢಶಾಲೆಗಳಿಗೆ ಶಾಶ್ವತವಾಗಿ ಬೀಗ ಹಾಕಲಾಗಿದೆ.

ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ನಿರ್ವಹಣೆ ಕೊರತೆ, ಮಕ್ಕಳ ದಾಖಲಾತಿ ಇಲ್ಲದೆ 721 ಖಾಸಗಿ ಪ್ರಾಥಮಿಕ, 245 ಪ್ರೌಢಶಾಲೆ, 101 ಅನುದಾನಿತ ಪ್ರಾಥಮಿಕ, 37 ಪ್ರೌಢಶಾಲೆಗಳು ಹಾಗೂ ಇತರ 6 ಶಾಲೆಗಳು ಸ್ಥಗಿತಗೊಂಡಿವೆ.

ಕಲಬುರಗಿಯಲ್ಲೇ ಹೆಚ್ಚು
ಇಡೀ ರಾಜ್ಯದಲ್ಲೇ ಕಲಬುರಗಿಯಲ್ಲಿ 181 ಪ್ರಾಥಮಿಕ ಹಾಗೂ 52 ಪ್ರೌಢಶಾಲೆಗೆ ಬೀಗ ಹಾಕಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 130 ಪ್ರಾಥಮಿಕ, 56 ಪ್ರೌಢಶಾಲೆ, ಬೆಂಗಳೂರು ಉತ್ತರದಲ್ಲಿ 83 ಪ್ರಾಥಮಿಕ ಹಾಗೂ 48 ಪ್ರೌಢಶಾಲೆ, ಉಡುಪಿಯಲ್ಲಿ 79 ಪ್ರಾಥಮಿಕ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಲ್ಲಿ ತಲಾ 63 ಪ್ರಾಥಮಿಕ ಶಾಲೆಗಳು ಮುಚ್ಚಿವೆ. ಹೀಗೆ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲೂ ಪ್ರಾಥಮಿಕ ಶಾಲೆಗಳು ಮುಚ್ಚಿವೆ. ಉತ್ತರ ಕನ್ನಡದಲ್ಲಿ 3, ಕೊಡಗಿನಲ್ಲಿ 4, ಧಾರವಾಡದಲ್ಲಿ 5, ಗದಗ, ಚಿಕ್ಕೋಡಿ, ಶಿರಸಿಯಲ್ಲಿ ತಲಾ 6 ಸರಕಾರಿ ಶಾಲೆ ಮುಚ್ಚಿದ್ದು, ಅತಿ ಕಡಿಮೆ ಶಾಲೆ ಮುಚ್ಚಿರುವ ಪಟ್ಟಿಯಲ್ಲಿವೆ.

ಶಾಲೆ ಮುಚ್ಚಲು ಕಾರಣ
ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಸರಕಾರಿ ಶಾಲೆಯನ್ನು ಸ್ಥಳೀಯ ಶಾಲೆಯೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿರುವುದರಿಂದ ಕೆಲವು ಶಾಲೆಗಳನ್ನು ಮುಚ್ಚಲಾಗುತ್ತಿದೆ. ಅನುದಾನಿತ ಹಾಗೂ ಖಾಸಗಿ ಶಾಲೆಗಳು ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಆರ್ಥಿಕ ಸಮಸ್ಯೆ ಅನುಭವಿಸಿವೆ. ನಿರ್ವಹಣೆ ಕೊರತೆ, ಬೋಧಕ, ಬೋಧಕೇತರ ಸಿಬಂದಿ ಕೊರತೆಯಿಂದ ವಿದ್ಯಾರ್ಥಿಗಳ ದಾಖಲಾತಿಯೂ ಕುಸಿದಿರುವುದರಿಂದ ಶಾಶ್ವತವಾಗಿ ಮುಚ್ಚುವಂತಾಗಿದೆ.

ಕರಾವಳಿಯಲ್ಲಿ 100ಕ್ಕೂ ಅಧಿಕ
ಉಡುಪಿ ಜಿಲ್ಲೆಯಲ್ಲಿ 12 ಸರಕಾರಿ, 19 ಅನುದಾನಿತ ಹಾಗೂ 48 ಅನು ದಾನ ರಹಿತ ಶಾಲೆ ಸಹಿತ ಒಟ್ಟು 79 ಪ್ರಾಥಮಿಕ ಶಾಲೆ ಹಾಗೂ 1 ಅನುದಾನಿತ ಪ್ರೌಢ ಶಾಲೆ ಯನ್ನು ಈ ವರ್ಷ ಮುಚ್ಚಲಾಗಿದೆ. ದ.ಕ. ದಲ್ಲಿ 2 ಸರಕಾರಿ, 5 ಅನುದಾನಿತ ಹಾಗೂ 4 ಖಾಸಗಿ ಶಾಲೆ ಸಹಿತ 11 ಪ್ರಾಥಮಿಕ ಶಾಲೆ, 2 ಅನುದಾನಿತ, 6 ಖಾಸಗಿ ಶಾಲೆ ಸಹಿತ 8 ಪ್ರೌಢಶಾಲೆಗಳನ್ನು ಮುಚ್ಚಲಾಗಿದೆ.

ಮಕ್ಕಳ ದಾಖಲಾತಿಯೇ ಇಲ್ಲದಾಗ ಶಾಲೆ ಮುಚ್ಚುವುದು ಅನಿವಾರ್ಯ. ಗ್ರಾಮಗಳಲ್ಲಿ ಸರಕಾರಿ ಶಾಲೆಗೆ ಬರುವ ಮಕ್ಕಳೇ ಇಲ್ಲದಾಗ ಶಾಲೆ ನಡೆಸಲು ಸಾಧ್ಯವಿಲ್ಲ. ಮುಚ್ಚಿದ ಶಾಲೆಗಳ ಶಿಕ್ಷಕರನ್ನು ಬೇರೆ ಕಡೆಗೆ ನಿಯೋಜಿಸುತ್ತಿದ್ದೇವೆ.
-ಡಾ| ವಿಶಾಲ್‌ ಆರ್‌., ಆಯುಕ್ತ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ

ಒಂದೂ ಮಗುವೂ ದಾಖಲಾಗದೆ ಇರುವ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲೇ ಬೇಕಾಗುತ್ತದೆ. ಹೀಗಾಗಿಯೇ ಗ್ರಾಮ ಕ್ಕೊಂದು ಮಾದರಿ ಶಾಲೆ ಆರಂಭಿಸಲು ಪ್ರಯತ್ನಿಸುತ್ತಿದ್ದೇವೆ. ಮೊದಲ ಹಂತದಲ್ಲ ಹೋಬಳಿಗೆ ಒಂದು ಮಾದರಿ ಶಾಲೆ ಆರಂಭಿಸಲಿದ್ದೇವೆ.
– ಬಿ.ಸಿ. ನಾಗೇಶ್‌, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ

- ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.