ಪಿಯುಸಿ ಬಳಿಕ ಸೃಜನಶೀಲ ಅವಕಾಶ : ದೃಶ್ಯಕಲಾ ಕ್ಷೇತ್ರದಲ್ಲಿನ ವಿಪುಲ ಅವಕಾಶಗಳು


Team Udayavani, Jul 24, 2021, 6:40 AM IST

ಪಿಯುಸಿ ಬಳಿಕ ಸೃಜನಶೀಲ ಅವಕಾಶ : ದೃಶ್ಯಕಲಾ ಕ್ಷೇತ್ರದಲ್ಲಿನ ವಿಪುಲ ಅವಕಾಶಗಳು

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮುಂದೇನು? ಎಂಬುದು ಹೆತ್ತವರಿಗೆ ದೊಡ್ಡ ಸವಾಲು.ಆದರೆ ಹೆತ್ತವರು ಹಾಗೂ ವಿದ್ಯಾರ್ಥಿಗಳು ಸೃಜನಶೀಲವಾದ ಪ್ರಾಯೋಗಿಕ ಶಿಕ್ಷಣದ ಆಯ್ಕೆ ಮಾಡಿದಲ್ಲಿ ಸ್ವಾವಲಂಬಿ ಬದುಕು, ನಿರಂತರ ಜೀವನೋತ್ಸಾಹದ ಶಿಕ್ಷಣ, ಅಂಕಗಳ ಪ್ರಾಧಾನ್ಯದಿಂದ ಹೊರತಾದ, ಸಾಂಪ್ರದಾಯಿಕ ಶಿಕ್ಷಣದ ಸಮಾಜದ ನಡುವೆ ವೈಯಕ್ತಿಕವಾಗಿ ಸಾಧಿಸುವ, ಗುರುತಿಸಿಕೊಳ್ಳುವ ಸೃಜನಾತ್ಮಕವಾದ ಜೀವನ ರೂಪಿಸಿಕೊಳ್ಳುವಲ್ಲಿ ದೇಶಾತೀತ, ಭಾಷಾತೀತ ಚಿತ್ರಕಲಾ ಶಿಕ್ಷಣ ಭರವಸೆಯನ್ನು ಮೂಡಿಸಬಲ್ಲದು.

ಬೇರೆ ಎಲ್ಲ ಕೋರ್ಸ್‌ಗಳಲ್ಲಿ ಇಂತಿಷ್ಟೇ ಅಂಕಗಳು ಹಾಗೂ ಇಂತಹ ದರ್ಜೆ ಗಳಿಸಲೇಬೇಕಾದುದು ಅನಿವಾರ್ಯವಾಗಿದ್ದರೆ ಇಲ್ಲಿ ವಿದ್ಯಾರ್ಥಿಗೆ ಅಂಕಗಳ ಹಂಗಿಲ್ಲದೆ ಅವರ ಸೃಜನಶೀಲತೆಗೆ ಹೆಚ್ಚು ಮಹತ್ವವಿದೆ. ಅಲ್ಲದೆ ವೃತ್ತಿಗೆ ಅಯ್ಕೆಗೊಳ್ಳಲು ಪಾಸ್‌/ಫೇಲ್‌ಗಿಂತ ಅವರ ಸೃಜನಶೀಲತೆಗೆ ಹೆಚ್ಚು ಮಹತ್ವವಿರುವುದರಿಂದ ವಿದ್ಯಾರ್ಥಿಗೆ ಆಕಾಶವೇ ಅವಕಾಶವಾಗಿದೆ.
ಭಾರತ ಸರಕಾರ ಹೊಸ ಶಿಕ್ಷಣ ನೀತಿ ಸಂಹಿತೆಯಲ್ಲಿ ಕಲೆ ಮತ್ತು ಸಂಸ್ಕೃತಿಗೆ ಹೆಚ್ಚಿನ ಒತ್ತನ್ನು ನೀಡಿ 6ನೇ ತರಗತಿಯಿಂದ 12ನೇ ತರಗತಿಯವರೆಗೆ ಚಿತ್ರಕಲೆಯನ್ನು ಒಂದು ಅಧ್ಯಯನ ವಿಷಯವಾಗಿ ಪರಿಗಣಿಸಿ ಈ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡಿದೆ.
ಸಾಮಾನ್ಯ ಪದವಿಯಂತೆಯೇ ದೃಶ್ಯಕಲಾ (ಚಿತ್ರಕಲಾ ಪದವಿ) ಪದವಿ ಕೂಡ ಇದಾಗಿದೆ.

ಈ ದೃಶ್ಯಕಲಾ ಪದವಿ (ಬಿ.ವಿ.ಎ/ಬಿ.ಎಫ್.ಎ) ಅನೌಪಚಾರಿಕ ಶಿಕ್ಷಣವಾಗಿದ್ದು ಎಂಟು ವಿಭಾಗಗಳ ಅಡಿಯಲ್ಲಿ ವಿದ್ಯಾಭ್ಯಾಸ ಮಾಡಬಹುದಾಗಿದೆ.ಇದರಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್‌.ಡಿ. ತನಕ ಶಿಕ್ಷಣ ಲಭ್ಯವಿದೆ.

ಪಿಯುಸಿ ಪಾಸಾದ ಸೃಜನಶೀಲ ವಿದ್ಯಾರ್ಥಿಗಳಿಗೆ ಬಿ.ವಿ.ಎ ( ದೃಶ್ಯಕಲಾ ಪದವಿ) ಅವಧಿ 4 ವರ್ಷ ( 1 ವರ್ಷದ ದೃಶ್ಯಕಲಾ ಫೌಂಡೇಶನ್‌ ಸೇರಿ)

ಪ್ರವೇಶ ಅರ್ಹತೆ
ಪಿಯುಸಿ ಅಥವಾ 10+2 ತತ್ಸಮಾನ /ಡಿಪ್ಲೊಮಾ, ಅಥವಾ ಐಟಿಐ ಪಾಸಾಗಿರಬೇಕು

ವಿಭಾಗಗಳು
ಚಿತ್ರಕಲಾ ವಿಭಾಗ ಶಿಲ್ಪಕಲಾ ವಿಭಾಗ ಅನ್ವಯಿಕ ಕಲಾ ವಿಭಾಗ ಗ್ರಾಫಿಕ್‌ ಕಲಾ ಇತಿಹಾಸ ಫೋಟೋಗ್ರಫಿ ವಾಸ್ತು ಶಿಲ್ಪ ಟೆಕ್‌ಸ್ಟೆಲ್‌ ಸಿರಾಮಿಕ್‌ ಮುಂತಾದವುಗಳು.

ಹೆಚ್ಚಿನ ಶಿಕ್ಷಣ
ಎಂ.ವಿ.ಎ/ಎಂ.ಎಫ್.ಎ ಸ್ನಾತ್ತಕೋತ್ತರ ಪದವಿ- ಪಿಎಚ್‌.ಡಿ./ ಡಿ.ಲಿಟ್‌ ತನಕ ಅವಕಾಶ ದೃಶ್ಯಕಲಾ ಪದವಿ (ಬಿ.ವಿ.ಎ/ಬಿ.ಎಫ್.ಎ) ಪಾಸಾಗಿರಬೇಕು.

ಸೌಲಭ್ಯಗಳು
ಸರಕಾರದಿಂದ ಹಾಗೂ ಇತರ ಶಿಕ್ಷಣಕ್ಕೆ ದೊರೆಯುವ ಎಲ್ಲ ಮೂಲಭೂತ ಸೌಲಭ್ಯಗಳು ಲಭ್ಯ ಹಾಸ್ಟೆಲ್, ವಿದ್ಯಾರ್ಥಿ ವೇತನ, ಬಸ್‌ಪಾಸ್‌, ಫೆಲೋಶಿಪ್‌ ಇತ್ಯಾದಿಗಳು ಲಭ್ಯ. ವಿಶೇಷಚೇತನರಿಗೆ ( ಕಿವುಡ/ ಮೂಗ) ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿ ತನಕ ಅವಕಾಶ. ವಿಶೇಷ ಚೇತನರಿಗೆ ಭಾಷಾ ವಿಷಯ ಹಾಗೂ ಥಿಯರಿ (ಸಿದ್ಧಾಂತದ) ಬದಲಿಗೆ ಕೇವಲ ಪ್ರಾಯೋಗಿಕ ಪರೀಕ್ಷೆಗಳಿರುತ್ತವೆ.

ಅನಿಮೇಶನ್‌ ( ಡಿಜಿಟಲ್‌ ಸೆಂಟರ್‌)
ಕರ್ನಾಟಕ ಸರಕಾರದ ಐಟಿ, ಬಿಟಿ ಇಲಾಖೆ , ಎಸ್‌ ಟಿ ಹಾಗೂ ಅಭಯ್‌ ಸಂಸ್ಥೆಯ ಮುಖಾಂತರ ಗ್ರಾಮಾಂತರ ಸೃಜನಶೀಲ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯದ ಗುಣಮಟ್ಟ ಆಧಾರಿತ 31 ಜಿಲ್ಲೆಗಳಲ್ಲಿ 27 ದೃಶ್ಯಕಲಾ ಕಾಲೇಜಿಗೆ ಅನಿಮೇಶನ್‌ ಡಿಜಿಟಲ್‌ ಸೆಂಟರ್‌ಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಅನಿಮೇಶನ್‌ ತಂತ್ರಜ್ಞಾನದ ಶಿಕ್ಷಣವನ್ನು ಜೊತೆಗೆ ನೀಡುತ್ತಿದೆ. ಕೆಲವು ವಿದ್ಯಾಲಯಗಳು ಹೀಗಿವೆ:
– ಶಾಂತಿನಿಕೇತನ ಚಿತ್ರಕಲಾ ಮಹಾವಿದ್ಯಾಲಯ – ಚಿಕ್ಕಮಗಳೂರು
– ಶ್ರೀ ಕಲಾನಿಕೇತನ ಚಿತ್ರಕಲಾ ಮಹಾವಿದ್ಯಾಲಯ-ಮೈಸೂರು
– ಮಹಾಲಸ ಚಿತ್ರಕಲಾ ಮಹಾವಿದ್ಯಾಲಯ-ಮಂಗಳೂರು
– ರವೀಂದ್ರ ಕಲಾನಿಕೇತನ, ತುಮಕೂರು
– ಶ್ರೀ ರವಿವರ್ಮ ಚಿತ್ರಕಲಾ ಶಾಲೆ – ಮೈಸೂರು
– ಶ್ರೀ ವೀರಭದ್ರೇಶ್ವರ ಚಿತ್ರಕಲಾ ಮಹಾವಿದ್ಯಾಲಯ- ಹುಮನಾಬಾದ್‌
– ಕರ್ನಾಟಕ ಚಿತ್ರಕಲಾ ಪರಿಷತ್‌, ಬೆಂಗಳೂರು
– ದಾವಣಗೆರೆ ಚಿತ್ರಕಲಾ ಮಹಾವಿದ್ಯಾಲಯ ಹಾಗೂ ರಾಜ್ಯದ ಪ್ರತೀ ಜಿಲ್ಲೆಗಳಲ್ಲಿ ಚಿತ್ರಕಲಾ ಕಾಲೇಜುಗಳಿವೆ.

ಅನಿಮೇಶನ್‌ ಶಿಕ್ಷಣ
– 2ಡಿ, ಡಿಜಿಟಲ್‌ ಆರ್ಟ್‌, ಇಲಸ್ಟ್ರೇಶನ್‌, ಆ್ಯಪ್‌ ಡಿಸೈನ್‌, ವೆಬ್‌ ಡಿಸೈನ್‌, ಮ್ಯಾಟ್‌ ಆರ್ಟ್‌ ಗ್ರಾಫಿಕ್‌ ಡಿಸೈನ್‌ ಯು ಐ, ಯುಎಕÕ… ಕಲಿಸಲಾಗುತ್ತಿದೆ.
– 3ಡಿ, 3ಡಿ ಮಾಡಲಿಂಗ್‌ , 3ಡಿ ಆರ್ಕಿಟೆಕ್ಚರಲ್‌ ವಿನ್ಯಾಸ
– ಕ್ಯಾರೆಕ್ಟರ್‌ ಡಿಸೈನ್‌
– ಅನಿಮೇಶನ್‌ ಪೂರಕ ವಿನ್ಯಾಸಗಳ ಕಲಿಕೆ
– ವಿ ಎಫ್.ಎಕ್ಸಾಮ್, ಚಲನಚಿತ್ರ ಆಧಾರಿತ ಎಡಿಟಿಂಗ್‌, ವೀಡಿಯೋ ಎಫೆಕr…
– ಅನಿಮೇಶನ್‌ ಪೂರಕವಾದ ಎಡಿಟಿಂಗ್‌ ಮುಂತಾದವು .

ಉದ್ಯೋಗಾವಕಾಶಗಳು
ಬಿವಿಎ ಪದವಿ ಪಡೆದ ಅಭ್ಯರ್ಥಿಗಳು ಆರ್ಟ್‌ ಸ್ಟುಡಿಯೋಗಳು, ವಸ್ತು ಸಂಗ್ರಹಾಲಯಗಳು ಮತ್ತು ಗ್ಯಾಲರಿಗಳು, ಚಲನಚಿತ್ರೋದ್ಯಮ, ದೂರದರ್ಶನ ಉದ್ಯಮ, ಫೋಟೋ ಸ್ಟುಡಿಯೋಗಳು, ಬಟ್ಟೆ ಉದ್ಯಮ ಮುಂತಾದ ಸ್ಥಳಗಳಲ್ಲಿ ಅಪಾರ ಉದ್ಯೋಗಾವಕಾಶಗಳನ್ನು ಹೊಂದಿದ್ದಾರೆ. ಆಸಕ್ತ ಅಭ್ಯರ್ಥಿಗಳು ಸ್ವಯಂ ಉದ್ಯೋಗ ಕೂಡಾ ಮಾಡಬಹುದು ಮತ್ತು ವಿವಿಧ ಆರ್ಟ್‌ ಗ್ಯಾಲರಿಗಳು ಮತ್ತು ಸ್ಟುಡಿಯೋಗಳಲ್ಲಿ ತಮ್ಮ ಕೆಲಸವನ್ನು ಪ್ರದರ್ಶಿಸಬಹುದು.

ಚಿತ್ರಕಲಾ ಕ್ಷೇತ್ರದ ಯಾವುದೇ ಪದವಿ ಪಡೆದರೂ ಸೃಜನ ಶೀಲವಾದ ಕ್ಷೇತ್ರವಾಗಿರುವುದರಿಂದ 150ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳು ಇವೆ. ಅವುಗಳಲ್ಲಿ ಮುಖ್ಯವಾದವುಗಳೆಂದರೆ ಕಲಾ ನಿರ್ದೇಶಕ, ವಿಶುವಲ್‌ ಆರ್ಟಿಸ್ಟ್, ವಿಶುವಲ್‌ ಡಿಸೈನರ್‌, ಆರ್ಟ್‌ ಕನ್ಸರ್ವೇಟರ್‌, ಕಲಾ ವಿಮರ್ಶಕ, ವರ್ಣಚಿತ್ರಕಾರ, ಗ್ರಾಫಿಕ್‌ ಡಿಸೈನರ್‌, ವ್ಯಂಗ್ಯಚಿತ್ರಕಾರ ಮುಂತಾದ ಹುದ್ದೆಗಳನ್ನು ಪಡೆಯಬಹುದು.

ಅನಿಮೇಶನ್‌ ( ಡಿಜಿಟಲ್‌ ಸೆಂಟರ್‌)
ಪದವಿ ಪೂರ್ಣಗೊಳಿಸಿದ ಬಳಿಕ ಮಲ್ಟಿಮೀಡಿಯಾ ಆರ್ಟಿಸ್ಟ್, ಆರ್ಟ್‌ ಡೈರೆಕ್ಟರ್‌, ಆರ್ಟ್‌ ಟೀಚರ್‌, ಡೈರೆಕ್ಟರ್‌, ಪೇಂಟರ್‌, ಕ್ರಾಫ್ಟ್ ಆರ್ಟಿಸ್ಟ್, ಕ್ರಿಯೇಟಿವ್‌ ಡೈರೆಕ್ಟರ್‌, 3ಡಿ ಆರ್ಟಿಸ್ಟ್ ಅಥವಾ ಗ್ರಾಫಿಕ್ಸ್ ಡಿಸೈನರ್‌ ಆಗಬಹುದು. ಇದರ ಜತೆಗೆ ಮ್ಯೂಸಿಯಂ, ಆರ್ಟ್‌ ಗ್ಯಾಲರಿ, ಥಿಯೇಟರ್‌, ಪ್ರೊಡಕ್ಷನ್‌ ಹೌಸ್‌, ಜಾಹೀರಾತು ಸಂಸ್ಥೆ, ಪ್ರಕಾಶನ, ಮೀಡಿಯಾ ಹೌಸ್‌ ಮೊದಲಾದ ಕಡೆ ಕೂಡ ಕೆಲಸ ಮಾಡಬಹುದಾಗಿದೆ. ಬಹು ವಿಷಯಗಳಲ್ಲಿ ಸ್ಪೆಷಲೈಸೇಶನ್‌ ಪಡೆಯಲು ವಿದ್ಯಾರ್ಥಿಗಳು ಪದವಿಯ ಜೊತೆಗೆ ಅನಿಮೇಶನ್‌ನಲ್ಲಿ ಡಿಪ್ಲೊಮಾ ಅಥವಾ ಸರ್ಟಿಫಿಕೆಟ್‌ ಕೋರ್ಸ್‌ ಮಾಡಬಹುದಾಗಿದೆ. ಅನಿಮೇಶನ್‌ನಲ್ಲಿ ಬ್ಯಾಚುಲರ್‌ ಡಿಗ್ರಿ ಪೂರ್ಣಗೊಳಿಸಿದ ಬಳಿಕ ಟೆಕ್ಸcರ್‌ ಆರ್ಟಿಸ್ಟ್, ಕ್ಯಾರೆಕ್ಟರ್‌ ಮಾಡ್ಯುಲರ್‌, ಕ್ಯಾರೆಕ್ಟರ್‌ ಅನಿಮೇಟರ್‌, ಸ್ಟೋರಿ ಬೋರ್ಡ್‌ ಆರ್ಟಿಸ್ಟ್, ಕಾನ್ಸೆಪುcವಲ್‌ ಇಲಸ್ಟ್ರೇಟರ್‌, ವಿಎಫ್ಎಕ್ಸ್ ಅನಿಮೇಟರ್‌, ವೀಡಿಯೋ ಗೇಮಿಂಗ್‌, ಪೊ›ಡಕ್ಷನ್‌ ಹೌಸ್‌, ಮೊಬೈಲ್‌ ಆ್ಯಪ್‌ ಡೆವಲಪರ್‌ ಮೊದಲಾದ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ಸಾಧ್ಯವಿದೆ.

ಕಮರ್ಷಿಯಲ್‌ ಆರ್ಟ್ಸ್ನಲ್ಲಿ ಬಿ.ವಿ.ಎ ಮಾಡಿದರೆ ಡಿಸೈನಿಂಗ್‌ ಮತ್ತು ಅಡ್ವರ್ಟೆçಸಿಂಗ್‌ ಮಿಶ್ರಣ ಕಲಿಕೆ ಮಾಡಬೇಕಾಗುತ್ತದೆ. ಕಮ್ಯೂನಿಕೇಶನ್‌ ಡಿಸೈನ್‌, ಬ್ರಾಂಡಿಂಗ್‌, ವಿಷ್ಯುವಲ್‌ ಕಮ್ಯುನಿಕೇಶನ್‌ ಮತ್ತು ಫೋಟೋಗ್ರಫಿ ಇದರಲ್ಲಿ ಸೇರಿರುತ್ತದೆ. ಇನ್ನು ಪೇಂಟಿಂಗ್‌ ಕಲಿಯ ಬಯಸುವ ವಿದ್ಯಾರ್ಥಿಗಳಲ್ಲಿ ಕ್ರಿಯೇಟಿವಿಟಿ ಹೆಚ್ಚಿರಬೇಕು. ಅದರಲ್ಲೂ ಮುಖ್ಯವಾಗಿ ಸುಂದರವಾಗಿ ಚಿತ್ರ ಬಿಡಿಸುವ ಸಾಮರ್ಥ್ಯ ಅವರಿಗೆ ಇನ್ನಷ್ಟು ಲಾಭ ತಂದುಕೊಡುತ್ತದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.