![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 15, 2024, 12:19 AM IST
ಚೆನ್ನೈ: ಕೇಂದ್ರಕ್ಕೆ ಸವಾಲೆಸೆದಿರುವ ತಮಿಳುನಾಡುವ ಸರಕಾರ, ‘ಒಂದು ದೇಶ, ಒಂದು ಮತದಾನ’ ನೀತಿಯನ್ನು ಜಾರಿಗೊಳಿಸಬಾರದು. 2026ರ ನಂತರ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳ ವಿಂಗಡಣೆ ಮಾಡಬಾರದು ಎಂಬ ಎರಡು ಪ್ರಮುಖ ನಿರ್ಣಯಗಳನ್ನು ವಿಧಾನ ಸಭೆಯಲ್ಲಿ ಒಮ್ಮತದಿಂದ ಅಂಗೀಕರಿಸಿದೆ.
ಕೇಂದ್ರದ “ಒಂದು ದೇಶ, ಒಂದು ಚುನಾವಣೆ” ಪ್ರಜಾಪ್ರಭುತ್ವಕ್ಕೆ ವಿರೋಧಿ ಕ್ರಮ ಎಂದು ಎಂದು ಸಿಎಂ ಸ್ಟಾಲಿನ್ ಆರೋಪಿಸಿದ್ದಾರೆ. ಪರಿಣಾಮಕಾರಿಯಾಗಿ ಜನಸಂಖ್ಯೆ ನಿಯಂತ್ರಿಸುತ್ತಿರುವ ತಮಿಳುನಾಡಿನಂಥ ರಾಜ್ಯಗಳಿಗೆ ದಂಡ ವಿಧಿಸಬಾರದು ಎಂದು ಒತ್ತಾಯಿಸಿದ್ದಾರೆ.
ಇದರ ಜತೆಗೆ ಜನಗಣತಿಯ ಬಳಿಕ ನಡೆಯಲಿರುವ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ತಮಿಳುನಾಡಿನಲ್ಲಿ ಸದ್ಯ ಇರುವ 39 ಕ್ಷೇತ್ರಗಳ ಬದಲಿಗೆ ಕಡಿಮೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಹೀಗಾಗಿ ಕೇಂದ್ರ ಸರಕಾರ ಕೈಗೊಳ್ಳಲಿರುವ ತೀರ್ಮಾನಕ್ಕೆ ತಮಿಳು ನಾಡು ವಿಧಾನಸಭೆ ಒಕ್ಕೊರಲಿನಿಂದ ಖಂಡಿಸುತ್ತದೆ ಎಂದು ಸಿಎಂ ಸ್ಟಾಲಿನ್ ಘೋಷಿಸಿದ್ದಾರೆ.
ಈ ನಿರ್ಣಯವನ್ನು ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಸಿಕೆ, ಎಂಡಿಎಂಕೆ ಮತ್ತು ಇತರ ಎಡಪಕ್ಷಗಳು ಬೆಂಬಲಿಸಿದ್ದು ಕಂಡುಬಂತು. ಆದರೆ ಈ ವೇಳೆ ಪಿಎಂಕೆ ಪಕ್ಷದ ಶಾಸಕರು ಇರಲಿಲ್ಲ.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.