Coffee: ಕಾಫಿ ಕೂಲಿ ಕಾರ್ಮಿಕರ ವೇತನ ಹೆಚ್ಚಳಕ್ಕೆ ವಿರೋಧ
Team Udayavani, Aug 17, 2023, 10:16 PM IST
ಬೆಂಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಸರಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸಲು ಪ್ಲಾಂಟರ್ಸ್ ಅಸೋಸಿಯೇಶನ್ ವಿರೋಧ ವ್ಯಕ್ತಪಡಿಸಿದೆ.
ಕನಿಷ್ಠ ವೇತನ ಕಾಯ್ದೆ ಅನ್ವಯ 399.99 ರೂ. ಪಾವತಿಸಬೇಕು ಎಂದು ಇತ್ತೀಚೆಗಷ್ಟೇ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾಫಿ ಪ್ಲಾಂಟರ್ಸ್ ಅಸೋಸಿಯೇಶನ್ನ ನಿಯೋಗವು ಗುರುವಾರ ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿದೆ.
ಸಕಾಲಕ್ಕೆ ಮಳೆಯಾಗದೆ ಬೆಳೆ ಕೈಕೊಡುತ್ತಿದೆ. ಕೆಲವೊಮ್ಮೆ ಮೋಡ ಮುಸುಕಿದ ವಾತಾವರಣ ಇದ್ದು, ಬಿಸಿಲು ಬಾರದೆ ಕಾಫಿ ಸೊರಗುತ್ತಿದೆ. ಕೊಯ್ಲು ಮುಂತಾದ ಸಂದರ್ಭಗಳಲ್ಲಿ ಕಾರ್ಮಿಕರು ಕೈಕೊಡುತ್ತಾರೆ. ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಈಗಾಗಲೇ ಹೆಚ್ಚು ಕೂಲಿ ಕೊಡಲಾಗುತ್ತಿದೆ. ಇಷ್ಟಾದರೂ ಕೆಲವೊಮ್ಮೆ ಕಾಫಿ ಹಣ್ಣು ಬಿಡಿಸಲೂ ಕಾರ್ಮಿಕರು ಕೈಗೆ ಸಿಗುವುದಿಲ್ಲ. ಕಾಫಿ ಹಣ್ಣು ಬಿಡಿಸಲು ಪ್ರತಿ ಕೆಜಿಗೆ 4ರಿಂದ 5 ರೂ. ಕೊಡಲಾಗುತ್ತಿದೆ. ಆದರೆ ಕೆಲವು ಕಾರ್ಮಿಕರು 6 ರೂ.ವರೆಗೆ ಕೇಳುತ್ತಿದ್ದಾರೆ. ಕೂಲಿ ಕೆಲಸಕ್ಕಾಗಿ ಬೇರೆ ರಾಜ್ಯದವರ ಮೇಲೆ ಅವಲಂಬಿತರಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಪರಿಸ್ಥಿತಿ ಹೀಗಿರುವಾಗ ಸರಕಾರ ಹೆಚ್ಚು ಕೂಲಿ ಕೊಡುವಂತೆ ಅಧಿಸೂಚನೆ ಹೊರಡಿಸಿದ್ದು, ಈ ಪ್ರಮಾಣದಲ್ಲಿ ಪಾವತಿಸುವುದು ಕಷ್ಟವಾಗುತ್ತದೆ ಎಂದಿದ್ದಾರೆ.
ಸಭೆಯಲ್ಲಿದ್ದ ಕೂಲಿ ಕಾರ್ಮಿಕರ ಒಕ್ಕೂಟದ ಪ್ರತಿನಿಧಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ 1.20 ಲಕ್ಷ ಕಾರ್ಮಿಕರಿದ್ದೇವೆ. ಕಾರ್ಮಿಕ ಇಲಾಖೆಯ ದಾಖಲೆಗಳ ಪ್ರಕಾರವೇ 15 ಸಾವಿರ ಕಾರ್ಮಿಕರಿಗೆ ಮಾತ್ರ ಸೌಲಭ್ಯಗಳು ಸಿಗುತ್ತಿವೆ. ಉಳಿದ ಕಾರ್ಮಿಕರಿಗೆ ಕನಿಷ್ಠ ವೇತನವಾಗಲೀ, ಇಎಸ್ಐ ಸೌಲಭ್ಯವನ್ನಾಗಲೀ, ಆರೋಗ್ಯ ಕಾರ್ಡ್, ಬೋನಸ್, ಪಿಎಫ್ ಮತ್ತಿತರ ಯಾವ ಸವಲತ್ತುಗಳನ್ನೂ ಕೊಡುತ್ತಿಲ್ಲ ಎಂದು ಗಮನಕ್ಕೆ ತಂದಿದ್ದಾರೆ.
ಸಚಿವ ಸಂತೋಷ್ ಲಾಡ್ ಮಧ್ಯಪ್ರವೇಶಿಸಿ, ಬೆಳೆಗಾರರಿಗೆ ಕಷ್ಟ ಇರುವಂತೆ ಕಾರ್ಮಿಕರಿಗೂ ಕಷ್ಟನಷ್ಟಗಳಿರುತ್ತವೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡೇ ಸರಕಾರ ಈ ಮೊತ್ತವನ್ನು ನಿಗದಿಪಡಿಸಿದೆ. ಸಾಲದ್ದಕ್ಕೆ ಕಾರ್ಮಿಕ ಕಾಯ್ದೆ ಪ್ರಕಾರ ಇಎಸ್ಐ, ಪಿಎಫ್ ಮುಂತಾದ ಸೌಲಭ್ಯ ನೀಡದಿರುವ ಬಗ್ಗೆಯೂ ದೂರುಗಳಿವೆ. ಮುಂದಿನ ಸಭೆ ವೇಳೆಗೆ ದೂರುಗಳು ಬಾರದಂತೆ ಕ್ರಮ ವಹಿಸಿ ಎಂದು ತಾಕೀತು ಮಾಡಿದರು.
ಕಾಫಿ ಬೆಳೆಗಾರರೂ ಆಗಿರುವ ಮೇಲ್ಮನೆ ಮಾಜಿ ಸಚಿವ ಬಿ.ಎಲ್. ಶಂಕರ್ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.