Orthodontics: ವಯಸ್ಕರಿಗಾಗಿ ಆರ್ಥೋಡಾಂಟಿಕ್ಸ್‌


Team Udayavani, Aug 18, 2024, 1:29 PM IST

7

ಇತ್ತೀಚೆಗಿನ ವರ್ಷಗಳಲ್ಲಿ ವಯಸ್ಕರ ಆರ್ಥೋಡಾಂಟಿಕ್ಸ್‌ ತನ್ನ ಹದಿಹರಯದಿಂದ ಹೊರಬಂದಿದ್ದು, ತನ್ನ ಬಗೆಗಿನ ಅಪನಂಬಿಕೆಗಳಿಂದ ಕಳಚಿಕೊಂಡು ತಮ್ಮ ಮುಖ ಸೌಂದರ್ಯ, ಮೋಹಕ ನಗು ಮತ್ತು ಬಾಯಿಯ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಲು ಬಯಸುವ ವ್ಯಕ್ತಿಗಳಲ್ಲಿ ಜನಪ್ರಿಯಗೊಳ್ಳಲಾರಂಭಿಸಿದೆ. ತಂತ್ರಜ್ಞಾನದಲ್ಲಿ ಆಗಿರುವ ಪ್ರಗತಿ ಮತ್ತು ಆರ್ಥೋಡಾಂಟಿಕ್‌ ಕಾರ್ಯವಿಧಾನಗಳು ನೇರ, ಸುಂದರ, ಆರೋಗ್ಯಪೂರ್ಣ ನಗುವಿನ ಮೇಲೆ ಬಿರಬಹುದಾದ ಸಕಾರಾತ್ಮಕವಾದ ಪರಿಣಾಮದ ಬಗ್ಗೆ ತಿಳಿವಳಿಕೆ ಹೆಚ್ಚುತ್ತಿದ್ದು, ಹೆಚ್ಚು ಹೆಚ್ಚು ಮಂದಿ ವಯಸ್ಕರು ಆರ್ಥೋಡಾಂಟಿಕ್‌ ಚಿಕಿತ್ಸೆಯನ್ನು ಬಯಸುತ್ತಿದ್ದಾರೆ. ಇದು ಯಾವುದೇ ವಯಸ್ಸಿನಲ್ಲಿ ಸಮಗ್ರ ಕಲ್ಯಾಣ ಮತ್ತು ಆರೋಗ್ಯ ಹಾಗೂ ಆತ್ಮವಿಶ್ವಾಸವನ್ನು ಹೊಂದಲು ಬಯಸುವ ವಿಸ್ತೃತ ಸಾಮಾಜಿಕ ಬದಲಾವಣೆಯನ್ನು ಪ್ರತಿಫ‌ಲಿಸುತ್ತಿದೆ.

ಸೌಂದರ್ಯಾತ್ಮಕ ಮತ್ತು ಆರೋಗ್ಯ ಲಾಭಗಳು

ಅನೇಕ ವಯಸ್ಕರು ಆರ್ಥೋಡಾಂಟಿಕ್ಸ್‌ ಚಿಕಿತ್ಸೆಯನ್ನು ಪಡೆದುಕೊಳ್ಳಲು ಬಯಸುವುದಕ್ಕೆ ಮೂಲ ಕಾರಣ ಸೌಂದರ್ಯವರ್ಧನೆ. ನೇರ, ಮುಖಕ್ಕೆ ಚೆನ್ನಾಗಿ ಹೊಂದಿಕೊಳ್ಳುವ ಸುಂದರ ನಗು ಆತ್ಮ ವಿಶ್ವಾಸ ಮತ್ತು ವ್ಯಕ್ತಿ ಘನತೆಯನ್ನು ಬಹುವಾಗಿ ವೃದ್ಧಿಸುತ್ತದೆ. ಆದರೆ ವಯಸ್ಕರ ಆರ್ಥೋಡಾಂಟಿಕ್ಸ್‌ ಚಿಕಿತ್ಸೆಯ ಪ್ರಯೋಜನಗಳು ಸೌಂದರ್ಯವರ್ಧನೆಗೆ ಮಾತ್ರ ಸೀಮಿತವಾಗಿಲ್ಲ. ಅಸಮರ್ಪಕವಾಗಿ ಜೋಡಣೆಯಾಗಿರುವ ಹಲ್ಲುಗಳು ಹಲ್ಲು ಶುಚಿಗೊಳಿಸಲು ಕಷ್ಟ, ಹಲ್ಲು ಹುಳುಕಾಗುವುದು  ಮತ್ತು ವಸಡಿನ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳು ಹೆಚ್ಚುವುದು, ಹಲ್ಲಿನ ಎನಾಮಲ್‌ ಅಸಹಜವಾಗಿ ನಾಶವಾಗುವುದು ಹಾಗೂ ದವಡೆ ನೋವು ಮತ್ತು ತಲೆನೋವಿನಂತಹ ತೊಂದರೆಗಳಿಗೆ ಕಾರಣವಾಗಬಹುದು.

ಆರ್ಥೋಡಾಂಟಿಕ್‌ ಚಿಕಿತ್ಸೆಯಿಂದ ಈ ತೊಂದರೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯ. ಆ ಮೂಲಕ ಬಾಯಿಯ ಒಟ್ಟಾರೆ ಆರೋಗ್ಯ ಚೆನ್ನಾಗಿರುತ್ತದೆ. ಸರಿಯಾಗಿ ಜೋಡಣೆಗೊಂಡಿರುವ ಹಲ್ಲುಗಳನ್ನು ಶುಚಿಗೊಳಿಸುವುದು ಮತ್ತು ನಿರ್ವಹಿಸುವುದು ಸುಲಭ; ಇದರಿಂದ ದಂತವೈದ್ಯಕೀಯ ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳು ಕಡಿಮೆಯಾಗುತ್ತವೆ ಮಾತ್ರವಲ್ಲದೆ ಭವಿಷ್ಯದಲ್ಲಿ ಹೆಚ್ಚು ಕಠಿನವಾದ ಚಿಕಿತ್ಸಾ ಪ್ರಕ್ರಿಯೆಗಳನ್ನು ಅವಲಂಬಿಸಬೇಕಾದ ಸಾಧ್ಯತೆಗಳು ಕಡಿಮೆಯಾಗುತ್ತವೆ.

ವಯಸ್ಕರ ಆರ್ಥೋಡಾಂಟಿಕ್ಸ್‌ ಚಿಕಿತ್ಸೆ

ಸಾಮಾನ್ಯ ಪ್ರಶ್ನೆಗಳು ವಯಸ್ಕರ ಆರ್ಥೋಡಾಂಟಿಕ್‌ ಚಿಕಿತ್ಸೆ ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿರುವಂತೆಯೇ ಈ ಚಿಕಿತ್ಸೆಗೆ ಒಳಗಾಗಲು ಬಯಸುವ ವ್ಯಕ್ತಿಗಳಲ್ಲಿ ಕೆಲವು ಸಾಮಾನ್ಯ ಪ್ರಶ್ನೆಗಳು ಇರುವುದು ಕಂಡುಬರುತ್ತಿದೆ. ಈ ಕಾಳಜಿಗಳನ್ನು ಅರ್ಥ ಮಾಡಿಕೊಂಡು ಪರಿಹರಿ ಸುವುದರಿಂದ ವಯಸ್ಕರು ತಮ್ಮ ಬಾಯಿಯ ಆರೋಗ್ಯದ ಬಗ್ಗೆ ಮಾಹಿತಿಯುಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.

ಡಾ| ರಮ್ಯಾ ವಿಜೇತಾ ಜತ್ತನ್ನ ರೀಡರ್‌, ಆರ್ಥೋಡಾಂಟಿಕ್ಸ್‌ ಮತ್ತು ಡೆಂಟೊಫೇಶಿಯಲ್‌ ಆರ್ಥೋಪೆಡಿಕ್ಸ್‌ ವಿಭಾಗ, ಎಂಸಿಒಡಿಎಸ್‌, ಮಾಹೆ, ಮಣಿಪಾಲ

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Health: ಬಿಸಿಲಿನ ತಾಪದಿಂದ ಆರೋಗ್ಯ ಅಪಾಯ ತಡೆಯಲು ಏನು ಮಾಡ ಬೇಕು?

16

Health: ಸ್ತನ ಕಸಿ ಮತ್ತು ಕ್ಯಾನ್ಸರ್‌ ಪರಸ್ಪರ ಸಂಬಂಧ ಇದೆಯೇ?

9

Children’s Health: ತಂತ್ರಜ್ಞಾನ ಮತ್ತು ಕೋಮಲ ಮನಸ್ಸುಗಳು

8

Healthy Spine; ಬೆನ್ನಿನ ಮೇಲೊಂದು ಪಕ್ಷಿನೋಟ!

11-tooth

Dental Checkup: ದಂತ ವೈದ್ಯಕೀಯ ತಪಾಸಣೆಗಳನ್ನು ತಪ್ಪಿಸಿಕೊಳ್ಳದಿರಿ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.