Padubidri ಕಂಚಿನಡ್ಕ ಟೋಲ್ಗೇಟ್ ಕಾರ್ಯಗತವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Team Udayavani, Aug 15, 2024, 11:09 PM IST
ಪಡುಬಿದ್ರಿ: ರಾಜ್ಯ ಹೆದ್ದಾರಿ 1ರ ಪ್ರಸ್ತಾವಿತ ಕಂಚಿನಡ್ಕ ಟೋಲ್ಗೇಟ್ ಕಾರ್ಯಗತವಾಗದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದಾರೆ.
ಗುರುವಾರ ಬಜಪೆ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗಮಧ್ಯೆ ಕಂಚಿನಡ್ಕದಲ್ಲಿ ಪಡುಬಿದ್ರಿ – ಬೆಳ್ಮಣ್ -ಕಾರ್ಕಳ ಟೋಲ್ ವಿರೋಧಿ ಹೋರಾಟ ಸಮಿತಿಯ ಸಭೆಯಲ್ಲಿ ಭಾಗವಹಿಸಿದ ಸಚಿವರು ಭಾಗವಹಿಸಿ ಈ ಭರವಸೆ ನೀಡಿದ್ದಾರೆ.
ಕೇವಲ 4 ಕಿ.ಮೀ. ದೂರದಲ್ಲಿ ಹೆಜಮಾಡಿ ಟೋಲ್ಗೇಟ್ ಇರುವ ಕಾರಣ ಇನ್ನೊಂದು ಟೋಲ್ಗೇಟ್ ಜನತೆಗೆ ಹೊರೆಯಾಗಲಿದೆ. ಸ್ವತಃ ಇಲ್ಲಿನ ಜನತೆಯ ಪರವಹಿಸಿ ಲೋಕೋಪಯೋಗಿ ಇಲಾಖೆ ಸಚಿವರಲ್ಲಿ ಮಾತನಾಡಿ ಈ ಪ್ರಸ್ತಾವನೆಯನ್ನು ರದ್ದುಗೊಳಿಸಲು ಪ್ರಯತ್ನಿಸುವುದಾಗಿ ಸಚಿವರು ಹೇಳಿದರು.
ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಆ. 24ರ ಸಾರ್ವಜನಿಕ ಪ್ರತಿಭಟನೆಯ ಕಾವು ಏರುತ್ತಿದೆ. ಪಡುಬಿದ್ರಿಯಿಂದ ಕಾರ್ಕಳದವರೆಗಿನ ಸುಮಾರು 40 ಗ್ರಾಮಗಳ ಜನರಿಗೆ ಕಿರಿಕಿರಿಯಾಗುವ ಕಂಚಿನಡ್ಕ ಟೋಲ್ಗೇಟ್ ಬೇಡವೇ ಬೇಡ ಎಂದರು.
ಟೋಲ್ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಅವರು, ಸಮಿತಿ ಸಿದ್ಧಪಡಿ ಸಿದ ಮನವಿಯೊಂದನ್ನು ಸಚಿವೆಗೆ ಹಸ್ತಾಂತರಿಸಲಾಯಿತು.
ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ, ಎಸ್ಪಿ ಡಾ| ಅರುಣ್ ಕುಮಾರ್, ಜಿ. ಪಂ. ಸಿಇಒ ಪ್ರತೀಕ್ ಬಾಯಲ್, ಲಕ್ಷ್ಮಣ ಶೆಟ್ಟಿ ಅರಂತಡೆ, ಪ್ರಸಾದ್ರಾಜ್ ಕಾಂಚನ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.