ಐಎಂಎಫ್ ಮುಂದೆ ತಲೆಬಾಗಿದ ಪಾಕ್‌


Team Udayavani, Feb 4, 2023, 6:00 AM IST

ಐಎಂಎಫ್ ಮುಂದೆ ತಲೆಬಾಗಿದ ಪಾಕ್‌

ಪಾಕಿಸ್ಥಾನದಲ್ಲಿ ನಾಗರಿಕರು ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ಸೃಷ್ಟಿ ಯಾಗಿದ್ದು, ದೇಶ ಬಹುತೇಕ ದಿವಾಳಿಯಂಚಿನಲ್ಲಿದೆ. ಆರ್ಥಿಕ ನೆರವಿಗಾಗಿ ವಿದೇಶಗಳನ್ನು ಅಂಗಲಾಚಿದರೂ ಯಾವೊಂದು ದೇಶವೂ ಪಾಕಿಸ್ಥಾನಕ್ಕೆ ನೆರವು ನೀಡಲು ಮುಂದೆ ಬರುತ್ತಿಲ್ಲ. ಏತನ್ಮಧ್ಯೆ ಸಾಲ ನೀಡಲು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕೆಲವೊಂದು ಕಠಿನ ಷರತ್ತುಗಳನ್ನು ವಿಧಿಸಿದೆ. ಈ ಷರತ್ತುಗಳನ್ನು ಒಪ್ಪಿಕೊಂಡು ಅದನ್ನು ತತ್‌ಕ್ಷಣದಿಂದ ಜಾರಿಗೆ ತಂದದ್ದೇ ಆದಲ್ಲಿ ಸಾಲ ನೀಡುವುದಾಗಿ ಪಾಕಿಸ್ಥಾನ ಸರಕಾರಕ್ಕೆ ಸ್ಪಷ್ಟ ಮಾತುಗಳಲ್ಲಿ ತಿಳಿಸಿದೆ. ಸದ್ಯಕ್ಕಂತೂ ಹಾಲಿ ಬಿಕ್ಕಟ್ಟಿನಿಂದ ಪಾರಾದರೆ ಸಾಕು ಎಂಬ ಮನಃಸ್ಥಿತಿಯಲ್ಲಿರುವ ಪಾಕ್‌ ಸರಕಾರ ಅನ್ಯಮಾರ್ಗವಿಲ್ಲದೆ ಐಎಂಎಫ್  ನ ಎಲ್ಲ ಷರತ್ತುಗಳಿಗೆ ಸಮ್ಮತಿಯನ್ನು ಸೂಚಿಸುವ ಇಂಗಿತ ವ್ಯಕ್ತಪಡಿಸಿದ್ದು ತನ್ಮೂಲಕ ಐಎಂಎಫ್ ಮುಂದೆ ಮಂಡಿಯೂರಿದೆ.

ಕಳೆದೊಂದು ದಶಕದಿಂದೀಚೆಗೆ ಪಾಕಿಸ್ಥಾನ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಲೇ ಬಂದಿದೆ. ಇದರ ಹೊರತಾಗಿಯೂ ಚೀನ ಸಹಿತ ತನ್ನ ಕೆಲವೊಂದು ಆಪ್ತ ರಾಷ್ಟ್ರಗಳ ನೆರವಿನಿಂದ ಏದುಸಿರು ಬಿಡುತ್ತ ದಿನದೂಡುತ್ತಲೇ ಬಂದಿದ್ದ ಪಾಕಿಸ್ಥಾನ ಕಳೆದ ಕೆಲವು ತಿಂಗಳುಗಳಿಂದೀಚೆಗೆ ಆರ್ಥಿಕವಾಗಿ ಸಂಪೂರ್ಣವಾಗಿ ಜರ್ಝ ರಿತವಾಗಿದೆ. ಜನರು ಸರಕಾರಕ್ಕೆ ಹಿಡಿಶಾಪ ಹಾಕುತ್ತಿರುವಂತೆಯೇ ಪಾಕಿಸ್ಥಾನದ ಪ್ರಧಾನಿ ಶೆಹಬಾಜ್‌ ಶರೀಫ್ ಅವರು ದೇಶವನ್ನು ಸದ್ಯದ ಬಿಕ್ಕಟ್ಟಿನಿಂದ ಪಾರು ಮಾಡಲು ಹೆಣಗಾಡುತ್ತಿದ್ದಾರೆ. ಈ ಹಿಂದೆ ಸದಾ ತನ್ನ ಬೆಂಗಾವಲಿಗೆ ನಿಲ್ಲುತ್ತಿದ್ದ ಚೀನ ಸಹಿತ ಪಾಕ್‌ನ ಪರಮಾಪ್ತ ರಾಷ್ಟ್ರಗಳು ಇದೀಗ ನಡುನೀರಿನಲ್ಲಿ ಕೈಬಿಟ್ಟಿವೆ.
ವಿದ್ಯುತ್‌, ತೈಲ, ಆಹಾರ, ಇಂಧನ ಸಹಿತ ಪ್ರತಿಯೊಂದೂ ಸೇವೆ ಮತ್ತು ವಸ್ತುಗಳ ಬೆಲೆ ಭಾರೀ ಏರಿಕೆಯನ್ನು ಕಂಡಿದೆ. ದೇಶದಲ್ಲಿನ ಹಣದುಬ್ಬರ ಸರಿಸುಮಾರು 5 ದಶಕಗಳಲ್ಲೇ ಗರಿಷ್ಠ ಮಟ್ಟವನ್ನು ತಲುಪಿದೆ. ಇನ್ನು ಬಾಹ್ಯ ಸಾಲ ಮರುಪಾವತಿಗೆ ಪರದಾಡುತ್ತಿರುವ ಪಾಕ್‌ನಲ್ಲಿನ ವಿದೇಶಿ ವಿನಿಮಯ ಮೀಸಲು 3.1 ಶತಕೋಟಿ ಡಾಲರ್‌ಗೆ ಇಳಿಕೆಯಾಗಿದ್ದು ಸದ್ಯದ ಸ್ಥಿತಿಯಲ್ಲಿ ಇದು ಮೂರು ವಾರಗಳಲ್ಲಿಯೇ ಮುಗಿಯಲಿದೆ. ಇದೇ ವೇಳೆ ದೇಶದಲ್ಲಿ ರಾಜಕೀಯ ಅಸ್ಥಿರತೆ, ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಅಲ್ಲಿನ ಸರಕಾರವನ್ನು ಮತ್ತಷ್ಟು ಕಂಗೆಡುವಂತೆ ಮಾಡಿದೆ.

ಕೊರೊನಾ ಹಾಗೂ ರಷ್ಯಾ-ಉಕ್ರೇನ್‌ ನಡುವಣ ಯುದ್ಧದ ಬಳಿಕ ಬಹುತೇಕ ದೇಶಗಳು ಆರ್ಥಿಕ ಸಂಕಷ್ಟಕ್ಕೀಡಾಗಿವೆ. ಅಷ್ಟು ಮಾತ್ರವಲ್ಲದೆ ಆಹಾರ ಪೂರೈಕೆ ಸರಪಳಿಯ ಮೇಲೂ ಯುದ್ಧ ಗಂಭೀರ ಪರಿಣಾಮ ಬೀರಿದೆ. ಇದರ ಜತೆಯಲ್ಲಿ ಆರ್ಥಿಕವಾಗಿ ಬಲಾಡ್ಯವಾಗಿರುವ ರಾಷ್ಟ್ರಗಳು ಪ್ರಸಕ್ತ ವರ್ಷ ತೀವ್ರ ಆರ್ಥಿಕ ಹಿಂಜರಿತಕ್ಕೊಳಗಾಗುವ ಸಾಧ್ಯತೆಗಳು ದಟ್ಟವಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ರಾಷ್ಟ್ರಗಳು ಉಳಿತಾಯ ಮತ್ತು ಸ್ವರಕ್ಷಣೆಯ ಮಂತ್ರವನ್ನು ಜಪಿಸ ಲಾರಂಭಿಸಿವೆ. ಈ ಎಲ್ಲ ಕಾರಣಗಳಿಂದಾಗಿ ಪಾಕಿಸ್ಥಾನಕ್ಕೆ ಯಾರೂ ನೆರವು ನೀಡಲು ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪಾಕಿಸ್ಥಾನ ಸಾಲಕ್ಕಾಗಿ ಐಎಂಎಫ್ ಗೆ ಪ್ರಸ್ತಾವನೆ ಸಲ್ಲಿಸಿತ್ತು. ಅದರಂತೆ ಸದ್ಯ ಪಾಕಿಸ್ಥಾನದಲ್ಲಿರುವ ಐಎಂಎಫ್ ನಿಯೋಗ ದೇಶದ ವಸ್ತುಸ್ಥಿತಿಯನ್ನು ಪರಿಶೀಲಿಸಿ ಸಾಲ ನೀಡಲು ವಿದ್ಯುತ್‌ ದರ ಹೆಚ್ಚಳ, ಸಬ್ಸಿಡಿಯಲ್ಲಿ ಇಳಿಕೆ ಸಹಿತ ಕೆಲವೊಂದು ಕಠಿನ ಷರತ್ತುಗಳನ್ನು ವಿಧಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ “ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ’ ಎಂಬ ಸ್ಥಿತಿಯಲ್ಲಿರು ವುದರಿಂದ ಪಾಕಿಸ್ಥಾನ ಈ ಎಲ್ಲ ಷರತ್ತುಗಳಿಗೆ ತಲೆಬಾಗಿದೆ. ಅಷ್ಟು ಮಾತ್ರವಲ್ಲದೆ ದೇಶದಲ್ಲಿ ಭಯೋತ್ಪಾದಕರು ತಿರುಗಾಡುತ್ತಿರುವುದಾಗಿ ಸ್ವತಃ ಪ್ರಧಾನಿ ಶೆಹಬಾಜ್‌ ಶರೀಫ್ ಒಪ್ಪಿಕೊಳ್ಳುವ ಮೂಲಕ ವಿಶ್ವ ಸಮುದಾಯದ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಪಾಕಿಸ್ಥಾನ ಈ ಹಿಂದಿನ ಘಟನಾವಳಿಗಳಿಂದ ಪಾಠ ಕಲಿ ಯದೇ ಹೋದುದರಿಂದ ಮತ್ತು ಸ್ವಯಂಕೃತ ಅಪರಾಧಗಳಿಂದ ಇನ್ನಿಲ್ಲದ ಸಂಕಷ್ಟವನ್ನು ಎದುರಿಸುತ್ತಿದೆ. ಸದ್ಯಕ್ಕಂತೂ ಪಾಕಿಸ್ಥಾನದ ಪಾಲಿಗೆ ಭವಿಷ್ಯಕ್ಕಿಂತ ವರ್ತಮಾನದ್ದೇ ಬಲುದೊಡ್ಡ ಚಿಂತೆಯಾಗಿದೆ.

ಟಾಪ್ ನ್ಯೂಸ್

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.