ಮುಜುಗರಕ್ಕೀಡಾದ ಪಾಕಿಸ್ತಾನ! ಟರ್ಕಿ ಕೊಟ್ಟಿದ್ದನ್ನೇ ಟರ್ಕಿಗೆ ಮರಳಿಸಿದ ಪಾಕ್
ಪ್ರಧಾನಿ ಶೆಹಬಾಜ್ ಷರೀಫ್ ಪ್ರವಾಸದಲ್ಲಿರುವಾಗಲೇ ಎಡವಟ್ಟು
Team Udayavani, Feb 19, 2023, 8:00 AM IST
ಇಸ್ಲಾಮಾಬಾದ್:“ಕೆರೆಯ ನೀರನ್ನು ಕೆರೆಗೆ ಚೆಲ್ಲಿ’ ಎಂಬ ಮಾತನ್ನು ಪಾಕಿಸ್ತಾನ ಸರ್ಕಾರವು ಅಕ್ಷರಶಃ ಪಾಲಿಸಿದೆ!
ಹೌದು, 2022ರಲ್ಲಿ ತೀವ್ರ ಪ್ರವಾಹ ಎದುರಾದಾಗ ತನಗೆ ಟರ್ಕಿ ದೇಶವು ಕಳುಹಿಸಿಕೊಟ್ಟಿದ್ದ ಪರಿಹಾರ ಸಾಮಗ್ರಿಗಳನ್ನೇ ಪಾಕಿಸ್ತಾನವು ಈಗ ರೀಪ್ಯಾಕ್ ಮಾಡಿ ಅದೇ ದೇಶಕ್ಕೆ ಭೂಕಂಪ ಪರಿಹಾರವಾಗಿ ಕಳುಹಿಸಿಕೊಟ್ಟಿದೆ. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಜುಗರ ಅನುಭವಿಸಿದೆ.
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭೂಕಂಪ ಪೀಡಿತ ಟರ್ಕಿಗೆ ಪ್ರವಾಸ ಕೈಗೊಂಡಿರುವಾಗಲೇ ಈ ಎಡವಟ್ಟು ನಡೆದಿದೆ.
ತಮಾಷೆಯೆಂದರೆ, ಟರ್ಕಿ ಸರ್ಕಾರವೇ ಕಳುಹಿಸಿಕೊಟ್ಟ ಪರಿಹಾರ ಸಾಮಗ್ರಿಗಳನ್ನು ನಮ್ಮ ಸರ್ಕಾರ ಟರ್ಕಿಗೇ ಕಳುಹಿಸಿದೆ ಎಂದು ಪಾಕ್ ಪತ್ರಕರ್ತ ಶಾಹಿದ್ ಮಸೂದ್ ಬಹಿರಂಗಪಡಿಸಿದ್ದಾರೆ.
ಹಣದುಬ್ಬರ ಶೇ.38.42ಕ್ಕೆ ಏರಿಕೆ:
ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವ ಪಾಕಿಸ್ತಾನದ ಹಣದುಬ್ಬರ ಶೇ.38.42ಕ್ಕೆ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯಿಂದ ಆರ್ಥಿಕ ನೆರವು ಪಡೆಯುವ ಬಗ್ಗೆ ಮಾತುಕತೆಗಳು ಪ್ರಗತಿಯಲ್ಲಿ ಇರುವಂತೆಯೇ ಈ ಬೆಳವಣಿಗೆಯಾಗಿದೆ. ತೈಲೋತ್ಪನ್ನಗಳು, ಅನಿಲದ ಬೆಲೆಯನ್ನು ಐಎಂಎಫ್ ನಿರ್ದೇಶನದ ಅನ್ವಯ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿತ್ತು.
ಪಾಕಿಸ್ತಾನದ ಸಾಂಖ್ಯಿಕ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ವರ್ಷಕ್ಕೆ ಹೋಲಿಕೆ ಮಾಡಿದರೆ ಹಣದುಬ್ಬರ ಪ್ರಮಾಣ ಶೇ.38.42ಕ್ಕೆ ಏರಿಕೆಯಾಗಿದೆ. ಕಳೆದ ವಾರ 34 ವಸ್ತುಗಳ ದರದಲ್ಲಿ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.