ಪಿವಿಸಿ ಪೈಪ್ ಗಳ ಮೂಲಕ ಪಾಕ್ ನಿಂದ ಕಾಶ್ಮೀರಕ್ಕೆ ಮಾದಕ ವಸ್ತು ಸಾಗಣೆ!
ಕತ್ತಲು ಮತ್ತು ದಟ್ಟ ಕಾಡಿನ ಲಾಭ ಪಡೆದು ದುಷ್ಕರ್ಮಿಗಳು ಪಾಕಿಸ್ತಾನದ ಕಡೆಗೆ ಓಡಿಹೋಗಿದ್ದಾರೆ.
Team Udayavani, Sep 21, 2020, 10:05 AM IST
Representative Image
ಶ್ರೀನಗರ: ಪಿವಿಸಿ ಪೈಪ್ಗಳ ಮೂಲಕ ಕಾಶ್ಮೀರಕ್ಕೆ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಕುತಂತ್ರ ವನ್ನು ಬಿಎಸ್ಎಫ್ ಯೋಧರು ಬೇಧಿಸಿದ್ದಾರೆ. ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾನುವಾರ 62 ಕಿಲೋ ಹೆರಾಯಿನ್, ಶಸ್ತ್ರಾಸ್ತ್ರ, ಮದ್ದು ಗುಂಡುಗಳನ್ನು ಭದ್ರತಾಪಡೆ ವಶ ಪಡಿಸಿಕೊಂಡಿದೆ.
ಕಾಶ್ಮೀರದ ಆರ್.ಎಸ್. ಪುರ ವಲಯದ ಅಂತ ರಾಷ್ಟ್ರೀಯ ಗಡಿಯಲ್ಲಿ ಸೆ.19, 20ರ ರಾತ್ರಿ ಪಾಕ್ ದುಷ್ಕರ್ಮಿಗಳು ಪೈಪ್ ಗಳಲ್ಲಿ ಮಾದಕ ವಸ್ತುಗಳನ್ನು ತುಂಬಿ ಸಾಗಿಸುತ್ತಿದ್ದರು. ಕೂಡಲೇ ಎಚ್ಚೆತ್ತುಕೊಂಡ 42 ಬೆಟಾಲಿಯನ್ ತಂಡ ಕಾರ್ಯಾಚರಣೆಗೆ ಮುನ್ನುಗ್ಗಿತ್ತು.
“ಕತ್ತಲು ಮತ್ತು ದಟ್ಟ ಕಾಡಿನ ಲಾಭ ಪಡೆದು ದುಷ್ಕರ್ಮಿಗಳು ಪಾಕಿಸ್ತಾನದ ಕಡೆಗೆ ಓಡಿಹೋಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ 62 ಹೆರಾಯಿನ್ ಪಾಕೆಟ್, 2 ಚೀನೀ ಪಿಸ್ತೂಲ್, 4 ಮ್ಯಾಗಜಿನ್, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಬಿಎಸ್ಎಫ್ ಐಜಿ ತಿಳಿಸಿದ್ದಾರೆ.
ಈ ಹಿಂದೆ ಪಂಜಾಬ್ನಲ್ಲೂ ಪಾಕ್ ಇದೇ ರೀತಿಯ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸುವ ಪಿತೂರಿ ನಡೆಸಿತ್ತು. ಆ ಎಲ್ಲ ಕುತಂತ್ರಗಳನ್ನೂ ಸೇನೆ ಹಿಮ್ಮೆಟ್ಟಿಸಿದ್ದ ಕಾರಣ ಪಾಕಿಸ್ತಾನ ಈಗ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಅಕ್ರಮ ಎಸಗಲೆತ್ನಿಸುತ್ತಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.