CISF ಗೆ ಸಂಸತ್‌ ಭದ್ರತೆಯ ಹೊಣೆ: ಸಮಯೋಚಿತ ನಿರ್ಧಾರ


Team Udayavani, Dec 21, 2023, 10:19 PM IST

cisf

ವಾರದ ಹಿಂದಷ್ಟೇ ದೇಶದ ಪ್ರಜಾಸತ್ತೆಯ ದೇಗುಲವಾದ ಸಂಸತ್‌ ಭವನದಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಭದ್ರತಾ ಲೋಪ ನಡೆದ ಘಟನೆಯ ಬಳಿಕ ಈಗ ಇಡೀ ಸಂಸತ್‌ ಆವರಣದ ಸಮಗ್ರ ಭದ್ರತೆಯ ಹೊಣೆಗಾರಿಕೆಯನ್ನು ಕೇಂದ್ರೀಯ ಕೈಗಾರಿಕ ಭದ್ರತಾ ಪಡೆ (ಸಿಐಎಸ್‌ಎಫ್)ಗೆ ವಹಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಕಳೆದ ವಾರ ಸಂಸತ್ತಿನಲ್ಲಿ ಸಂಭವಿಸಿದ ಕರಾಳ ಘಟನೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತಲ್ಲದೆ ಜನತೆಯಲ್ಲಿ ಆತಂಕ ಸೃಷ್ಟಿಸಿತ್ತು. ಈ ಎಲ್ಲ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಈ ಸಮಯೋಚಿತ ಮತ್ತು ಸಕಾಲಿಕ ನಿರ್ಧಾರವನ್ನು ಕೈಗೊಂಡಿದೆ.

ಈವರೆಗೆ ಸಂಸತ್‌ ಭವನದ ಭದ್ರತೆಯ ಹೊಣೆಯನ್ನು ವಿವಿಧ ಭದ್ರತಾ ಸಂಸ್ಥೆಗಳು ಮತ್ತು ಪಡೆಗಳನ್ನು ಒಳಗೊಂಡ ಸಂಸತ್‌ ಭದ್ರತಾ ಸೇವೆ(ಪಿಎಸ್‌ಎಸ್‌) ಹೊಂದಿತ್ತು. ಇದು ದೆಹಲಿ ಪೊಲೀಸರ ಅಧೀನಕ್ಕೊಳಪಟ್ಟಿತ್ತು. ಇನ್ನು ಮುಂದೆ ಅವರು ಸಂಸತ್‌ ಭವನದ ಹೊರವಲಯದ ರಕ್ಷಣ ಕಾರ್ಯದಲ್ಲಿ ಮುಂದುವರಿಯಲಿದ್ದರೆ, ಸಂಸತ್‌ ಸಂಕೀರ್ಣದ ಒಳಗಿನ ಭದ್ರತೆಯ ಹೊಣೆಗಾರಿಕೆ ಈಗಿನಂತೆಯೇ ಲೋಕಸಭಾ ಕಾರ್ಯಾಲಯದ ಅಧೀನದಲ್ಲಿಯೇ ಮುಂದುವರಿಯಲಿದೆ. ಆದರೆ ಇನ್ನು ಮುಂದೆ ಹಳೆಯ ಹಾಗೂ ಹೊಸ ಸಂಸತ್‌ ಭವನದ ಭದ್ರತೆಯ ಸಮಗ್ರ ಹೊಣೆಗಾರಿಕೆ ಸಿಐಎಸ್‌ಎಫ್ನದ್ದಾಗಿರಲಿದೆ.

ದೇಶದ ರಾಜಧಾನಿಯ ಪ್ರಮುಖ ಸರ್ಕಾರಿ ಕಟ್ಟಡಗಳು, ದೇಶದ ವಿವಿಧೆಡೆಗಳಲ್ಲಿನ ಸಾರ್ವಜನಿಕ ವಲಯದ ಉದ್ಯಮ ಸಂಸ್ಥೆಗಳು, ವಿಮಾನ ನಿಲ್ದಾಣಗಳು, ಪರಮಾಣು ಘಟಕಗಳು, ದೆಹಲಿ ಮೆಟ್ರೋ ಸಹಿತ ವಿವಿಧ ಮಹತ್ವದ ಮತ್ತು ಅತ್ಯುನ್ನತ ಸಂಸ್ಥೆ, ಕಟ್ಟಡಗಳ ಭದ್ರತೆಯ ಹೊಣೆಗಾರಿಕೆಯನ್ನು ಸಿಐಎಸ್‌ಎಫ್ ಸಮರ್ಥವಾಗಿ ನಿರ್ವಹಿಸುತ್ತಿದೆ. ಅಷ್ಟೇ ಅಲ್ಲದೆ ಸಂಸತ್‌ ಭವನದ ಭದ್ರತೆಯನ್ನು ನಿರ್ವಹಿಸುತ್ತಿದ್ದ ಪಿಎಸ್‌ಎಸ್‌ನ ಒಂದು ಭಾಗವಾಗಿತ್ತು. ಈ ಎಲ್ಲ ಕಾರಣಗಳಿಂದಾಗಿ ಕೇಂದ್ರ ಸರ್ಕಾರ ಸಂಸತ್‌ ಭವನದ ಭದ್ರತೆಯ ಸಂಪೂರ್ಣ ಜವಾಬ್ದಾರಿಯನ್ನು ಸಿಐಎಸ್‌ಎಫ್ಗೆ ವಹಿಸುವ ತೀರ್ಮಾನ ಕೈಗೊಂಡಿದೆ.

ಡಿ. 13ರಂದು ಸಂಸತ್‌ ಭವನದಲ್ಲಿ ಸಂಭವಿಸಿದಂತಹ ಭದ್ರತಾ ವೈಫ‌ಲ್ಯ ಭವಿಷ್ಯದಲ್ಲಿ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರ್ಕಾರ ಈ ಮಹತ್ತರ ನಿರ್ಧಾರ ಕೈಗೊಂಡಿದೆ. ಇದೇ ವೇಳೆ ಕೇಂದ್ರ ಸರ್ಕಾರ ಸಂಸತ್‌ ಭವನಕ್ಕೆ ಸಂದರ್ಶಕರ ಪ್ರವೇಶದ ವ್ಯವಸ್ಥೆಯಲ್ಲೂ ಆಮೂಲಾಗ್ರ ಬದಲಾವಣೆಯನ್ನು ಮಾಡಬೇಕಿದೆ. ಪಾಸ್‌ ಪಡೆದುಕೊಂಡು ಸಂಸತ್‌ ಭವನವನ್ನು ಪ್ರವೇಶಿಸುವವರ ಮೇಲೆ ಇನ್ನಷ್ಟು ಹೆಚ್ಚಿನ ನಿಗಾ ಇರಿಸುವ ಅಗತ್ಯವಿದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ರಂಗೋಲಿಯಡಿಗೆ ನುಸುಳುವವರ ಸಂಖ್ಯೆಯೇ ಅಧಿಕವಾಗಿರುವುದರಿಂದ ಸರ್ಕಾರ ಮತ್ತು ಭದ್ರತಾ ಪಡೆಗಳು ಕೂಡ ಭದ್ರತಾ ವ್ಯವಸ್ಥೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಇನ್ನಷ್ಟು ಹೆಚ್ಚು ಪರಿಣಾಮಕಾರಿಯಾಗಿ ಬಳಸಬೇಕು. ಸಂಸತ್‌ ಭವನದ ಭದ್ರತೆಯ ವಿಷಯದಲ್ಲಿ ಸರ್ಕಾರ ಸಿಐಎಸ್‌ಎಫ್ಗೆ ಸಂಪೂರ್ಣ ಸ್ವಾಯತ್ತೆ ನೀಡಬೇಕು. ಇಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ, ರಾಜಿ, ಹೊಂದಾಣಿಕೆಗೆ ಅವಕಾಶ ನೀಡಕೂಡದು. ಭದ್ರತಾ ವ್ಯವಸ್ಥೆಯಲ್ಲಿನ ಅತೀ ಸಣ್ಣ ಲೋಪ ಕೂಡ ಬಲುದೊಡ್ಡ ಅನಾಹುತಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಮತ್ತು ಸಂಸತ್‌ ಭವನದ ಭದ್ರತೆ ಮತ್ತು ಅದಕ್ಕೆ ಭಂಗದಂತಹ ಘಟನೆಗಳು ದೇಶದ ಘನತೆ-ಗೌರವಗಳ ವಿಚಾರವೂ ಆಗಿರುವುದರಿಂದ ಸರಕಾರ ಇದರತ್ತ ಹೆಚ್ಚಿನ ಲಕ್ಷ್ಯ ಹರಿಸಬೇಕು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.