CISF ಗೆ ಸಂಸತ್‌ ಭದ್ರತೆಯ ಹೊಣೆ: ಸಮಯೋಚಿತ ನಿರ್ಧಾರ


Team Udayavani, Dec 21, 2023, 10:19 PM IST

cisf

ವಾರದ ಹಿಂದಷ್ಟೇ ದೇಶದ ಪ್ರಜಾಸತ್ತೆಯ ದೇಗುಲವಾದ ಸಂಸತ್‌ ಭವನದಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಭದ್ರತಾ ಲೋಪ ನಡೆದ ಘಟನೆಯ ಬಳಿಕ ಈಗ ಇಡೀ ಸಂಸತ್‌ ಆವರಣದ ಸಮಗ್ರ ಭದ್ರತೆಯ ಹೊಣೆಗಾರಿಕೆಯನ್ನು ಕೇಂದ್ರೀಯ ಕೈಗಾರಿಕ ಭದ್ರತಾ ಪಡೆ (ಸಿಐಎಸ್‌ಎಫ್)ಗೆ ವಹಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಕಳೆದ ವಾರ ಸಂಸತ್ತಿನಲ್ಲಿ ಸಂಭವಿಸಿದ ಕರಾಳ ಘಟನೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತಲ್ಲದೆ ಜನತೆಯಲ್ಲಿ ಆತಂಕ ಸೃಷ್ಟಿಸಿತ್ತು. ಈ ಎಲ್ಲ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಈ ಸಮಯೋಚಿತ ಮತ್ತು ಸಕಾಲಿಕ ನಿರ್ಧಾರವನ್ನು ಕೈಗೊಂಡಿದೆ.

ಈವರೆಗೆ ಸಂಸತ್‌ ಭವನದ ಭದ್ರತೆಯ ಹೊಣೆಯನ್ನು ವಿವಿಧ ಭದ್ರತಾ ಸಂಸ್ಥೆಗಳು ಮತ್ತು ಪಡೆಗಳನ್ನು ಒಳಗೊಂಡ ಸಂಸತ್‌ ಭದ್ರತಾ ಸೇವೆ(ಪಿಎಸ್‌ಎಸ್‌) ಹೊಂದಿತ್ತು. ಇದು ದೆಹಲಿ ಪೊಲೀಸರ ಅಧೀನಕ್ಕೊಳಪಟ್ಟಿತ್ತು. ಇನ್ನು ಮುಂದೆ ಅವರು ಸಂಸತ್‌ ಭವನದ ಹೊರವಲಯದ ರಕ್ಷಣ ಕಾರ್ಯದಲ್ಲಿ ಮುಂದುವರಿಯಲಿದ್ದರೆ, ಸಂಸತ್‌ ಸಂಕೀರ್ಣದ ಒಳಗಿನ ಭದ್ರತೆಯ ಹೊಣೆಗಾರಿಕೆ ಈಗಿನಂತೆಯೇ ಲೋಕಸಭಾ ಕಾರ್ಯಾಲಯದ ಅಧೀನದಲ್ಲಿಯೇ ಮುಂದುವರಿಯಲಿದೆ. ಆದರೆ ಇನ್ನು ಮುಂದೆ ಹಳೆಯ ಹಾಗೂ ಹೊಸ ಸಂಸತ್‌ ಭವನದ ಭದ್ರತೆಯ ಸಮಗ್ರ ಹೊಣೆಗಾರಿಕೆ ಸಿಐಎಸ್‌ಎಫ್ನದ್ದಾಗಿರಲಿದೆ.

ದೇಶದ ರಾಜಧಾನಿಯ ಪ್ರಮುಖ ಸರ್ಕಾರಿ ಕಟ್ಟಡಗಳು, ದೇಶದ ವಿವಿಧೆಡೆಗಳಲ್ಲಿನ ಸಾರ್ವಜನಿಕ ವಲಯದ ಉದ್ಯಮ ಸಂಸ್ಥೆಗಳು, ವಿಮಾನ ನಿಲ್ದಾಣಗಳು, ಪರಮಾಣು ಘಟಕಗಳು, ದೆಹಲಿ ಮೆಟ್ರೋ ಸಹಿತ ವಿವಿಧ ಮಹತ್ವದ ಮತ್ತು ಅತ್ಯುನ್ನತ ಸಂಸ್ಥೆ, ಕಟ್ಟಡಗಳ ಭದ್ರತೆಯ ಹೊಣೆಗಾರಿಕೆಯನ್ನು ಸಿಐಎಸ್‌ಎಫ್ ಸಮರ್ಥವಾಗಿ ನಿರ್ವಹಿಸುತ್ತಿದೆ. ಅಷ್ಟೇ ಅಲ್ಲದೆ ಸಂಸತ್‌ ಭವನದ ಭದ್ರತೆಯನ್ನು ನಿರ್ವಹಿಸುತ್ತಿದ್ದ ಪಿಎಸ್‌ಎಸ್‌ನ ಒಂದು ಭಾಗವಾಗಿತ್ತು. ಈ ಎಲ್ಲ ಕಾರಣಗಳಿಂದಾಗಿ ಕೇಂದ್ರ ಸರ್ಕಾರ ಸಂಸತ್‌ ಭವನದ ಭದ್ರತೆಯ ಸಂಪೂರ್ಣ ಜವಾಬ್ದಾರಿಯನ್ನು ಸಿಐಎಸ್‌ಎಫ್ಗೆ ವಹಿಸುವ ತೀರ್ಮಾನ ಕೈಗೊಂಡಿದೆ.

ಡಿ. 13ರಂದು ಸಂಸತ್‌ ಭವನದಲ್ಲಿ ಸಂಭವಿಸಿದಂತಹ ಭದ್ರತಾ ವೈಫ‌ಲ್ಯ ಭವಿಷ್ಯದಲ್ಲಿ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರ್ಕಾರ ಈ ಮಹತ್ತರ ನಿರ್ಧಾರ ಕೈಗೊಂಡಿದೆ. ಇದೇ ವೇಳೆ ಕೇಂದ್ರ ಸರ್ಕಾರ ಸಂಸತ್‌ ಭವನಕ್ಕೆ ಸಂದರ್ಶಕರ ಪ್ರವೇಶದ ವ್ಯವಸ್ಥೆಯಲ್ಲೂ ಆಮೂಲಾಗ್ರ ಬದಲಾವಣೆಯನ್ನು ಮಾಡಬೇಕಿದೆ. ಪಾಸ್‌ ಪಡೆದುಕೊಂಡು ಸಂಸತ್‌ ಭವನವನ್ನು ಪ್ರವೇಶಿಸುವವರ ಮೇಲೆ ಇನ್ನಷ್ಟು ಹೆಚ್ಚಿನ ನಿಗಾ ಇರಿಸುವ ಅಗತ್ಯವಿದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ರಂಗೋಲಿಯಡಿಗೆ ನುಸುಳುವವರ ಸಂಖ್ಯೆಯೇ ಅಧಿಕವಾಗಿರುವುದರಿಂದ ಸರ್ಕಾರ ಮತ್ತು ಭದ್ರತಾ ಪಡೆಗಳು ಕೂಡ ಭದ್ರತಾ ವ್ಯವಸ್ಥೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಇನ್ನಷ್ಟು ಹೆಚ್ಚು ಪರಿಣಾಮಕಾರಿಯಾಗಿ ಬಳಸಬೇಕು. ಸಂಸತ್‌ ಭವನದ ಭದ್ರತೆಯ ವಿಷಯದಲ್ಲಿ ಸರ್ಕಾರ ಸಿಐಎಸ್‌ಎಫ್ಗೆ ಸಂಪೂರ್ಣ ಸ್ವಾಯತ್ತೆ ನೀಡಬೇಕು. ಇಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ, ರಾಜಿ, ಹೊಂದಾಣಿಕೆಗೆ ಅವಕಾಶ ನೀಡಕೂಡದು. ಭದ್ರತಾ ವ್ಯವಸ್ಥೆಯಲ್ಲಿನ ಅತೀ ಸಣ್ಣ ಲೋಪ ಕೂಡ ಬಲುದೊಡ್ಡ ಅನಾಹುತಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಮತ್ತು ಸಂಸತ್‌ ಭವನದ ಭದ್ರತೆ ಮತ್ತು ಅದಕ್ಕೆ ಭಂಗದಂತಹ ಘಟನೆಗಳು ದೇಶದ ಘನತೆ-ಗೌರವಗಳ ವಿಚಾರವೂ ಆಗಿರುವುದರಿಂದ ಸರಕಾರ ಇದರತ್ತ ಹೆಚ್ಚಿನ ಲಕ್ಷ್ಯ ಹರಿಸಬೇಕು.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ಗ್ರಾಮೀಣರ ಆರೋಗ್ಯ ಸುರಕ್ಷೆ ಮಹತ್ವಾಕಾಂಕ್ಷೆ ಈಡೇರಲಿ

State Govt: ಗ್ರಾಮೀಣರ ಆರೋಗ್ಯ ಸುರಕ್ಷೆ ಮಹತ್ವಾಕಾಂಕ್ಷೆ ಈಡೇರಲಿ

ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

India: ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.