ಪವಿತ್ರ ವಸ್ತ್ರ ಅಭಿಯಾನಕ್ಕೆ ಚಾಲನೆ : ಕೈಮಗ್ಗ ಮತ್ತು ಕರಕುಶಲ ಉತ್ಪನ್ನಗಳ ಪ್ರದರ್ಶನ
Team Udayavani, Sep 19, 2021, 12:27 PM IST
ಶಿರಸಿ : ಹೆಗ್ಗೋಡು ಚರಕ ಸಂಸ್ಥೆ ರಾಜ್ಯಾದ್ಯಂತ ನಡೆಸುತ್ತಿರುವ ಕೈಮಗ್ಗ ಮತ್ತು ಕರಕುಶಲ ಉತ್ಪನ್ನಗಳ ಪ್ರದರ್ಶನ ಹಾಗು ಮಾರಾಟದ ಪವಿತ್ರ ವಸ್ತ್ರ ಅಭಿಯಾನ ನಗರದ ಟಿಎಸ್ಎಸ್ ಸಂಸ್ಥೆ ಆವರಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.
ದೇಸೀ ಕೈಮಗ್ಗದಲ್ಲಿ ತಯಾರಿಸಲಾದ ಆಕರ್ಷಕ ವಸ್ತ್ರಗಳು, ಹುಲ್ಲಿನ ಬುಟ್ಟಿಗಳು, ಅಲಂಕಾರಿಕ ವಸ್ತುಗಳು, ನೈಸರ್ಗಿಕವಾಗಿ ಬೆಳೆದ ಬೆಳೆಗಳು, ಪ್ರದರ್ಶನ ಹಾಗೂ ಮಾರಾಟ ಇದಾಗಿದ್ದು, ನಾಲ್ಕು ದಿನಗಳ ಕಾಲ ನಡೆಯಲಿದೆ. ನಗರ ಹಾಗೂ ಗ್ರಾಮೀಣ ಭಾಗದ ಜನ ಆಗಮಿಸಿ ಪ್ರದರ್ಶನ ವೀಕ್ಷಿಸುವುದರ ಜತೆಯಲ್ಲಿ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಅನುಕೂಲ ಆಗುವಂತೆ ನಾಲ್ಕು ದಿನಗಳ ಕಾಲ ನಡೆಸಲಾಗುತ್ತಿದೆ.
ಪ್ರಸಿದ್ದ ಸಹಕಾರಿ ಸಂಸ್ಥೆ
ಟಿಎಸ್ಎಸ್ ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಉದ್ಘಾಟಿಸಿದರು. ಚರಕ ಸಂಸ್ಥೆಯ ಆಶಾ ಮಾತನಾಡಿ, ಇಂದು ಕೈಮಗ್ಗ ಹಾಗೂ ಕರಕುಶಲ ಉತ್ಪನ್ನಗಳಿಗೆ ಮಹತ್ವವಿದ್ದು ಅದನ್ನು ಅರಿತುಕೊಳ್ಳಬೇಕು ಎಂದರು.
ಪತ್ರಕರ್ತ ಅಶೋಕ ಹಾಸ್ಯಗಾರ ಮಾತನಾಡಿ, ಚರಕ ಆಂದೊಲವನ್ನು ಗಾಂಧೀಜಿ ಆರಂಭಿಸಿದರು. ಈ ಮೂಲಕ ಬ್ರಿಟಿಷರನ್ನು ದೇಶಬಿಟ್ಟು ತೊಲಗಿಸಿದರು, ಕೈ ಮಗ್ಗ ಹಾಗೂ ದೇಶಿ ಚಿಂತನೆ ಬೆಳೆಸಿದರು. ಜನರ ಕೈಗೆ ದುಡಿಮೆ ನೀಡುವ ದ್ರಷ್ಟಿಯಿಂದ ದೇಶದಲ್ಲಿ ಬಟ್ಟೆಗಳನ್ನು ಹೆಚ್ಚೆಚ್ಚು ಮಾರಾಟ ಮಾಡಬೇಕು ಎಂದರು.
ಟಿಎಸ್ಎಸ್ ನಿರ್ದೇಶಕ ಗಣಪತಿ ರಾಯ್ಸದ ಉಪಸ್ಥಿತರಿದ್ದರು. ರಂಗಕರ್ಮಿ ಶ್ರೀಪಾದ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.