![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 23, 2021, 5:48 PM IST
ಒಂದಕ್ಕಿಂತ ಹೆಚ್ಚು ಕಥೆಗಳನ್ನು ಇಟ್ಟುಕೊಂಡು ಒಂದು ಸಿನಿಮಾ ಮಾಡುವ ಆ್ಯಂಥಾಲಜಿ ಸಿನಿಮಾಗಳ ಟ್ರೆಂಡ್ ಕನ್ನಡದಲ್ಲಿ ನಿಧಾನವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಒಂದೆರಡು ಆ್ಯಂಥಾಲಜಿ ಸಿನಿಮಾಗಳು ಪ್ರೇಕ್ಷಕರ ಮುಂದೆ ಬಂದು ಸಕ್ಸಸ್ ಆಗಿದ್ದು, ಈಗ “ಪೆಂಟಗನ್’ ಎನ್ನುವ ಅಂಥದ್ದೇ ಮತ್ತೂಂದು ಸಿನಿಮಾ ತಯಾರಾಗುತ್ತಿದೆ.
ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ಸಾರಥ್ಯದಲ್ಲಿ “ಪೆಂಟಗನ್’ ಸಿನಿಮಾ ತಯಾರಾಗುತ್ತಿದ್ದು, ಇದರಲ್ಲಿ ಏಕಕಾಲಕ್ಕೆ ಐದು ಕಥೆಗಳನ್ನು ತೆರೆಮೇಲೆ ಹೇಳಲಾಗುತ್ತಿದೆ.
ಇನ್ನು “ಪೆಂಟಗನ್’ ಸಿನಿಮಾದಲ್ಲಿ ಬರುವ ಒಂದು ಕಥೆಯನ್ನು ಗುರು ದೇಶಪಾಂಡೆ ನಿರ್ದೇಶಿಸಿದರೆ, ಇನ್ನುಳಿದ ನಾಲ್ಕು ಕಥೆಗಳಿಗೆ
ಆಕಾಶ್ ಶ್ರೀವತ್ಸ, ರಾಘು ಶಿವಮೊಗ್ಗ, ಚಂದ್ರ ಮೋಹನ್ ಮತ್ತು ಕಿರಣ್ ಕುಮಾರ್ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ:ವಿನೋದ್ ಕಣ್ಣಲ್ಲಿ ಶ್ಯಾಡೋ ಕನಸು : ಆ್ಯಕ್ಷನ್ ಹೀರೋನ ಫ್ಯಾಮಿಲಿ ಎಂಟರ್ಟೈನರ್
ಐದೂ ಕಥೆಗಳ ಕಥಾವಸ್ತು ಬೇರೆಯಾಗಿದ್ದರೂ, ಎಲ್ಲದರಲ್ಲೂ ಒಂದು ಸಾಮಾನ್ಯ ವಿಷಯ ಅಡಕವಾಗಿದೆ. ಈ ವಿಷಯವೇ ಎಲ್ಲ ಕಥೆಗಳಿಗೂ ಒಂದು ಕಾಮನ್ ಕೊಂಡಿಯಾಗಿರುತ್ತದೆ ಎನ್ನುತ್ತಾರೆ ಚಿತ್ರದ ಐವರು ನಿರ್ದೇಶಕರು. ಇತ್ತೀಚೆಗೆ “ಪೆಂಟಗನ್’ ಚಿತ್ರದ ಈ ಐದು ಕಥೆಗಳ ಥೀಮ್ ಪೋಸ್ಟರ್ಗಳನ್ನು ನಟ ಧನಂಜಯ್, ರಿಷಬ್ ಶೆಟ್ಟಿ, ನಟಿಯರಾದ ರಚಿತಾ ರಾಮ್, ಹರಿಪ್ರಿಯಾ
ಬಿಡುಗಡೆ ಮಾಡಿದರು.
ಚಿತ್ರದ ಮೋಷನ್ ಪೋಸ್ಟರ್ನ ನಟ ಉಪೇಂದ್ರ ಬಿಡುಗಡೆ ಮಾಡಿದ್ದಾರೆ. ಈಗಾಗಲೇ “ಪೆಂಟಗನ್’ ಸಿನಿಮಾದಲ್ಲಿರುವ ಐದು ಕಥೆಗಳ ಪೈಕಿ ಮೂರರ ಚಿತ್ರೀಕರಣ ಬೆಂಗಳೂರಿನ ಸುತ್ತಮುತ್ತ ನಡೆಸಲಾಗಿದ್ದು, ಬಾಕಿಯಿರುವ ಎರಡು ಕಥೆಗಳ ಚಿತ್ರೀಕರಣ ಸದ್ಯದಲ್ಲೇ ನಡೆಯಲಿದೆಯಂತೆ. ಉಳಿದಂತೆ ಈ ಐದು ಕಥೆಗಳ ಪಾತ್ರಗಳಲ್ಲಿ ಯಾರೆಲ್ಲಾ ನಟಿಸಿದ್ದಾರೆ ಎಂಬ ವಿಷಯವನ್ನು
ಗುಟ್ಟಾಗಿಟ್ಟಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಈ ಬಗ್ಗೆ ಉಳಿದ ಮಾಹಿತಿ ನೀಡುವುದಾಗಿ ಹೇಳಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.