ಕೇರಳ, ಪಂಜಾಬ್ನಲ್ಲಿ ಪೆಟ್ರೋಲ್, ಡೀಸೆಲ್ ತುಟ್ಟಿ
Team Udayavani, Feb 4, 2023, 7:10 AM IST
ತಿರುವನಂತಪುರ/ ಚಂಡೀಗಢ: ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರಕಾರ ಶುಕ್ರವಾರ ತನ್ನ ಮುಂಗಡಪತ್ರವನ್ನು ಮಂಡಿಸಿದೆ. ಇದರ ಪರಿಣಾಮ ಆ ರಾಜ್ಯದಲ್ಲಿ ಮದ್ಯ ಹಾಗೂ ಇಂಧನದ ಬೆಲೆ ಇನ್ನಷ್ಟು ಏರಲಿದೆ!
ಪೆಟ್ರೋಲ್, ಡೀಸೆಲ್, ಮದ್ಯದ ಮೇಲೆ ಸಾಮಾಜಿಕ ಸುರûಾ ಸೆಸ್ ಹೇರಿರುವುದೇ ಇದಕ್ಕೆ ಕಾರಣ. ಆದಾಯದ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲು ಸರಕಾರ ಈ ಕ್ರಮ ತೆಗೆದುಕೊಂಡಿದೆ. ಮುಂಗಡಪತ್ರ ಮಂಡಿಸಿದ ವಿತ್ತಸಚಿವ ಕೆ.ಎನ್. ಬಾಲಗೋಪಾಲ್, 500ರಿಂದ 999 ರೂ. ನಡುವೆ ಬೆಲೆಯಿರುವ ಭಾರತದಲ್ಲಿ ತಯರಾಗಿರುವ ವಿದೇಶಿ ಮದ್ಯದ ಪ್ರತೀ ಬಾಟಲ್ ಮೇಲೆ 20 ರೂ. ಸೆಸ್ ಹಾಕಲಾಗುತ್ತದೆ. ಬೆಲೆ 1000 ರೂ. ದಾಟಿದರೆ ಈ ದರ 40 ರೂ.ಗೇರುತ್ತದೆ ಎಂದಿದ್ದಾರೆ. ಇದೇ ವೇಳೆ, ಅಗತ್ಯ ವಸ್ತುಗಳ ಬೆಲೆಯೇರಿಕೆ ನಿಯಂತ್ರಣಕ್ಕಾಗಿ ಸರಕಾರ 2,000 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದಾಗಿ ಘೋಷಿದ್ದಾರೆ.
ಪಂಜಾಬ್ನಲ್ಲಿ ತೈಲಕ್ಕೆ ಸೆಸ್: ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರಕಾರ ಪ್ರತೀ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 90 ಪೈಸೆ ಸೆಸ್ ವಿಧಿಸಲು ನಿರ್ಧರಿಸಿದೆ.
ಇದರಿಂದ ರಾಜ್ಯದಲ್ಲಿ ಇಂಧನಗಳ ಬೆಲೆ ಮತ್ತಷ್ಟು ದುಬಾರಿಯಾಗಲಿದೆ. ಶುಕ್ರವಾರ ಸಚಿವ ಸಂಪುಟ ಸಭೆ ಬಳಿಕ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಅಮನ್ ಅರೋರಾ ಈ ಕುರಿತು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ದೀರ್ಘಕಾಲದಿಂದ ಬೆಲೆ ಹೆಚ್ಚಳವಾಗಿಲ್ಲ. ಜತೆಗೆ ರಾಜ್ಯದ ಆದಾಯ ಉತ್ಪತ್ತಿಗೆ ಅಗತ್ಯವಾಗಿರುವ ಹಿನ್ನೆಲೆ ಸೆಸ್ ವಿಧಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ
Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ
Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್- ಚೆನ್ನೈ ಘಟಕ ಪುನರಾರಂಭ
BSE ಸೆನ್ಸೆಕ್ಸ್ 83,000 ಮತ್ತೊಂದು ಮೈಲುಗಲ್ಲು
Good News: ಶೀಘ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ? ಪಂಕಜ್ ಜೈನ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.