Heavy Rain ಹೊಳೆ ಮಧ್ಯೆ ಸಿಲುಕಿಕೊಂಡ ಪಿಕಪ್‌; ಕಾರ್ಯಾಚರಣೆ

ಹೊಳೆಯಲ್ಲಿ ಹರಿದು ಬಂದ ದಿಢೀರ್‌ ನೆರೆ ನೀರು

Team Udayavani, Jun 1, 2024, 1:01 AM IST

Heavy Rain ಹೊಳೆ ಮಧ್ಯೆ ಸಿಲುಕಿಕೊಂಡ ಪಿಕಪ್‌; ಕಾರ್ಯಾಚರಣೆ

ಸುಳ್ಯ: ಗುರುವಾರ ಅಪರಾಹ್ನ ಸುಬ್ರಹ್ಮಣ್ಯ, ಕೊಲ್ಲಮೊಗ್ರು ಪರಿಸರದಲ್ಲಿ ಧಾರಾಕಾರ ಮಳೆಯಾಗಿ ದ್ದು, ಈ ವೇಳೆ ಹೊಳೆಯಲ್ಲಿ ದಿಢೀರ್‌ ನೆರೆ ನೀರು ಹರಿದು ಬಂದು ಪಿಕಪ್‌ ವಾಹನ ವೊಂದು ನೆರೆ ನೀರಿನಲ್ಲಿ ಅಪಾಯಕ್ಕೆ ಸಿಲುಕಿದ ಘಟನೆ ಸಂಭವಿಸಿದೆ.

ಕೊಲ್ಲಮೊಗ್ರು ಗ್ರಾಮದ ಪನ್ನೆ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಕೋತ್ನಡ್ಕದ ರಾಮಕೃಷ್ಣ ಅವರ ಮನೆಯಿಂದ ಮಹೇಶ್‌ ಪಿಕಪ್‌ನಲ್ಲಿ ತೆಂಗಿನಕಾಯಿ ಹೇರಿಕೊಂಡು ಹಿಂದಿರುಗುವ ವೇಳೆ ಹೊಳೆ ದಾಟುವ ಸಂದರ್ಭ ದಿಢೀರ್‌ ನೆರೆ ನೀರು ಹರಿದು ಬಂದು ಹೊಳೆ ಮಧ್ಯದಲ್ಲಿ ಪಿಕಪ್‌ ವಾಹನ ಸಿಲುಕಿಕೊಂಡಿತು. ಈ ಘಟನೆಯಿಂದ ಪಿಕಪ್‌ನಲ್ಲಿದ್ದ ನೂರಾರು ತೆಂಗಿನಕಾಯಿಗಳು ನೀರು ಪಾಲಾಗಿವೆ ಎಂದು ತಿಳಿದುಬಂದಿದೆ.

ಹೊಳೆ ನಡುವೆ ಸಿಲುಕಿಕೊಂಡು, ಕೊಚ್ಚಿಕೊಂಡು ಹೋಗುವ ಭೀತಿಯಲ್ಲಿದ್ದ ಪಿಕಪ್‌ ವಾಹನಕ್ಕೆ ಹಗ್ಗ ಕಟ್ಟಿ, ನದಿ ದಡದಲ್ಲಿದ್ದವರು ಸೇರಿ ಎಳೆಯುವ ಕಾರ್ಯಾಚರಣೆ ನಡೆಸಿ ಪಿಕಪ್‌ ವಾಹನವನ್ನು ಹೊಳೆಯಿಂದ ಹೊರ ತಂದಿದ್ದಾರೆ.

ಧಾರಾಕಾರ ಮಳೆ: ಅಪಾಯಕ್ಕೆ ಸಿಲುಕಿದ ಕಟ್ಟಡಗಳು
ಸುಬ್ರಹ್ಮಣ್ಯ: ಗುರುವಾರ ಸಂಜೆ ಸುರಿದ ಮಳೆಗೆ ಯೇನೆ ಕಲ್ಲು ಪೇಟೆಯ ಬಳಿಯ ಹೊಳೆಯಲ್ಲಿ ಮಳೆ ನೀರಿನ ಹರಿವಿಗೆ ಮಣ್ಣು ಕೊಚ್ಚಿ ಹೋಗಿದ್ದು, ಕೆಲವು ಕಟ್ಟಡಗಳು ಅಪಾಯದಲ್ಲಿವೆ.

ಯೇನೆಕಲ್ಲು ಬಸ್‌ ನಿಲ್ದಾಣದ ಬಳಿಯಿಂದ ಇಸ್ಮಾಯಿಲ್‌ ಅವರ ಮನೆಯ ತನಕ, ಮಹಮ್ಮದ್‌ ಅವರ ಕಟ್ಟಡ, ನಾಳ ಕುಶಾಲಪ್ಪ ಗೌಡರ ಕಟ್ಟಡ, ಗಂಗಾಧರ ಪೈಲಾಜೆಯವರ ಕಟ್ಟಡ, ಇಸ್ಮಾಯಿಲ್‌ ಅವರ ಮನೆಯ ಹಿಂಭಾಗದ ತನಕ ಮಣ್ಣು ನೀರಿನಲ್ಲಿ ಕೊಚ್ಚಿಹೋಗಿ ಕಟ್ಟಡಗಳು ಅಪಾಯದ ಸ್ಥಿತಿಯ ಲ್ಲಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸರಕಾರಿ ಪ್ರೌಢಶಾಲೆಯ ಗೇಟ್‌ ಬಳಿ ಹರಿಯುವ ಸಣ್ಣ ತೋಡಿನಲ್ಲಿ ನೀರಿನ ಮಟ್ಟ ಏರಿಕೆಯಾಗಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಕೋಟಿಗೌಡನ ಮನೆ, ಮಾದನಮನೆ, ಕಡಿಂಬಿಲ ಬೈಲಿನ ಭಾಗಗಳಲ್ಲಿ ನೀರು ತೊಟಕ್ಕೆ ನುಗ್ಗಿ ಜಲಾವೃತಗೊಂಡಿತ್ತು. ಲಿಂಗಪ್ಪ ಗೌಡ ಮಲ್ಲಾರ ಅವರ ಮನೆಯ ಬಳಿಯ ಮೋರಿ ನೀರುಪಾಲಾಗಿದೆ.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

3

Bantwal: ಕೋಟೆಕಣಿ; ಸ್ಕೂಟರ್‌ ಬಿದ್ದು ಸಹಸವಾರ ಗಾಯ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

tanker

Bantwala; ಅಲ್ಲಿಪಾದೆ ಅಣೇಜ ತಿರುವಿನಲ್ಲಿ ಸಿಲುಕಿಕೊಂಡ ಕಂಟೈನರ್ ಲಾರಿ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.