ಪಂಚ ನದಿ ಯೋಜನೆಗೆ ಮೋದಿ ಚಾಲನೆ; 45 ವರ್ಷಗಳ ಬಳಿಕ ಪಶ್ಚಿಮ ಉ.ಪ್ರ.ದ ಪ್ರಮುಖ ಯೋಜನೆಗೆ ಚಾಲನೆ

ಸಹಜ ಕೃಷಿಯತ್ತ ಗಮನ ಹರಿಸಲು ಪ್ರಧಾನಿ ಸಲಹೆ

Team Udayavani, Dec 11, 2021, 10:45 PM IST

ಪಂಚ ನದಿ ಯೋಜನೆಗೆ ಮೋದಿ ಚಾಲನೆ; 45 ವರ್ಷಗಳ ಬಳಿಕ ಪಶ್ಚಿಮ ಉ.ಪ್ರ.ದ ಪ್ರಮುಖ ಯೋಜನೆಗೆ ಚಾಲನೆ

ಬಲರಾಮಪುರ (ಉ.ಪ್ರ): ಪಶ್ಚಿಮ ಉತ್ತರ ಪ್ರದೇಶದ ಒಂಭತ್ತು ಜಿಲ್ಲೆಗಳ 14 ಲಕ್ಷ ಪ್ರದೇಶಗಳಿಗೆ ನೀರಾವರಿ ಒದಗಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಘಾಘ್ರಾ, ಸರಯೂ, ರಫ್ತಿ, ಬಂಗಾಂಗಾ, ರೋಹಿಣಿ ಎಂಬ ಐದು ನದಿಗಳನ್ನು ಜೋಡಿಸಿ ನಿರ್ಮಿಸಲಾಗಿರುವ ಸರಯೂ ರಾಷ್ಟ್ರೀಯ ಕಾಲುವೆ ಯೋಜನೆ ಇದಾಗಿದೆ.

ಬಲರಾಮಪುರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ರೈತರು ಸಹಜ ಕೃಷಿ ನಡೆಸುವತ್ತ ಗಮನ ಹರಿಸಬೇಕು. ಇದರಿಂದಾಗಿ ನೀರಿನ ಬಳಕೆಯ ಪ್ರಮಾಣ ಕಡಿಮೆ ಮಾಡಬಹುದು ಮತ್ತು ಹೆಚ್ಚಿನ ಬೆಳೆ ತೆಗೆಯಲು ಅನುಕೂಲವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಈ ಯೋಜನೆಯಿಂದಾಗಿ 14 ಲಕ್ಷ ಹೆಕ್ಟೇರ್‌ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ ಎಂದು ಹೇಳಿದ್ದಾರೆ.

ಡಿ.16ರಂದು ಸಹಜ ಕೃಷಿ ಬಗ್ಗೆ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ರೈತರೆಲ್ಲರೂ ಕೃಷಿ ವಿಜ್ಞಾನ ಕೇಂದ್ರ ಅಥವಾ ಟಿವಿ ವಾಹಿನಿಗಳ ಮೂಲಕ ವೀಕ್ಷಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಮುಂದಿನ ವರ್ಷದ ಮೊದಲ ಭಾಗದಲ್ಲಿ ನಡೆಯವಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿಯವರ ಬಲರಾಮಪುರ ಭೇಟಿ ಮತ್ತು ಬಹುಕೋಟಿ ವೆಚ್ಚದ ಯೋಜನೆ ಲೋಕಾರ್ಪಣೆ ಮಹತ್ವ ಪಡೆದಿದೆ.

ಇದನ್ನೂ ಓದಿ:ಯಾವುದೇ ಕ್ರೀಡೆಯಲ್ಲಿ ಆಡುವಾಗ ಗೆಲ್ಲಲೆಂದೇ ಆಡಬೇಕು : ಮುಖ್ಯಮಂತ್ರಿ ಬೊಮ್ಮಾಯಿ

1976ರಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳುವ ಸಂದರ್ಭದಲ್ಲಿ ಅದರ ವೆಚ್ಚ 100 ಕೋಟಿ ರೂ.ಗಳಿಗಿಂತ ಕಡಿಮೆಯಾಗಿತ್ತು. ರಾಜಕೀಯ ಇಚ್ಛಾಶಕ್ತಿಯಿಂದ ಅನುಷ್ಠಾನಕ್ಕೆ ಹಿನ್ನಡೆಯಾಗಿದ್ದರಿಂದ 10 ಸಾವಿರ ಕೋಟಿ ರೂ. ವೆಚ್ಚ ಮಾಡುವಂಥ ಪರಿಸ್ಥಿತಿ ಬಂದೊದಗಿದೆ ಎಂದು ಪ್ರಧಾನಿ ಮೋದಿ ವಿಷಾದಿಸಿದ್ದಾರೆ.

ಯೋಜನೆಯ ಪಕ್ಷಿ ನೋಟ
14 ಲಕ್ಷ ಹೆಕ್ಟೇರ್‌- ಇಷ್ಟು ಪ್ರದೇಶಗಳಿಗೆ ನೀರಾವರಿ
29 ಲಕ್ಷ- ರೈತರಿಗೆ ಲಾಭ
09- ಇಷ್ಟು ಜಿಲ್ಲೆಗಳಿಗೆ ಲಾಭ- ಪೂರ್ವ ಉತ್ತರ ಪ್ರದೇಶದ ಬಹರ್ಚಿಯಾ, ಶ್ರಾವಸ್ತಿ, ಬಲರಾಮಪುರ, ಗೊಂಡಾ, ಸಿದ್ಧಾರ್ಥನಗರ, ಬಸ್ತಿ, ಸಂತ ಕಬೀರ್‌ನಗರ್‌, ಗೋರಖ್‌ಪುರ, ಮಹಾರಾಜ್‌ಗಂಜ್‌.
6, 200- ಇಷ್ಟು ಗ್ರಾಮಗಳ ವ್ಯಾಪ್ತಿ
1978- ಯೋಜನೆ ಸ್ಥಾಪನೆ ಮಾಡುವ ಬಗ್ಗೆ ಯೋಜಿಸಿದ್ದ ವರ್ಷ
2016- ಪ್ರಧಾನಮಂತ್ರಿ ಕೃಷಿ ಸಿಂಚಯೀ ಯೋಜನೆ ವ್ಯಾಪ್ತಿಗೆ ಸೇರ್ಪಡೆ
05- ಇಷ್ಟು ನದಿಗಳ ಜೋಡಣೆ -ಘಾಘ್ರಾ, ಸರಯೂ, ರಪ್ತಿ, ಬಂಗಾಂಗ, ರೋಹಿಣಿ
78.68 ಕೋಟಿ ರೂ.- ಆರಂಭದಲ್ಲಿ ಮೀಸಲಾಗಿ ಇರಿಸಿದ್ದ ಮೊತ್ತ
9,802 ಕೋಟಿ ರೂ.- ಯೋಜನೆಯ ಒಟ್ಟು ವೆಚ್ಚ
4,600 ಕೋಟಿ ರೂ.- ನಾಲ್ಕು ವರ್ಷಗಳ ಅವಧಿಯಲ್ಲಿ ಮಾಡಲಾಗಿರುವ ವೆಚ್ಚ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.