ನಿಸಾರ್ ಮೊದಲ ಕಾವ್ಯ ಗುರು…ಜನಮಾನಸದ ಕವಿ ಎಚ್.ಎಸ್. ವೆಂಕಟೇಶ್ ಮೂರ್ತಿ “ಬದುಕು-ಬರಹ”


Team Udayavani, Dec 4, 2019, 1:49 PM IST

HS-venkatesh

ಬೆಂಗಳೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನುಡಿ ಹಬ್ಬ ಈ ಬಾರಿ ಎಚ್.ಎಸ್. ವೆಂಕಟೇಶ್ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕವಿತೆ ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ ಮೊದಲಾದ ಪ್ರಕಾರಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ತಮ್ಮ ಕೊಡುಗೆಯನ್ನು ನೀಡಿದ್ದಾರೆ.

ಆಧುನಿಕ ಸಾಹಿತ್ಯದ ಕೃತಿಗಳನ್ನು ಸಾಹಿತ್ಯ ಪ್ರಿಯರಿಗೆ ಕೊಟ್ಟ ಮಹತ್ವದ ಲೇಖಕರಲ್ಲಿ ಎಚ್ ಎಸ್ ಕೂಡಾ ಒಬ್ಬರಾಗಿದ್ದಾರೆ. ಮಕ್ಕಳ, ಯುವ ಪೀಳಿಗೆಗೆ ಬೇಕಾದ ಗೀತೆಗಳನ್ನು ರಚಿಸಿ ಕವಿಯಾಗಿಯೂ ಗುರುತಿಸಿಕೊಂಡ ಹೆಗ್ಗಳಿಕೆ ಇವರದ್ದಾಗಿದೆ.

ಎಚ್ ಎಸ್ ಕಾವ್ಯ ಗುರು ನಿಸಾರ್ ಅಹಮದ್:

1944ರ ಜೂನ್ 23ರಂದು ಶಿವಮೊಗ್ಗ ಜಿಲ್ಲೆಯ ಹೊದಿಗ್ಗೆರೆ ಗ್ರಾಮದಲ್ಲಿ ಜನಿಸಿದ್ದರು. ಬಾಲ್ಯದ ಹೆಸರು ಶ್ರೀನಿವಾಸ ಎಂಬುದಾಗಿತ್ತು. ತಂದೆ ನಾರಾಯಣ ಭಟ್, ತಾಯಿ ನಾಗರತ್ನಮ್ಮ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು.

ನರಸಿಂಹ ಶಾಸ್ತ್ರಿಗಳು ವೆಂಕಟೇಶಮೂರ್ತಿಯವರಿಗೆ ಕುವೆಂಪು, ಬೇಂದ್ರೆ, ಗೊರೂರು, ಮಾಸ್ತಿ, ಕಾರಂತ ಮೊದಲಾದವರ ಕೃತಿಗಳನ್ನು ಪರಿಚಯಿಸಿದ್ದರು. ಹೀಗೆ ತಮ್ಮ ಚಿಂತನಾ ಕ್ರಮ ಬದಲಾಯಿಸಿಕೊಂಡ ಎಚ್ ಎಸ್ ಹೊಸ ಸಾಹಿತ್ಯ ಪ್ರಪಂಚಕ್ಕೆ ಪ್ರವೇಶಿಸಿದ್ದರು.

ಎಚ್ ಎಸ್ ತಮ್ಮ ಮೊದಲ ಕವನ ಸಂಕಲನ “ಪರಿವೃತ್ತ”ವನ್ನು ನರಸಿಂಹ ಶಾಸ್ತ್ರಿಗಳಿಗೆ ಅರ್ಪಿಸಿದ್ದಾರೆ. ಹೀಗೆ ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಅವರು ಎಚ್ ಎಸ್ ಅವರನ್ನು ಗಮನಿಸಿದ್ದ ನಂತರ ಅವರ ಒಡನಾಟ, ಪ್ರೋತ್ಸಾಹ ಮೂರ್ತಿಯವರಲ್ಲಿ ಹೊಸ ವಿಶ್ವಾಸ ಮೂಡಿಸಿತ್ತು. ನಿಸಾರ್ ತಮ್ಮ ಮೊದಲ ಕಾವ್ಯ ಗುರು ಎಂದು ಈಗಲೂ ನೆನಪಿಸಿಕೊಳ್ಳುತ್ತಾರೆ.

ಮೂರ್ತಿಯವರು ಮಲ್ಲಾಡಿಹಳ್ಳಿಯ ಶಾಲೆಯಲ್ಲಿ ಬಹುಬೇಗ ಜನಪ್ರಿಯರಾದರು. ಇಲ್ಲಿಯೇ ಅವರ ಸಾಹಿತ್ಯದ ಓದಿಗೂ, ರಚನೆಗೂ ಉತ್ತಮ ಪರಿಸರವಿತ್ತು. ಹಿರಿಯ ಅಧ್ಯಾಪಕರಾಗಿದ್ದ ಜಿಎಲ್ ರಾಮಪ್ಪನವರು ಕಥೆಗಾರ ಎನ್.ಎಸ್ ಚಿದಂಬರ ರಾವ್ ಅವರೂ ಗಂಭೀರ ಸಾಹಿತ್ಯ ಚರ್ಚೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಷ್ಟು ಅಧ್ಯಯನ ಶೀಲರಾಗಿದ್ದರು.

ಎಚ್ ಎಸ್ ವಿ ರಚಿಸುತ್ತಿದ್ದ ಕವನಗಳನ್ನು ಓದಿ ಅಧ್ಯಾಪಕರು ಪ್ರೋತ್ಸಾಹಿಸುತ್ತಿದ್ದರು. ತಾಯಿಯ ತವರು ಮನೆಯಲ್ಲಿ ನಡೆಯುತ್ತಿದ್ದ ಗಮಕವಾಚನ, ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಭಾವದಿಂದ ಕವನ ಬರೆಯಲು ಪ್ರೇರಣೆ ಎಂಬುದು ಎಚ್ ಎಸ್ ನೆನಪಿಸಿಕೊಂಡಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಪದವಿ, ಬೆಂಗಳೂರು ವಿವಿಯಿಂದ ಎಂಎ ಪದವಿ ಪಡೆದಿರುವ ಎಚ್ ಎಸ್ ವೆಂಕಟೇಶಮೂರ್ತಿಯವರು ಕನ್ನಡದಲ್ಲಿ ಕಥನ ಕವನಗಳು ಮಹಾಪ್ರಬಂಧ ಮಂಡಿಸಿ, ಪಿಎಚ್ ಡಿ ಪಡೆದಿದ್ದರು. ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.

ಬಿಡುವಿಲ್ಲದ ಬರವಣಿಗೆಯ ನಡುವೆಯೂ ಚಲನಚಿತ್ರ ಮತ್ತು ರಂಗಭೂಮಿ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ ಎಚ್.ಎಚ್ ಚಿನ್ನಾರಿ ಮುತ್ತ, ಕೊಟ್ರೇಶಿ ಕನಸು, ಕ್ರೌರ್ಯ, ಕೊಟ್ಟ, ಮತದಾನ ಸಿನಿಮಾಗಳಿಗೆ ಹಾಡುಗಳ ರಚನೆ, ಕೆಲವಕ್ಕೆ ಸಂಭಾಷಣೆ, ದೂರದರ್ಶನ ಧಾರಾವಾಹಿಗಳಾದ ಯಾವ ಜನ್ಮದ ಮೈತ್ರಿ, ಸವಿಗಾನ, ಮುಕ್ತಕ್ಕೆ ಶೀರ್ಷಿಕೆ ಗೀತೆ ಬರೆದಿದ್ದರು. ಅನಂತ ನಮನ, ತೂಗು ಮಂಚ, ಸುಳಿಮಿಂಚು, ಅಪೂರ್ವ ರತ್ನ, ಭಾವಭೃಂಗ-ಭಾವಗೀತೆಗಳ ಧ್ವನಿಸುರುಳಿಗಳು.

ಪ್ರಮುಖ ಕವನ ಸಂಕಲನಗಳು:

ಪರಿವೃತ್ತ, ಬಾಗಿಲು ಬಡಿವ ಜನಗಳು, ಮೊಖ್ತಾ, ಒಣ ಮರದ ಗಿಳಿಗಳು, ಮರೆತ ಸಾಲುಗಳು, ಸೌಗಂಧಿಕಾ, ಹರಿಗೋಲು, ವಿಸರ್ಗ, ಎಲೆಗಳು ನೂರಾರು, ಅಗ್ನಿಸ್ತಂಭ, ಎಷ್ಟೊಂದು ಮುಖ, ಮೂವತ್ತು ಮಳೆಗಾಲ

ಕಥಾ ಸಂಕಲನಗಳು:

ಬಾಣಸವಾಡಿಯ ಬೆಂಕಿ, ಪುಟ್ಟಾರಿಯ ಮತಾಂತರ

ಕಾದಂಬರಿಗಳು:

ತಾಪಿ, ಅಮಾನುಷರು, ಕದಿರನ ಕೋಟೆ, ಅಗ್ನಿಮುಖಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.