Polali: ಪೊಳಲಿ ಜಯರಾಮ ಭಟ್ ಅಂತ್ಯಕ್ರಿಯೆ
Team Udayavani, Aug 10, 2023, 11:24 PM IST
ಮಂಗಳೂರು: ಬುಧವಾರ ನಿಧನಹೊಂದಿದ ಕರ್ಣಾಟಕ ಬ್ಯಾಂಕ್ನ ಮಾಜಿ ಅಧ್ಯಕ್ಷ ಪೊಳಲಿ ಜಯರಾಮ ಭಟ್ ಅವರ ಅಂತ್ಯಕ್ರಿಯೆ ಕದ್ರಿಯ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ಮಧ್ಯಾಹ್ನ ನೆರವೇರಿತು.
ಇದಕ್ಕೂ ಮುನ್ನ ಎ.ಜೆ. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನೂರಾರು ಮಂದಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು. ಬಳಿಕ ಕದ್ರಿಯಲ್ಲಿರುವ ಅವರ ಮನೆಗೆ ಪಾರ್ಥಿವ ಶರೀರವನ್ನು ತಂದು ವೈದಿಕ ವಿಧಿಗಳನ್ನು ಪೂರೈಸಿ ಕದ್ರಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.
ಜಯರಾಮ್ ಭಟ್ ಅವರ ಪತ್ನಿ ಶುಭಾ ಭಟ್, ಪುತ್ರ ಚೇತನ್, ಪುತ್ರಿ ಚೈತ್ರಾ, ಅಳಿಯ ಅಮಿತ್ ಸಹಿತ ಕುಟುಂಬಿಕರು ಹಾಜರಿದ್ದರು.
ಶಾಸಕ ವೇದವ್ಯಾಸ ಕಾಮತ್, ಮಾಜಿ ಸದಸ್ಯರಾದ ಜೆ.ಆರ್. ಲೋಬೋ, ಐವನ್ ಡಿ’ಸೋಜಾ, ಕರ್ಣಾಟಕ ಬ್ಯಾಂಕ್ನ ಅಧ್ಯಕ್ಷ ಪ್ರದೀಪ್ ಕುಮಾರ್ ಪಂಜ, ಎಕ್ಸಿಕ್ಯೂಟಿವ್ ಡೈರೆಕ್ಟರ್ ಶೇಖರ್, ನಿಕಟಪೂರ್ವ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್., ಪ್ರಮುಖರಾದ ಕಟೀಲು ಅನಂತ ಆಸ್ರಣ್ಣ, ಶರವು ರಾಘವೇಂದ್ರ ಶಾಸ್ತ್ರಿ, ಕಲ್ಲಡ್ಕ ಪ್ರಭಾಕರ ಭಟ್, ಎ. ರಾಘವೇಂದ್ರ ರಾವ್, ಆರೂರು ಕಿಶೋರ್ ರಾವ್, ಹರಿಕೃಷ್ಣ ಪುನರೂರು, ಡಾ| ಎ.ಜೆ. ಶೆಟ್ಟಿ, ಡಾ| ಎಂ.ಬಿ. ಪುರಾಣಿಕ್, ಡಾ| ಎಂ. ಶಾಂತಾರಾಮ ಶೆಟ್ಟಿ, ಶ್ರೀನಾಥ ಹೆಬ್ಟಾರ್ ಸಹಿತ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಟಿ. ಸತೀಶ್ ಯು. ಪೈ ಸಂತಾಪ
ಜಯರಾಮ ಭಟ್ ನಿಧನಕ್ಕೆ ಎಂಎಂಎನ್ಎಲ್ ಎಕ್ಸಿಕ್ಯೂಟಿವ್ ಚೇರ್ಮನ್ ಟಿ. ಸತೀಶ್ ಯು. ಪೈ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.