![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 26, 2023, 9:21 PM IST
ನವದೆಹಲಿ: ಅಯೋಧ್ಯೆ ರಾಮಮಂದಿರದ ನೆಲಮಹಡಿ ನಿರ್ಮಾಣ ಕಾರ್ಯವು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ಶ್ರೀರಾಮಚಂದ್ರ ಪ್ರಭುವಿನ ಮೂರ್ತಿಯ ಪ್ರಾಣ ಪ್ರತಿಷ್ಠೆ ಕಾರ್ಯವು ಮುಂದಿನ ವರ್ಷ ಜ.22ರಂದು ನಡೆಯುವ ಸಾಧ್ಯತೆ ಇದೆ ಎಂದು ಅಯೋಧ್ಯೆ ರಾಮಮಂದಿರ ದೇಗುಲ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಮುಂದಿನ ವರ್ಷ ಜ.20ರಿಂದ 24ರ ನಡುವೆ ನಡೆಯುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಒಂದು ದಿನ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ಧಾರೆ. ಈ ಕುರಿತ ದಿನಾಂಕವನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವು ಅಂತಿಮಗೊಳಿಸಲಿದೆ’ ಎಂದು ಹೇಳಿದ್ಧಾರೆ.
ಬೆಂಗಳೂರಿನಲ್ಲಿ ವಿಶಿಷ್ಟ ಉಪಕರಣದ ವಿನ್ಯಾಸ
“ಮಂದಿರದ ಗೋಪುರದಲ್ಲಿ ಅಳವಡಿಸಬೇಕಿರುವ ವಿಶಿಷ್ಟ ಉಪಕರಣದ ವಿನ್ಯಾಸ ಕಾರ್ಯವು ಬೆಂಗಳೂರಿನಲ್ಲಿ ನಡೆಯುತ್ತಿದೆ. ಪ್ರತಿ ವರ್ಷ ಶ್ರೀರಾಮನವಮಿಯ ದಿನದಂದು ಶ್ರೀರಾಮನ ಹಣೆಗೆ ಸೂರ್ಯನ ಕಿರಣಗಳು ನೇರವಾಗಿ ಬೀಳುವಂತೆ ಮಾಡಲು ಈ ಉಪಕರಣ ಸಹಕಾರಿಯಾಗಿದೆ. ಇದಕ್ಕಾಗಿ ರೂರ್ಕಿಯ ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಸ್ಟಿಟ್ಯೂಟ್ ಮತ್ತು ಪುಣೆಯ ಒಂದು ಸಂಸ್ಥೆ ಜಂಟಿಯಾಗಿ ಕಂಪ್ಯೂಟರೈಸ್ಡ್ ಪ್ರೋಗ್ರಾಂ ಅನ್ನು ರಚಿಸಿದೆ’ ಎಂದು ನೃಪೇಂದ್ರ ಮಿಶ್ರಾ ಮಾಹಿತಿ ನೀಡಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.