China ದ ಷಡ್ಯಂತ್ರಕ್ಕೆ ಭಾರತದಿಂದ ನಿಷೇಧ ಅಸ್ತ್ರ


Team Udayavani, Aug 9, 2023, 11:30 PM IST

china flag

ದೇಶದ ಸೇನಾಪಡೆಗಳಿಗೆಂದೇ ತಯಾರಿಸಲಾಗುವ ಡ್ರೋನ್‌ಗಳಲ್ಲಿ ಚೀನದ ಬಿಡಿಭಾಗಗಳ ಬಳಕೆಯನ್ನು ನಿಷೇಧಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಭದ್ರತ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಸರಕಾರ ಈ ಆದೇಶ ಹೊರಡಿಸಿದ್ದು ತತ್‌ಕ್ಷಣದಿಂದಲೇ ಜಾರಿಗೆ ಬಂದಿದೆ.

ಗಡಿಯಲ್ಲಿ ನಿರಂತರವಾಗಿ ಸುಖಾಸುಮ್ಮನೆ ಕ್ಯಾತೆ ತೆಗೆಯುತ್ತಲೇ ಬಂದಿರುವ ಚೀನ ಸೇನೆ ಭಾರತದ ವಿರುದ್ಧ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಕತ್ತಿ ಮಸೆಯುತ್ತಲೇ ಬಂದಿದೆ. ಭಾರತದ ಕಾರ್ಯತಂತ್ರ, ಗೂಢಚರ್ಯೆ ಸಹಿತ ರಕ್ಷಣ ಸಾಮರ್ಥ್ಯದ ಮಾಹಿತಿಗಳನ್ನು ಒಂದಲ್ಲ ಒಂದು ತೆರನಾಗಿ ಕಲೆಹಾಕಲು ಚೀನ ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ದೇಶದ ಸೇನಾಪಡೆಗಳಿಗಾಗಿ ತಯಾರಿಸಲಾಗುವ ಡ್ರೋನ್‌ಗಳಲ್ಲಿ ಚೀನದಿಂದ ಆಮದು ಮಾಡಿಕೊಳ್ಳಲಾದ ಬಿಡಿಭಾಗಗಳನ್ನು ಬಳಸದಿರುವಂತೆ ಡ್ರೋನ್‌ ತಯಾರಿಕ ಕಂಪೆನಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ.

ಸೇನಾ ಡ್ರೋನ್‌ಗಳಲ್ಲಿ ಚೀನದ ಬಿಡಿಭಾಗಗಳನ್ನು ಬಳಸಿದಲ್ಲಿ ದೇಶದ ಪ್ರಮುಖ ಸೇನಾನೆಲೆ, ಗಡಿಯಲ್ಲಿ ಸೇನಾ ನಿಯೋಜನೆ ಆದಿಯಾಗಿ ದೇಶದ ಭದ್ರತೆಗೆ ಸಂಬಂಧಿಸಿದ ವ್ಯೂಹಾತ್ಮಕ ಕಾರ್ಯತಂತ್ರಗಳ ಸಹಿತ ಸೂಕ್ಷ್ಮವಿಚಾರಗಳು ಸೋರಿಕೆಯಾಗಿ, ಚೀನ ಈ ಮಾಹಿತಿಗಳನ್ನು ದುರುಪ ಯೋಗಪಡಿಸಿಕೊಳ್ಳುವ ಸಾಧ್ಯತೆಗಳಿವೆ. ಇವೆಲ್ಲದರ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ವಾಸ್ತವಿಕ ಗಡಿ ನಿಯಂತ್ರಣ ರೇಖೆ ಮತ್ತು ಅರುಣಾಚಲ ಪ್ರದೇಶ ವಿಚಾರದಲ್ಲಿ ಪದೇಪದೆ ತಕರಾರು ತೆಗೆಯುವ ಮೂಲಕ ಚೀನ, ಭಾರತದ ಮೇಲೆ ತನ್ನ ದಬ್ಟಾಳಿಕೆಯನ್ನು ಪ್ರದರ್ಶಿಸುವ ಪ್ರಯತ್ನ ನಡೆಸುತ್ತಲೇ ಬಂದಿದೆ. 2020ರ ಜೂನ್‌ನಲ್ಲಿ ಚೀನ ಸೇನೆ ಮತ್ತು ಭಾರತೀಯ ಸೇನೆ ನಡುವೆ ಎಲ್‌ಒಸಿಯ ಗಾಲ್ವಾನ್‌ನಲ್ಲಿ ಸಂಘರ್ಷ ಸಂಭವಿಸಿದ ಬಳಿಕ ಕೇಂದ್ರ ಸರಕಾರ ಚೀನದ ವಿರುದ್ಧ ಕಠಿನ ನಿಲುವನ್ನು ತಾಳಿದೆ. ಗಡಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತನ್ನ ಪಡೆಗಳನ್ನು ನಿಯೋಜಿಸುವುದರ ಜತೆಯಲ್ಲಿ ಗಡಿಭಾಗದ ತನ್ನ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಿದೆ. ಅಷ್ಟು ಮಾತ್ರವಲ್ಲದೆ ಭಾರತೀಯ ಯೋಧರ ಸುರಕ್ಷೆಗೂ ಹೆಚ್ಚಿನ ಆದ್ಯತೆ ನೀಡಿದೆ.

ಇದೇ ವೇಳೆ ಭಾರತ ಸರಕಾರ, ಚೀನದೊಂದಿಗಿನ ವಾಣಿಜ್ಯ ಚಟು ವಟಿಕೆಗಳ ಮೇಲೂ ಕೆಲವು ನಿರ್ಬಂಧ, ನಿಯಂತ್ರಣಗಳನ್ನು ಹೇರುವ ಮೂಲಕ ಆರ್ಥಿಕವಾಗಿ ಆ ದೇಶಕ್ಕೆ ಹೊಡೆತ ನೀಡಿದೆ. ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಸರಕಾರ ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌, ಪರ್ಸನಲ್‌ ಕಂಪ್ಯೂಟರ್‌ನಂತಹ ಎಲೆಕ್ಟ್ರಾನಿಕ್‌ ಸಾಧನಗಳ ಆಮದಿಗೆ ನಿಷೇಧ ಹೇರಿತ್ತಾದರೂ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇವುಗಳ ಲಭ್ಯತೆ ಇಲ್ಲದಿರುವುದರಿಂದ ತನ್ನ ಈ ಕಠಿನ ನಿಲುವನ್ನು ಕೊಂಚ ಸಡಿಲಿಸಿ ಷರತ್ತುಬದ್ಧ ಆಮದಿಗೆ ತನ್ನ ಒಪ್ಪಿಗೆ ಸೂಚಿಸಿತ್ತು. ಈ ಸಾಧನಗಳ ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಭದ್ರತಾ ಕಾರಣಗಳಿಗಾಗಿಯೇ ಕೇಂದ್ರ ಸರಕಾರ ಈ ನಿರ್ಧಾರವನ್ನು ಕೈಗೊಂಡಿತ್ತು.

ಚೀನದಿಂದಲೇ ಹೆಚ್ಚಿನ ಪ್ರಮಾಣದಲ್ಲಿ ಈ ಎಲೆಕ್ಟ್ರಾನಿಕ್‌ ಸಾಧನಗಳು ಆಮದಾ ಗುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರಕಾರ ಇಂತಹ ನಿರ್ಧಾರವನ್ನು ಕೈಗೊಂಡಿತ್ತು.

ಭಾರತದ ವಿರುದ್ಧದ ತನ್ನ ಷಡ್ಯಂತ್ರದ ಭಾಗವಾಗಿ ಭಾರತದಲ್ಲಿನ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆಗೆ, ಪ್ರತ್ಯೇಕತಾವಾದ ಹೋರಾ ಟಗಳಿಗೆ ಹಣಕಾಸು ನೆರವು ನೀಡುವ ಕಾರ್ಯದಲ್ಲೂ ಚೀನ ನಿರತವಾಗಿದೆ. ಚೀನದ ಈ ಎಲ್ಲ ಕುಟಿಲ ರಣತಂತ್ರಗಳನ್ನು ಭೇದಿಸಿ, ಸೂಕ್ತ ಪ್ರತ್ಯುತ್ತರವನ್ನು ನೀಡುವಲ್ಲಿ ಭಾರತ ಯಶಸ್ವಿಯಾಗಿದೆ. ಅಷ್ಟು ಮಾತ್ರವಲ್ಲದೆ ಚೀನದ ಉತ್ಪನ್ನಗಳ ಆಮದಿಗೆ ನಿರ್ಬಂಧಗಳನ್ನು ಹೇರುವ ಮೂಲಕ ಅದರ ಆರ್ಥಿಕತೆಗೆ ಹೊಡೆತ ನೀಡುವ ಚಾಣಾಕ್ಷ ನಡೆಯನ್ನು ಭಾರತ ಅನುಸರಿಸುತ್ತ ಬಂದಿದೆ.

 

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.