![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 12, 2021, 2:23 PM IST
ರಾಯಚೂರು: ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಶೌಚಗೃಹ ನಿರ್ಮಾಣಕ್ಕೆ ಹಣ ಮಂಜೂರಾಗಿ ನಾಲ್ಕು ವರ್ಷ ಕಳೆದರೂ ಯಾಕೆ ಶೌಚಗೃಹ ನಿರ್ಮಿಸಿಲ್ಲ. ಜನರಿಗೆ ನಾವು ಹೇಗೆ ಮುಖ ತೋರಿಸಬೇಕು ಎಂದು ಆರೋಪಿಸಿ ಜಿಪಂ ಕೆಡಿಪಿ ಸಭೆಯಲ್ಲಿ ಸದಸ್ಯರಿಬ್ಬರು ಬಾವಿಗಿಳಿದು ಧರಣಿ ನಡೆಸಿದ ಪ್ರಸಂಗ ನಡೆಯಿತು.
ಇಷ್ಟು ವರ್ಷ ಕೆಲಸ ಮಾಡದೆ ಈಗ ಗ್ರಾಪಂಗೆ ವಹಿಸಲು ಮುಂದಾಗಿರುವುದಕ್ಕೆ ಸದಸ್ಯರಾದ ಕೇಶವರೆಡ್ಡಿ, ಶಿವಜ್ಯೋತಿ ಆಕ್ರೋಶ ವ್ಯಕ್ತಪಡಿಸಿದರು. ಈ ನಡುವೆ ಅಧಿಕಾರಿಗಳ ಬೇಜವಾಬ್ದಾರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ ಕೂಡ ಗರಂ ಆದರು.
ಮಹಿಳಾ ಇಲಾಖೆ ಉಪ ನಿರ್ದೇಶಕ ವೀರಣಗೌಡ ಅವರನ್ನು ತರಾಟೆಗೆ ತೆಗೆದುಕೊಂಡು, 120 ಅಂಗನವಾಡಿ ಕೇಂದ್ರಗಳಿಗೆ ಶೌಚಗೃಹ ನಿರ್ಮಾಣಕ್ಕೆ ಹಣ ಬಿಡುಗಡೆ ಆಗಿದೆ. ಕಾಮಗಾರಿ ಮಾಡಬೇಕಿದ್ದ ಕ್ಯಾಶುಟಿಕ್ ಏಜೆನ್ಸಿ ಬೇಜವಾಬ್ದಾರಿ ವಹಿಸಿದ್ದಕ್ಕೆ ಸದಸ್ಯರು ಕೋಪಗೊಂಡಿದ್ದಾರೆ. 2016-17 ನೇ ಸಾಲಿನಲ್ಲಿ ಅನುದಾನ ಬಿಡುಗಡೆ ಆಗಿದ್ದು, ನಾಲ್ಕು ವರ್ಷದಿಂದ ಖಜಾನೆಯಲ್ಲಿಯೇ ಅನುದಾನ ಕೊಳೆಯುತ್ತಿದೆ. ನಿಮ್ಮ ವಿರುದ್ಧ ಯಾಕೆ ಕ್ರಮ ಜರುಗಿಸಬಾರದು ಎಂದರು. ಕೊನೆಗೆ ಸಿಇಒ ಸದಸ್ಯರ ಮನವೊಲಿಸಿ ಸಭೆ ಮುಂದುವರಿಸಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.