ಶೆಟ್ಟರ ಮನೆಯೆದುರು ಮುತಾಲಿಕ ಪ್ರತಿಭಟನೆ

ಪ್ರಾರ್ಥನಾ ಮಂದಿರಗಳ ಮೈಕ್‌ಗಳಿಂದ ಶಬ್ದ ಮಾಲಿನ್ಯ ; ಮೈಕ್‌ ತೆರವುಗೊಳಿಸುವಲ್ಲಿ ಬಿಜೆಪಿ ಸರಕಾರ ವಿಫಲ

Team Udayavani, Jun 9, 2022, 9:55 AM IST

2

ಹುಬ್ಬಳ್ಳಿ: ಪ್ರಾರ್ಥನಾ ಮಂದಿರಗಳ ಮೈಕ್‌ಗಳಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದ್ದು, ಅದರಲ್ಲೂ ಆಜಾನ್‌ ಗೆ ಬಳಸುವ ಮೈಕ್‌ ಸಾಕಷ್ಟು ಸಮಸ್ಯೆ ಉಂಟು ಮಾಡುತ್ತಿದ್ದು, ಇವುಗಳನ್ನು ತೆರವುಗೊಳಿಸುವಲ್ಲಿ ಬಿಜೆಪಿ ಸರಕಾರ ವಿಫಲವಾಗಿ ಎಂದು ಆರೋಪಿಸಿ ಇಲ್ಲಿನ ಬದಾಮಿ ನಗರದಲ್ಲಿರುವ ಮಾಜಿ ಸಿಎಂ ಜಗದೀಶ ಶೆಟ್ಟರ ನಿವಾಸ ಮುಂಭಾಗದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಶಬ್ದ ಮಾಲಿನ್ಯ ಉಂಟು ಮಾಡುವ ಮೈಕ್‌ಗಳನ್ನು ತೆರವುಗೊಳಿಸುವಂತೆ ಸುಪ್ರಿಂ ಕೋರ್ಟ್‌ ಸ್ಪಷ್ಟ ಆದೇಶ ನೀಡಿದೆ. ಆದರೆ ಸರಕಾರಗಳನ್ನು ಇದನ್ನು ಅನುಷ್ಠಾನಕ್ಕೆ ತರುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿವೆ. ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರ ಕೂಡ ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಈ ಕುರಿತು ಹಲವು ಬಾರಿ ಎಚ್ಚರಿಸುವ, ಹೋರಾಟಗಳನ್ನು ಮಾಡಿದರೂ ಪ್ರಯೋಜನವಾಗಿಲ್ಲ. ಕೇವಲ ಅಧಿಕಾರಕ್ಕಾಗಿ ಮಾತ್ರ ಹಿಂದುತ್ವದ ಅಜೆಂಡಾ ಬಿಜೆಪಿ ಅನುಸರಿಸುತ್ತಿದೆ ಎಂದು ಆರೋಪಿಸಲಾಯಿತು.

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಮಾತನಾಡಿ, ಬಿಜೆಪಿ ಶಾಸಕರು ಕೇವಲ ಅಧಿಕಾರಕ್ಕಾಗಿ ಮಾತ್ರ ಹಿಂದುತ್ವದ ಹೆಸರು ಬಳಸಿದ್ದಾರೆ ಎನ್ನುವುದು ಜನರಲ್ಲಿ ಖಾತ್ರಿಯಾಗಿದೆ. ಚುನಾವಣೆ ಪೂರ್ವದಲ್ಲಿ ಹಿಂದುತ್ವದ ಕೆಲಸ ಮಾಡುವುದಾಗಿ ನಂಬಿಸಿ ಅಧಿಕಾರಕ್ಕೆ ಬಂದ ನಂತರ ವಂಚಿಸುವ ಕೆಲಸ ಆಗಿದೆ. ಕಾಟಾಚಾರಕ್ಕೆಂಬಂತೆ ಸರಕಾರ ನೋಟಿಸ್‌ ಜಾರಿ ಮಾಡಿದೆ. ಆದರೆ ಬೆಳಿಗ್ಗೆ 5 ಗಂಟೆಯ ಆಜಾನ್‌ ನಿಲ್ಲಿಸಿಲ್ಲ. ಇದನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಈ ಕುರಿತು ಹಿಂದೂಗಳು ನಿರಂತರ ಹೋರಾಟ ಮಾಡುತ್ತಿದ್ದರೂ ಬಿಜೆಪಿ ಶಾಸಕರು ಮಾತ್ರ ಯಾವುದೇ ಧ್ವನಿ ಎತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಹಿಂದೂಪರ ಸಂಘಟನೆಗಳ ಹೋರಾಟ, ಪರಿಶ್ರಮ ದೊಡ್ಡದು. ಅದರೆ ಅಧಿಕಾರಕ್ಕೆ ಬಂದ ನಂತರ ಎಲ್ಲವನ್ನೂ ಮರೆತಿದ್ದಾರೆ. ಹೋರಾಟ, ಪ್ರತಿಭಟನೆ ಮಾಡಿ ಕೇಸ್‌ ಹಾಕಿಸಿಕೊಂಡು ಕೋರ್ಟ್‌ಗಳಿಗೆ ನಾವು ಅಲೆದಾಡಬೇಕು. ಇವರು ಅಧಿಕಾರ ಪಡೆದು ಐಷಾರಾಮಿ ಜೀವನದಲ್ಲಿ ನೀಡಿದ ಭರವಸೆಗಳು, ಮಾಡಬೇಕಾದ ಕಾರ್ಯಗಳನ್ನು ಮರೆತು ಅಧಿಕಾರ ಅನುಭವಿಸುತ್ತಿದ್ದಾರೆ. ಇದನ್ನು ಎಚ್ಚರಿಸುವ ನಿಟ್ಟಿನಲ್ಲಿ ವಿವಿಧ 10 ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಶಾಸಕರ ಕಚೇರಿ ಮುಂಭಾಗದಲ್ಲಿಯೇ ಹೋರಾಟ ಹಮ್ಮಿಕೊಳ್ಳಲಾಗಿದೆ. ಸುಪ್ರಿಂ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರಕಾರ ನಿರ್ಲಕ್ಷ್ಯ ತೋರಿದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಗೆ ತಕ್ಕ ಉತ್ತರ ನೀಡಲಾಗುವುದು. ಮುಂದೆ ಬಿಜೆಪಿ ಎಲ್ಲಾ ಶಾಸಕರ ಮನೆ ಮುಂಭಾಗ ಲೌಡ್‌ಸ್ಪೀಕರ್ ಅಳವಡಿಸಿ ಭಜನೆ ಮಾಡಲಾಗುವುದು ಎಂದು ಪ್ರಮೋದ ಮುತಾಲಿಕ ಎಚ್ಚರಿಸಿದರು‌.

ಪ್ರಮುಖರಾದ ಅಣ್ಣಪ್ಪ ದಿವಟಗಿ, ಬಸವರಾಜ ದುರಗದ, ಮಂಜುನಾಥ ಕಾಟ್ಕರ, ಪ್ರವೀಣ, ರಾಜು, ಮಹಾಂತೇಶ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.